ಅಂಜನಾದ್ರಿಗೆ ಡಿಸಿ ಭೇಟಿ: ಪೂಜೆ, ಆರತಿ ಮಾಡಲು ಅರ್ಚಕ ನಿರಾಕರಣೆ

KannadaprabhaNewsNetwork |  
Published : Jul 06, 2025, 11:48 PM IST
6ುಲು7 | Kannada Prabha

ಸಾರಾಂಶ

ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿ ಬಂದ ನಂತರ ಮೊದಲ ಬಾರಿಗೆ ಅಂಜನಾದ್ರಿ ಬೆಟ್ಟ ಏರಿ ಆಂಜನೇಯಸ್ವಾಮಿಗೆ ಪೂಜೆ ಸಲ್ಲಿಸಲು ಸುರೇಳ ಇಟ್ನಾಳ ಹೋಗಿದ್ದರು. ಈ ವೇಳೆ ದೇವಸ್ಥಾನದಲ್ಲಿದ್ದ ವಿದ್ಯಾದಾಸ ಬಾಬಾ ಪೂಜೆ ಮಾಡಲು ನಿರಾಕರಿಸಿದ್ದಾರೆ.

ಗಂಗಾವತಿ:

ತಾಲೂಕಿನ ಐತಿಹಾಸಿಕ ಪ್ರಸಿದ್ಧ ಆಂಜನೇಯ ಜನ್ಮಸ್ಥಳಕ್ಕೆ ಜಿಲ್ಲಾಧಿಕಾರಿ ಸುರೇಶ ಇಟ್ನಾಳ್ ಭೇಟಿ ನೀಡಿದ ವೇಳೆ ಪೂಜೆ, ಆರತಿ ಮಾಡಲು ಅರ್ಚಕ ವಿದ್ಯಾದಾಸ ಬಾಬಾ ನಿರಾಕರಿಸಿದ ಘಟನೆ ಭಾನುವಾರ ನಡೆದಿದೆ.

ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿ ಬಂದ ನಂತರ ಮೊದಲ ಬಾರಿಗೆ ಅಂಜನಾದ್ರಿ ಬೆಟ್ಟ ಏರಿ ಆಂಜನೇಯಸ್ವಾಮಿಗೆ ಪೂಜೆ ಸಲ್ಲಿಸಲು ಸುರೇಳ ಇಟ್ನಾಳ ಹೋಗಿದ್ದರು. ಈ ವೇಳೆ ದೇವಸ್ಥಾನದಲ್ಲಿದ್ದ ವಿದ್ಯಾದಾಸ ಬಾಬಾ ತಾವು ಪೂಜೆ ಮಾಡದೆ, ನೀವು ಮುಜರಾಯಿ ಇಲಾಖೆಯಿಂದ ನೇಮಕಗೊಂಡಿರುವ ಅರ್ಚಕರನ್ನು ಕರೆದುಕೊಂಡು ಬಂದಿದ್ದೀರಿ. ಅವರಿಂದ ಪೂಜೆ ಮಾಡಿಸಿ ಎಂದು ಹೇಳಿದರು. ಕೊನೆಗೆ ಇಲಾಖೆಯಿಂದ ನೇಮಕಗೊಂಡಿದ್ದ ಅರ್ಚಕರು ಜಿಲ್ಲಾಧಿಕಾರಿಗಳಿಂದ ಸಂಕಲ್ಪ ಮಾಡಿಸಿ ಪೂಜೆ ನೆರವೇರಿಸಿದರು. ಇತ್ತೀಚಿಗೆ ವಿದ್ಯಾದಾಸಾ ಬಾಬಾ ಅವರು ಆಂಜನೇಯಸ್ವಾಮಿ ಮುಂದೆ ಕಾಣಿಕೆ ಪೆಟ್ಟಿಗೆ ಇಟ್ಟಿರುವುದಕ್ಕೆ ಇಲಾಖೆ ಅಧಿಕಾರಿಗಳ ವಿರುದ್ಧ ಸಿಡಿಮಿಡಿಗೊಂಡಿದ್ದರು. ಅಲ್ಲದೇ ಈ ವಿಷಯವಾಗಿ ನ್ಯಾಯಾಂಗದ ಮೆಟ್ಟಿಲು ಏರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಚ್ಚೆತ್ತ ಬೆಂ.ವಿವಿ: ಲೋಪ ಸರಿಪಡಿಸಿ 400 ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ
ಕುದುರೆಗಳಲ್ಲಿ ಗ್ಲ್ಯಾಂಡರ್ಸ್ ರೋಗ ಪತ್ತೆ: ಟರ್ಫ್ ಕ್ಲಬ್‌ ಸುತ್ತ ಪ್ರಾಣಿ ಸಂಚಾರ ನಿರ್ಬಂಧ