ಡಿಸಿಎಂ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತಾರೆ: ಲಕ್ಷ್ಮೀ ಹೆಬ್ಬಾಳ್ಕರ್

KannadaprabhaNewsNetwork |  
Published : Nov 02, 2025, 04:00 AM IST
01ಲಕ್ಷ್ಮೀ | Kannada Prabha

ಸಾರಾಂಶ

ಮುಖ್ಯಮಂತ್ರಿ ಬದಲಾವಣೆ ಎಐಸಿಸಿ ಅಧ್ಯಕ್ಷರಿಗೆ ಬಿಟ್ಟ ವಿಚಾರ. ನಾನು ಸೇರಿದಂತೆ ಎಲ್ಲರೂ ಪಕ್ಷ ಹೇಳಿದಂತೆ ಕೇಳುತ್ತೇವೆ‌. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ಮಾತಿನಂತೆ ನಡೆದುಕೊಳ್ಳುವ ವ್ಯಕ್ತಿ. ಇಂದಿರಾಗಾಂಧಿ, ರಾಜೀವ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ತ್ಯಾಗದ ಇತಿಹಾಸದ ಬಗ್ಗೆ ನಮಗೆಲ್ಲ ಗೊತ್ತಿದೆ. ಆದ್ದರಿಂದ ವಿಶೇಷ ಅರ್ಥವನ್ನು ಕಲ್ಪಿಸುವುದು ಬೇಡ ಎಂದು ಹೆಬ್ಬಾಳ್ಕರ್‌ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ನವೆಂಬರ್ ಕ್ರಾಂತಿ, ಶಾಂತಿ ಎಲ್ಲವೂ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಅದನ್ನು ನಾನು ಮಾತನಾಡುವುದಿಲ್ಲ, ನಾನು ಪಕ್ಷ ಸಾಮಾನ್ಯ ಕಾರ್ಯಕರ್ತೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಬದಲಾವಣೆ ಎಐಸಿಸಿ ಅಧ್ಯಕ್ಷರಿಗೆ ಬಿಟ್ಟ ವಿಚಾರ. ನಾನು ಸೇರಿದಂತೆ ಎಲ್ಲರೂ ಪಕ್ಷ ಹೇಳಿದಂತೆ ಕೇಳುತ್ತೇವೆ‌. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ಮಾತಿನಂತೆ ನಡೆದುಕೊಳ್ಳುವ ವ್ಯಕ್ತಿ. ಇಂದಿರಾಗಾಂಧಿ, ರಾಜೀವ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ತ್ಯಾಗದ ಇತಿಹಾಸದ ಬಗ್ಗೆ ನಮಗೆಲ್ಲ ಗೊತ್ತಿದೆ. ಆದ್ದರಿಂದ ವಿಶೇಷ ಅರ್ಥವನ್ನು ಕಲ್ಪಿಸುವುದು ಬೇಡ ಎಂದು ಪ್ರಶ್ನೆಯೊಂದಕ್ಕೆ ಸಚಿವೆ ಉತ್ತರಿಸಿದರು.‌ನವೆಂಬರ್ ಕ್ರಾಂತಿ ಅಂದರೆ ಬರೀ ಭ್ರಾಂತಿ ಎಂದು ಸಚಿವ ಎಚ್.ಸಿ ಮಹಾದೇವಪ್ಪ ಅವರ ಹೇಳಿಕೆ‌ಗೆ ಪ್ರತಿಕ್ರಿಯಿಸಿದ ಸಚಿವರು, ಅವರು ನಮ್ಮ ಪಕ್ಷದ ಹಿರಿಯ ಮುಖಂಡರು, ಸಂಪುಟದಲ್ಲಿ ಅತ್ಯಂತ ಬುದ್ಧಿವಂತ ಮಂತ್ರಿ. ಅವರೇನು ಹೇಳಿದರೂ ಅದಕ್ಕೆ ನಾನು ಬೆಂಬಲಿಸುತ್ತೇನೆ ಎಂದು ಹೇಳಿದರು. ಪ್ರತ್ಯೇಕ ರಾಜ್ಯಕ್ಕೆ ಬೆಂಬಲ ಇಲ್ಲ:ಕರ್ನಾಟಕ ರಾಜ್ಯೋತ್ಸವ ದಿನ ಬಹಳ ಪವಿತ್ರವಾದದ್ದು. ಕನ್ನಡ ನಾಡಿನ ಏಕೀಕರಣದ ದಿನ, ಈ ದಿನ ನಾನು ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡುವುದಿಲ್ಲ. ಪ್ರತ್ಯೇಕ ಧ್ವಜ ಹಾರಿಸಿದವರಿಗೆ ನಾನು ಬೆಂಬಲ ಮಾಡಲ್ಲ, ಈ ಬಗ್ಗೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ ಎಂದರು.

ಧರ್ಮಸ್ಥಳ ಪವಿತ್ರ ಕ್ಷೇತ್ರ:

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಗೆ ಕೋರ್ಟ್ ನಿರ್ಬಂಧ ಹೇರಿದೆ. ಕೋರ್ಟ್‌ ಆದೇಶವನ್ನು ನಾವು ಪಾಲಿಸುತ್ತೇವೆ. ಸರ್ಕಾರಕ್ಕೆ, ತನಿಖೆಗೆ ಹಿನ್ನಡೆ ಆಗಿದೆ ಎಂಬುದು ಸರಿಯಲ್ಲ.‌ ತಡೆಯಾಜ್ಞೆಯನ್ನು ತೆರವು ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆ. ಧರ್ಮಸ್ಥಳ ಪವಿತ್ರ ಕ್ಷೇತ್ರ ಕ್ಷೇತ್ರ ಎಂಬ ಸಂದೇಶ ಹೊರಗೆ ಬರಬೇಕು ಎಂದರು.‌-------

ಪ್ರತಾಪ್ - ಈಶ್ವರ್ ಕೀಳು ಮಾತು ನಿಲ್ಲಿಸಿ !ಶಾಸಕ ಪ್ರದೀಪ್ ಈಶ್ವರ್ ಹಾಗೂ ಮಾಜಿ ಸಂಸದ ಪ್ರತಾಪ್‌ ಸಿಂಹ ನಡುವಿನ ಮಾತಿನ ಸಮರ ಕುರಿತಂತೆ ಪ್ರತಿಕ್ರಿಯಿಸಿದ ಸಚಿವೆ ಹೆಬ್ಬಾಳ್ಕರ್‌, ಅಕ್ಕನ ಸ್ಥಾನದಲ್ಲಿ ನಿಂತು ಇಬ್ಬರಿಗೂ ಕಿವಿಮಾತು ಹೇಳುತ್ತೇನೆ. ಇಬ್ಬರೂ ಬುದ್ಧಿವಂತರಿದ್ದೀರಿ, ನಿಮ್ಮ ಜಗಳದಲ್ಲಿ ತಂದೆತಾಯಿಯನ್ನು ಎಳೆದು ತರಬೇಡಿ, ಇಲ್ಲಿಗೆ ಬಿಟ್ಟುಬಿಡಿ ಸಾಕು. ನಾನೂ ಮಾತುಗಳಿಂದ ಬಹಳಷ್ಟು ಅಪಮಾನಗಳನ್ನು ಅನುಭವಿಸಿದ್ದೇನೆ. ರಾಜಕಾರಣಿಗಳನ್ನು ಜನ ಗಮನಿಸುತ್ತಿದ್ದಾರೆ. ನಾವು ರೋಲ್ ಮಾಡೆಲ್ ಆಗಬೇಕೆ ಹೊರತು ನಾಚಿಕೆ ಆಗುವಂತೆ ವರ್ತಿಸಬಾರದು ಎಂದರು.‌

PREV

Recommended Stories

ಪಾಳು ಬಿದ್ದ ರೈತ ಸಭಾ ಭವನ ಕಟ್ಟಡ
ಕೊಂಕಣಿ ನೆಲದಲ್ಲಿ ಕನ್ನಡದಲ್ಲಿ ಸಹಿ ಸಂಗ್ರಹ, ಕದಂಬ ವೃಕ್ಷ ಪೂಜಿಸಿ ರಾಜ್ಯೋತ್ಸವ ಆಚರಣೆ