ಕನ್ನಡಪ್ರಭ ವಾರ್ತೆ ಬೆಂಗಳೂರು
ಬೆಂಗಳೂರು ನಗರ ವ್ಯಾಪ್ತಿಯ ಐದೂ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ವತಿಯಿಂದ ಒಟ್ಟಾಗಿ ನಡೆಸಿದ ಪ್ರತಿಭಟನೆಯಲ್ಲಿ ಕೆಪಿಸಿಸಿ ಪದಾಧಿಕಾರಿಗಳು, ಸಚಿವರು, ಶಾಸಕರು ಸೇರಿ ಸಾವಿರಾರು ಮಂದಿ ಕಾರ್ಯಕರ್ತರು ಭಾಗವಹಿಸಿ ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಪಾಲರು ತಮ್ಮ ಸ್ಥಾನದ ಘನತೆ ಹಾಳು ಮಾಡುತ್ತಿದ್ದಾರೆ. ಇವರು ಘನತವೆತ್ತ ರಾಜ್ಯಪಾಲರಲ್ಲ ಬದಲಿಗೆ ಅಯೋಗ್ಯ, 420, ನಾಲಾಯಕ್ ರಾಜ್ಯಪಾಲರು ಎಂದು ಸಚಿವರು ಹಾಗೂ ಪದಾಧಿಕಾರಿಗಳು ತಮ್ಮ ಭಾಷಣದ ಉದ್ದಕ್ಕೂ ರಾಜ್ಯಪಾಲರ ವಿರುದ್ಧ ಕಿಡಿ ಕಾರಿದರು.ಬಳಿಕ ಬಳಿಕ ವಿಧಾನಪರಿಷತ್ ಮುಖ್ಯಸಚೇತಕ ಸಲೀಂ ಅಹಮದ್ ಹಾಗೂ ಕೆಪಿಸಿಸ ಮಹಿಳಾ ಘಟಕದ ಅಧ್ಯಕ್ಷರ ನೇತೃತ್ವದಲ್ಲಿ ನಗರ ಜಿಲ್ಲಾಧಿಕಾರಿ ಕೆ. ದಯಾನಂದ್ ಅವರನ್ನು ಭೇಟಿ ಮಾಡಿ, ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಹಿಂಪಡೆಯುವಂತೆ ಸೂಚಿಸಲು ರಾಷ್ಟ್ರಪತಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.
ವಿಧಾನಪರಿಷತ್ನ ಸರ್ಕಾರದ ಮುಖ್ಯಸಚೇತಕ ಸಲೀಂ ಅಹಮದ್ ಮಾತನಾಡಿ, ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಥಾವರ್ಚಂದ್ ಗೆಹಲೋತ್ ಅವರು ಅಯೋಗ್ಯ ಹಾಗೂ ಬೇಜಾವಾಬ್ದಾರಿ ರಾಜ್ಯಪಾಲರು. ಸರ್ಕಾರದ ಜನಪ್ರಿಯತೆ ಸಹಿಸದೆ ಷಡ್ಯಂತ್ರ ನಡೆಸಿದ್ದಾರೆ. ಅಮಿತ್ ಶಾ ಒತ್ತಡಕ್ಕೆ ಮಣಿದು ಯಾವುದೇ ದಾಖಲೆ ಪರಿಶೀಲಿಸದೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ ಎಂದು ಕಿಡಿ ಕಾರಿದರು.ರಾಜಭವನ ಬಿಜೆಪಿಯ ಗುಮಾಸ್ತರ ಕಚೇರಿ ಆಗಿದೆ: ರಾಮಲಿಂಗಾರೆಡ್ಡಿ
ದಿನೇಶ್ ಗುಂಡೂರಾವ್ ಮಾತನಾಡಿ, ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತರು ವರದಿ ನೀಡಿ ಪ್ರಾಸಿಕ್ಯೂಷನ್ಗೆ ಮನವಿ ಮಾಡಿ 10 ತಿಂಗಳಾದರೂ ರಾಜ್ಯಪಾಲರು ಕ್ರಮ ಕೈಗೊಂಡಿಲ್ಲ. ಸಿದ್ದರಾಮಯ್ಯ ವಿರುದ್ಧ ಏಕಾಏಕಿ ಅನುಮತಿ ನೀಡಿದ್ದಾರೆ. ಇಂತಹ ನೀಚ ಮಟ್ಟದ ಕೆಲಸ ಮಾಡುತ್ತಿರುವ ರಾಜ್ಯಪಾಲರನ್ನ ಏನೆಂದು ಕರೆಯಬೇಕು? ಬಿಜೆಪಿ ಏಜೆಂಟ್, 420, ಮೋಸಗಾರ ಇನ್ನೂ ಏನೆಂದು ಕರೆಯಬೇಕು? ಎಂದು ಪ್ರಶ್ನಿಸಿದರು.ಸಚಿವರಾದ ಕೆ.ಜೆ. ಜಾರ್ಜ್, ಜಮೀರ್ ಅಹಮದ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಕೋಟ್...
- ಸಿದ್ದರಾಮಯ್ಯ, ಮುಖ್ಯಮಂತ್ರಿ