ಕನ್ನಡಪ್ರಭ ವಾರ್ತೆ ಸಕಲೇಶಪುರ
ಬುಧವಾರ ರಾಷ್ಟ್ರೀಯ ಹೆದ್ದಾರಿ ೭೫ರ ಮಠಸಾಗರ, ಕೊಲ್ಲಹಳ್ಳಿ, ಆನೇಮಹಲ್, ದೋಣಿಗಾಲ್, ಕಪ್ಪಳ್ಳಿ ಹಾಗೂ ದೊಡ್ಡತಪ್ಲೆ ಗ್ರಾಮದಲ್ಲಿ ಹೆದ್ದಾರಿ ವೀಕ್ಷಣೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಈಗಾಗಲೇ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಿರುವುದರಿಂದ ಹೆದ್ದಾರಿಯ ಸಾಕಷ್ಟು ಭಾಗದಲ್ಲಿ ಭೂಕುಸಿತ ಸಂಭವಿಸುತ್ತಿದೆ. ಸದ್ಯ ಮಳೆಯಾಗುತ್ತಿರುವುದರಿಂದ ಕಾಮಗಾರಿ ಸ್ಥಗಿತಗೊಂಡಿದೆ. ಆದರೆ, ಸಂಭಾವ್ಯ ಅವಘಡ ಸಂಭವಿಸಬಹುದಾದ ಸ್ಥಳಗಳಲ್ಲಿ ಅಧಿಕಾರಿಗಳ ಪಡೆ ಸರ್ವ ಸನ್ನದ್ಧವಾಗಿರುವಂತೆ ಸೂಚನೆ ನೀಡಲಾಗಿದೆ ಎಂದರು.
ಆನೇಮಹಲ್ ಗ್ರಾಮದ ಅಡಾಣಿಗುಡ್ಡ ಪ್ರದೇಶದಲ್ಲಿರುವ ಜನರ ಸ್ಥಳಾಂತಕ್ಕೆ ಈಗಾಗಲೇ ಸೂಚನೆ ನೀಡಿದ್ದು, ಇಲ್ಲಿನ ಜನರಿಗೆ ಸೂಕ್ತ ಪರಿಹಾರ ನೀಡಲು ಅಂಕಿಅಂಶ ಸಿದ್ಧಪಡಿಸುವಂತೆ ಈಗಾಗಲೇ ಲೋಕೋಪಯೋಗಿ ಇಲಾಖೆಗೆ ಸೂಚನೆ ನೀಡಲಾಗಿದೆ. ಇವರು ವರದಿ ನೀಡಿದ ತಕ್ಷಣ ಇಲ್ಲಿನ ನಿವಾಸಿಗಳಿಗೆ ಪರಿಹಾರ ನೀಡಲಾಗುವುದು ಎಂದರು.ಬುಧವಾರ ತಾಲೂಕಿನಾದ್ಯಂತ ಆರಿಧ್ರ್ಯಾ ಮಳೆಯ ಅಬ್ಬರ ಮುಂದುವರಿದಿದ್ದು, ಗಾಳಿಯೊಂದಿಗೆ ಮಳೆಯು ಸುರಿಯುತ್ತಿರುವುರಿಂದ ತಾಲೂಕಿನ ಇಡಿ ಗ್ರಾಮೀಣ ಭಾಗ ಸ್ತಬ್ಧಗೊಂಡಿದ್ದು ವೇಗವಾಗಿ ಬೀಸುತ್ತಿರುವ ಗಾಳಿಯಿಂದಾಗಿ ತಾಲೂಕಿನ ಶೇ. ೭೦ರಷ್ಟು ಗ್ರಾಮಗಳಲ್ಲಿ ವಿದ್ಯುತ್ ಕೈಕೊಟ್ಟಿದೆ. ಕಳೆದ ನಾಲ್ಕು ದಿನಗಳಿಂದ ಜನರು ಕತ್ತಲಲ್ಲೇ ಬದುಕು ನಡೆಸವಂತಾಗಿದೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ ತಾಲೂಕಿನ ಜೀವನದಿ ಹೇಮಾವತಿಯಲ್ಲಿ ಏಳು ಅಡಿಯಷ್ಟು ನೀರು ಹರಿಯುತ್ತಿದ್ದರೆ ತಾಲೂಕಿನ ಪ್ರಮುಖ ಐದು ಉಪನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇದಲ್ಲದೆ ಹೆದ್ದಾರಿ ಬದಿಯ ಹಲವೆಡೆ ತಡೆಗೋಡೆ ಹಾಗೂ ಭೂಕುಸಿತ ಸಂಭವಿಸಿದ್ದು, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸಂಭಾವ್ಯ ಅಪಾಯ ತಪ್ಪಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಮಲೆನಾಡು ಎಂದರೆ ಅಲ್ಲಿ ಮಳೆ ಗಾಳಿ. ಗಾಳಿಗೆ ಮರ ಬೀಳುವುದು ಸಾಮಾನ್ಯ. ಆದರೆ, ಇತ್ತೀಚಿನ ದಿನಗಳಲ್ಲಿ ಸಕಲೇಶಪುರ ರಾಜ್ಯಾದ್ಯಂತ ಸದಾ ಸುದ್ದಿಯಲ್ಲಿರುತ್ತದೆ. ಇದಕ್ಕೆ ಕಾರಣ ಶಿರಾಡಿಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರ ಮೇಲೆ ಆಗಾಗ ಭೂ ಕುಸಿತ ಆಗುತ್ತಿರುವುದು. ಇದಕ್ಕೆ ಮುಖ್ಯ ಕಾರಣ ಮಲೆನಾಡಿನಲ್ಲಿ ಬೀಳುವ ಮಳೆಯಲ್ಲ. ಬದಲಾಗಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದವರು ಮಾಡಿರುವ ಅವೈಜ್ಞಾನಿಕ ಕಾಮಗಾರಿ ಕಾರಣ.
ಸಿಎಂ ಹೇಳಿದರೂ ಅದೇ ಕಾಮಗಾರಿ:
------------------------------------------------------
ಫೋಟೋ ಶೀರ್ಷಿಕೆ
ಕನ್ನಡಪ್ರಭ ವಾರ್ತೆ ಆಲೂರು ಕಳೆದ ಹಲವು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆ ಗಾಳಿಗೆ ತಾಲೂಕಿನ ವಿವಿಧೆಡೆಗಳಲ್ಲಿ ಹಲವಾರು ಮರ, ವಿದ್ಯುತ್ ಕಂಬಗಳು ತುಂಡಾಗಿ ಬಿದ್ದು ಹಲವು ಮನೆಗಳು ಹಾನಿಗೀಡಾಗಿವೆ. ಸೋಮವಾರ ರಾತ್ರಿ ಕೆಂಚಮ್ಮನ ಹೊಸಕೋಟೆ ಹೋಬಳಿ ಶಿರಗಾವರದ ಶತಾಯುಷಿ ಮಹಿಳೆಯರೊಬ್ಬರು ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಹರಿಹಳ್ಳಿ,ಶಿರಗಾವರ ರಸ್ತೆಯ ಪಕ್ಕದಲ್ಲಿದ್ದ ಈ ಬೃಹತ್ ಆಕಾರದ ಮರ ಬಹಳ ವರ್ಷಗಳಷ್ಟು ಹಳೆಯದಾಗಿದ್ದು, ಲಕ್ಷ್ಮಣಗೌಡರ ಮನೆಯ ಕಡೆಗೆ ವಾಲಿ ನಿಂತಿತ್ತು. ಇದು ರಸ್ತೆ ಹಾಗೂ ಮನೆಯ ಮೇಲೆ ಬೀಳುತ್ತದೆ, ಇದನ್ನು ತೆರವು ಗೊಳಿಸುವಂತೆ ಅರಣ್ಯ ಇಲಾಖೆಯವರಿಗೆ ಹಲವು ಬಾರಿ ಮನವಿ ಮಾಡಿದ್ದರೂ ಅವರು ಬೇಜವಾಬ್ದಾರಿತನದಿಂದ ವರ್ತಿಸಿದ್ದು, ಆದುದರಿಂದಾಗಿ ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿ ಉಂಟಾಗಿದೆ.