ಸಿಇಟಿ ವೇಳೆ ಜನಿವಾರ ತೆಗೆಸಿದ್ದು ತಪ್ಪು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

KannadaprabhaNewsNetwork |  
Published : Apr 22, 2025, 01:54 AM ISTUpdated : Apr 22, 2025, 06:11 AM IST
ಡಿ.ಕೆ.ಶಿವಕುಮಾರ್‌ | Kannada Prabha

ಸಾರಾಂಶ

ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದು ತಪ್ಪು. ಧಾರ್ಮಿಕ ಸಂಪ್ರದಾಯಗಳಿಗೆ ಧಕ್ಕೆ ತರಬಾರದು. ಇಂತಹ ಘಟನೆಗಳಿಗೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

  ಬೆಂಗಳೂರು : ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದು ತಪ್ಪು. ಧಾರ್ಮಿಕ ಸಂಪ್ರದಾಯಗಳಿಗೆ ಧಕ್ಕೆ ತರಬಾರದು. ಇಂತಹ ಘಟನೆಗಳಿಗೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. 

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಜನಿವಾರ, ಇಷ್ಟಲಿಂಗ ಕಟ್ಟಿಕೊಳ್ಳುವುದು, ಶಿವದಾರ, ಉಡುದಾರ, ಮಾಂಗಲ್ಯ ಸರ ಧರಿಸುವ ಪದ್ಧತಿಗಳಿವೆ. ಅವು ಅವರ ಧಾರ್ಮಿಕ ಪದ್ಧತಿಗಳು. 

ಪೊಲೀಸ್ ಮತ್ತಿತರ ನೇಮಕಾತಿ ಸಂದರ್ಭದಲ್ಲಿ ಮಾತ್ರ ಅವುಗಳನ್ನು ಪರಿಶೀಲನೆ ನಡೆಸಲಾಗುತ್ತದೆ. ಉಳಿದಂತೆ ಶಾಲೆ-ಕಾಲೇಜುಗಳಲ್ಲಿ ಅವುಗಳನ್ನು ತೆಗೆಸುವ ಕೆಲಸವನ್ನು ಯಾರೂ ಮಾಡಬಾರದು ಎಂದರು.ಪರೀಕ್ಷೆ ವೇಳೆ ಕೆಲವರು ಪರೀಕ್ಷಾ ಅಕ್ರಮ ನಡೆಸಲು ಇಯರ್‌ಫೋನ್, ಬ್ಲೂಟೂತ್ ಮುಂತಾದ ಸಣ್ಣ ಡಿವೈಸ್‌ಗಳನ್ನು ಕಿವಿ ಮತ್ತಿತರ ಕಡೆ ಇಟ್ಟುಕೊಂಡಿರುತ್ತಾರೆ.

 ಅದನ್ನು ಪರಿಶೀಲಿಸುವ ವೇಳೆ ಕರ್ತವ್ಯ ಭಯದಿಂದ ಕೆಲ ಸಿಬ್ಬಂದಿ ಈ ರೀತಿಯ ಕೆಲಸ ಮಾಡಿರಬಹುದು. ಇಂತಹ ಘಟನೆಗಳಿಗೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ