ಕನ್ನಡಪ್ರಭ ವಾರ್ತೆ ಉಪ್ಪಿನಂಗಡಿ/ಬಂಟ್ವಾಳ
34 ನೆಕ್ಕಿಲಾಡಿ ಗ್ರಾಮದ ಕರ್ವೇಲ್ನಲ್ಲಿ ಶಾಲಾ ಮಕ್ಕಳಿಗೆ ಅನುಕೂಲವಾಗುವಂತೆ ಕರ್ವೇಲ್ ಜಂಕ್ಷನ್ ಬಳಿ ಫೂಟ್ ಬ್ರಿಡ್ಜ್ ನಿರ್ಮಾಣ ಮಾಡುವಂತೆ ಹಾಗೂ ಅಲ್ಲಿಯೇ ಶಾಂತಿನಗರದ ಮೂಲಕ ಪುತ್ತೂರಿಗೆ ಹೋಗುವ ಹಾಗೆ ಅನುಕೂಲವಾಗುವಂತೆ ಹೆದ್ದಾರಿ ಕ್ರಾಸಿಂಗ್ ನೀಡಲು ಹೆದ್ದಾರಿ ಇಲಾಖೆಯ ಯೋಜನಾ ನಿರ್ದೇಶಕರಿಗೆ ಸೂಚಿಸಿದರು.
34 ನೆಕ್ಕಿಲಾಡಿಯಲ್ಲಿ ಈಗ ರಾಷ್ಟ್ರೀಯ ಹೆದ್ದಾರಿಯಿಂದ ಪುತ್ತೂರು ಹೆದ್ದಾರಿಗೆ ಕವಲೊಡೆಯುವ ಜಾಗದಲ್ಲಿ ಮುಂದಕ್ಕೆ ಹೆದ್ದಾರಿ ನಿರ್ಮಾಣವಾಗುವುದರಿಂದ ರಸ್ತೆ ದಾಟಲು ಸಮಸ್ಯೆಯಾಗುವ ಕುರಿತು ಸ್ಥಳೀಯರ ಆತಂಕಕ್ಕೆ ಸ್ಪಷ್ಟನೆ ನೀಡಿದ ಹೆದ್ದಾರಿ ಇಲಾಖೆಯ ಯೋಜನಾ ನಿರ್ದೇಶಕರು, ಇಲ್ಲಿಂದ ಪುತ್ತೂರು ರಸ್ತೆಗೆ ಹೋಗಲು ಹೆದ್ದಾರಿ ನಿರ್ಮಾಣದ ಬಳಿಕ ಅವಕಾಶವಿಲ್ಲ. ಇಲ್ಲಿಂದ ಸ್ವಲ್ಪ ಮುಂದಕ್ಕೆ ಇರುವ ಅಂಡರ್ಪಾಸ್ನ ಮೂಲಕ ಪುತ್ತೂರು ರಸ್ತೆಗೆ ಸಂಪರ್ಕ ಕಲ್ಪಿಸಲಾಗುತ್ತದೆ. ಅಲ್ಲಿಂದ ನೇರಕ್ಕೆ ಪಿಡಬ್ಲೂಡಿಯವರು ಹೆದ್ದಾರಿಯನ್ನು ನಿರ್ಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.ಸಹಾಯಕ ಕಮಿಷನರ್ ಜುಬಿನ್ ಮಹಾಪಾತ್ರ, ತಹಸೀಲ್ದಾರ್ ಪುರಂದರ ಹೆಗ್ಡೆ, ಉಪ್ಪಿನಂಗಡಿ ಕಂದಾಯ ಹೋಬಳಿಯ ಉಪತಹಸೀಈಲ್ದಾರ್ ಚೆನ್ನಪ್ಪ ಗೌಡ, ಕಂದಾಯಾಧಿಕಾರಿ ಚಂದ್ರ ನಾಯ್ಕ, 34 ನೆಕ್ಕಿಲಾಡಿ ಗ್ರಾ.ಪಂ. ವಿಎ ಜಂಗಪ್ಪ, ಉಪ್ಪಿನಂಗಡಿ ಗ್ರಾ.ಪಂ. ನರಿಯಪ್ಪ, ಪುತ್ತೂರು ವಲಯ ಅರಣ್ಯಾಧಿಕಾರಿ ಕಿರಣ್, ಉಪ್ಪಿನಂಗಡಿ ಅರಣ್ಯಾಧಿಕಾರಿ ಗಿರೀಶ್, 34 ನೆಕ್ಕಿಲಾಡಿ ಗ್ರಾ.ಪಂ. ಪಿಡಿಒ ಸತೀಶ್ ಡಿ. ಬಂಗೇರ, ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್, ಉಪ್ಪಿನಂಗಡಿ ಪೊಲೀಸ್ ಉಪ ನಿರೀಕ್ಷಕ ಅವಿನಾಶ್, ಹೆದ್ದಾರಿ ಇಲಾಖೆಯ ಎಂಜಿನಿಯರ್ಗಳು, ಗುತ್ತಿಗೆದಾರ ಸಂಸ್ಥೆಯ ಎಂಜಿನಿಯರ್ಗಳು ಇದ್ದರು.
ಮೆಲ್ಕಾರ್ನಲ್ಲಿ ಗುಡ್ಡವನ್ನು ಅಗೆದ ಪರಿಣಾಮವಾಗಿ ಕೆಲವೊಂದು ಮನೆಗಳಿಗೆ ಹಾನಿಯಾಗುವ ಸಂಭವವು ಇರುವ ಬಗ್ಗೆ ಮತ್ತು ಕೆಲವು ಮನೆಗಳಿಗೆ ಸಂಪರ್ಕ ರಸ್ತೆ ಕಡಿತಗೊಂಡ ಹಿನ್ನೆಲೆಯಲ್ಲಿ ಅವರಿಗೆ ಸೂಕ್ತವಾದ ಬದಲಿ ವ್ಯವಸ್ಥೆ ಮಾಡಿಕೊಡುವ ಬಗ್ಗೆ ಚಿಂತನೆ ನಡೆಸುವ ಕುರಿತು ವಿಷಯ ಪ್ರಸ್ತಾಪ ಮಾಡಲಾಯಿತು. ಈ ಸಂದರ್ಭ, ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದರು. ಕಲ್ಲಡ್ಕದಲ್ಲಿ ರಸ್ತೆ ಕಾಮಗಾರಿಯ ವೇಳೆ ದೂಳಿನ ಸಮಸ್ಯೆ ಉಂಟಾಗುತ್ತಿದ್ದು, ಸರಿಯಾಗಿ ನೀರು ಹಾಕುತ್ತಿಲ್ಲ ಎಂಬ ಬಗ್ಗೆ ಸಾರ್ವಜನಿಕರು ಗಮನ ಸೆಳೆದರು. ಈ ಸಂದರ್ಭದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು, ಇನ್ನು ಮುಂದೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ದೂರುಗಳು ಬರದ ರೀತಿಯಲ್ಲಿ ಸ್ಥಳೀಯ ಗ್ರಾ.ಪಂ. ರಸ್ತೆಗೆ ನೀರು ಹಾಕುವ ಜವಾಬ್ದಾರಿ ವಹಿಸಬೇಕು ಎಂದು ತಹಸೀಲ್ದಾರ್ಗೆ ತಿಳಿಸಿದರು.