ರೈತರ ಜೀವನಾಡಿಯಾಗಿ ಡಿಸಿಸಿ ಬ್ಯಾಂಕ್ ಕೆಲಸ: ಶಾಸಕ ಕೊತ್ತೂರು ಮಂಜುನಾಥ್

KannadaprabhaNewsNetwork |  
Published : Sep 13, 2026, 02:15 AM IST
೧೦ಕೆಎಲ್‌ಆರ್-೩ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್‌ನ ನೂತನ ಅಧ್ಯಕ್ಷ ಕೊತ್ತೂರು ಮಂಜುನಾಥ್‌ರನ್ನು ವಕ್ಕಲೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ. ಪಾಲಾಕ್ಷಗೌಡ ನೇತೃತ್ವದ ಆಡಳಿತ ಮಂಡಳಿ ನಿರ್ದೇಶಕರೊಂದಿಗೆ ಕೋಲಾರದ ಡಿಸಿಸಿ ಬ್ಯಾಂಕ್‌ನಲ್ಲಿ ಸನ್ಮಾನಿಸುತ್ತಿರುವುದು. | Kannada Prabha

ಸಾರಾಂಶ

, ರೈತರಿಗೆ ಅಗತ್ಯವಿರುವಷ್ಟು ಸಾಲ ನೀಡಲು ಡಿಸಿಸಿ ಬ್ಯಾಂಕ್ ಸಿದ್ಧವಿದೆ ಎಂದರು. ಕೋಲಾರ-ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಯ ರೈತರು ಹಾಗೂ ಜನರ ಆರ್ಥಿಕ ಚಟುವಟಿಕೆಗಳಿಗೆ ಡಿಸಿಸಿ ಬ್ಯಾಂಕ್ ಜೀವನಾಡಿಯಾಗಿದೆ.

ಕೋಲಾರ: ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್‌ನ ನೂತನ ಅಧ್ಯಕ್ಷ ಕೊತ್ತೂರು ಮಂಜುನಾಥ್‌ರನ್ನು ವಕ್ಕಲೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ. ಪಾಲಾಕ್ಷಗೌಡ ನೇತೃತ್ವದ ಆಡಳಿತ ಮಂಡಳಿ ನಿರ್ದೇಶಕರೊಂದಿಗೆ ಗುರುವಾರ ಬ್ಯಾಂಕ್‌ನಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ರೈತರ ಅಭಿವೃದ್ಧಿಗಾಗಿ ಸಹಕಾರಿ ವ್ಯವಸ್ಥೆಯಲ್ಲಿ ರಾಜಕೀಯ ಮಾಡಬಾರದು. ವಕ್ಕಲೇರಿ ಸೊಸೈಟಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ರೈತರಿಗೆ ಅಗತ್ಯವಿರುವಷ್ಟು ಸಾಲ ನೀಡಲು ಡಿಸಿಸಿ ಬ್ಯಾಂಕ್ ಸಿದ್ಧವಿದೆ ಎಂದರು. ಕೋಲಾರ-ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಯ ರೈತರು ಹಾಗೂ ಜನರ ಆರ್ಥಿಕ ಚಟುವಟಿಕೆಗಳಿಗೆ ಡಿಸಿಸಿ ಬ್ಯಾಂಕ್ ಜೀವನಾಡಿಯಾಗಿದೆ. ಸಹಕಾರಿ ಸಂಘಗಳು ರೈತರ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಅದಕ್ಕಾಗಿ ಸೊಸೈಟಿಗಳ ಸಹಕಾರ ಮುಖ್ಯವಾಗಿದೆ ಎಂದರು. ಎಂಎಲ್ಸಿ ಎಂ.ಎಲ್. ಅನಿಲ್ ಕುಮಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಖಾಜಿಕಲ್ಲಹಳ್ಳಿ ಮುನಿರಾಜು, ವಕ್ಕಲೇರಿ ಸೊಸೈಟಿ ಉಪಾಧ್ಯಕ್ಷೆ ರಮಾದೇವಿ, ನಿರ್ದೇಶಕರಾದ ವೀರೇಗೌಡ, ಮೈಲಾಂಡಹಳ್ಳಿ ಮುರಳಿ, ಮುನಿಕೃಷ್ಣಪ್ಪ, ಸಿಇಒ ಮಂಜುನಾಥ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಗ್ಗಟ್ಟಿದ್ದರೆ ವಕ್ಫ್ ಸಂಸ್ಥೆಗಳ ಅಭಿವೃದ್ಧಿ ಸಾಧ್ಯ!
ವ್ಯಕ್ತಿ ಜೀವಂತವಾಗಿದ್ದರೂ 5 ವರ್ಷಗಳಿಂದ ಸರ್ಕಾರಿ ದಾಖಲೆಗಳಲ್ಲಿ ಮೃತ!