ಕನ್ನಡಪ್ರಭ ವಾರ್ತೆ ಪುತ್ತೂರು
ಅವರು ದ.ಕ. ಜಿಲ್ಲಾ ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ವತಿಯಿಂದ ಮಂಗಳವಾರ ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿರುವ ಅಮರ್ ಜವಾನ್ ಸ್ಮಾರಕದ ಬಳಿ ನಡೆದ ಸಾಲ ಮನ್ನಾ ವಂಚಿತ ರೈತರ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ರೈತರ ಸಾಲ ಮನ್ನಾ ವಿಚಾರದಲ್ಲಿ ಮಾಹಿತಿಗಾಗಿ ಯಾವುದೇ ಇಲಾಖೆಗಳ ಅಧಿಕಾರಿಗಳಿಗೆ ಕರೆ ಮಾಡಿದರೆ ಅವರು ಕರೆ ಸ್ವೀಕರಿಸುತ್ತಿಲ್ಲ. ಕಚೇರಿಗೆ ಬಂದು ಬೇಡಿಕೆ ಕೇಳಿದರೂ ರೈತರಿಗೆ ಸರಿಯಾದ ಮಾಹಿತಿ ನಿಡದೇ ಸತಾಯಿಸುತ್ತಿದ್ದಾರೆ. ಸಾಲ ಮನ್ನಾದ ಮೊತ್ತವನ್ನು ಒಂದು ತಿಂಗಳ ಒಳಗಾಗಿ ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.ಕಳೆಂಜ ಬಾಳಿಲ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೂಸಪ್ಪ ಗೌಡ ಮಾತನಾಡಿ, ಅಧಿಕಾರಿಗಳ ಎಡವಟ್ಟು ಹಾಗೂ ಅವರು ನೀಡುವ ವಿವಿಧ ನೆಪಗಳಿಂದಾಗಿ ರೈತರು ಸಾಲ ಮನ್ನಾದಿಂದ ವಂಚಿತರಾಗಿದ್ದಾರೆ. ಅರ್ಹ ರೈತರಿಗೆ ಸೌಲಭ್ಯ ದೊರೆತಿಲ್ಲ ಎಂದರು.
ಸಾಲಮನ್ನಾ ಹೋರಾಟ ಸಮಿತಿ ಸಂಚಾಲಕ ಜಯಪ್ರಕಾಶ ಕೂಜುಗೋಡು, ಸಾಲಮನ್ನಾ ವಂಚಿತ ರೈತರಾದ ಶಂಕರ ನಾರಾಯಣ ಕೆ., ಈಶ್ವರ ಕೆ., ನರೇಂದ್ರ ಕೂಜುಗೋಡು, ಮೋಹನ ಕೆದಿಲ, ರಮೇಶ ಕೋನಡ್ಕ, ರಾಮಚಂದ್ರ ಭಟ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.