ಸಚಿವ ಜಮೀರ್ ಗೆ ಡಿಸಿಎಂ ಸ್ಥಾನ ನೀಡಿ : ಸೈಯದ್ ಮುಜೀಬುಲ್ಲಾ

KannadaprabhaNewsNetwork |  
Published : Jan 17, 2025, 12:46 AM IST
ಪೋಟೋ: 16ಎಸ್ಎಂಜಿಕೆಪಿ02ಶಿವಮೊಗ್ಗದ ಪತ್ರಿಕಾಭವನದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಅಲ್ಪಸಂಖ್ಯಾತರ ಹಿತರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸೈಯದ್ ಮುಜೀಬುಲ್ಲಾ ಮಾತನಾಡಿದರು. | Kannada Prabha

ಸಾರಾಂಶ

ಶಿವಮೊಗ್ಗ: ಸಚಿವ ಜಮೀರ್ ಅಹಮದ್‍ರವರಿಗೆ ಉಪಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್‌ ಸದಸ್ಯೆ ಬಲ್ಕಿಶ್ ಬಾನು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಹಿತರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸೈಯದ್ ಮುಜೀಬುಲ್ಲಾ ಆಗ್ರಹಿಸಿದರು.

ಶಿವಮೊಗ್ಗ: ಸಚಿವ ಜಮೀರ್ ಅಹಮದ್‍ರವರಿಗೆ ಉಪಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್‌ ಸದಸ್ಯೆ ಬಲ್ಕಿಶ್ ಬಾನು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಹಿತರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸೈಯದ್ ಮುಜೀಬುಲ್ಲಾ ಆಗ್ರಹಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತ ಸಮುದಾಯವು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿದ ಪರಿಣಾಮ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ. ಆದರೆ, ಸಚಿವ ಸಂಪುಟದಲ್ಲಿ ಹಾಗೂ ನಿಗಮ ಮಂಡಳಿಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ನಿರೀಕ್ಷೆಯಂತೆ ಅವಕಾಶಗಳು ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಜಮೀರ್ ಅಹಮದ್‍ರವರು ಜನಪ್ರಿಯ ಜಾತ್ಯಾತೀತ ನಾಯಕರಾಗಿದ್ದು, ಜನಪ್ರಿಯ ಶಾಸಕರಾಗಿ ಯಶಸ್ವಿ ಸಚಿವರಾಗಿ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲು ಇವರ ಕೊಡುಗೆ ಅನನ್ಯವಾಗಿದೆ ಎಂದರು.

ಬಲ್ಕಿಶ್ ಬಾನು ಅವರು ವಿಧಾನ ಪರಿಷತ್ ಸದಸ್ಯರಾಗಿ ಜಿಲ್ಲೆಯ ಎಲ್ಲಾ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಅತ್ಯಂತ ಕಡಿಮೆ ಅವಧಿಯಲ್ಲಿ ಜನಪ್ರಿಯ ವಿಧಾನಪರಿಷತ್ ಸದಸ್ಯರಾಗಿ, ಜನಪರವಾಗಿ ಕೆಲಸ ಮಾಡುತ್ತಾ ಸರ್ಕಾರದ ಘನತೆಯನ್ನು ಹೆಚ್ಚಿಸಿ ಜಿಲ್ಲೆಯಲ್ಲಿ ಕ್ರಿಯಾಶೀಲ ಜನನಾಯಕಿಯಾಗಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.

ಜಿಲ್ಲೆಯಿಂದ ಈವರೆಗೆ ಅಲ್ಪಸಂಖ್ಯಾತ ಸಮುದಾಯದವರನ್ನು ಸಚಿವರನ್ನಾಗಿ ಮಾಡಿಲ್ಲ. ಹಾಗಾಗಿ ಸಾಮಾಜಿಕ ನ್ಯಾಯದ ಅಡಿಯಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸಿಗಬೇಕಾದ ನ್ಯಾಯವನ್ನು ನೀಡುವ ನಿಟ್ಟಿನಲ್ಲಿ ಬಲ್ಕಿಶ್ ಬಾನು ಅವರನ್ನು ಸಚಿವರನ್ನಾಗಿ ನೇಮಕ ಮಾಡಬೇಕು. ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿ, ನಿಗಮ ಮಂಡಳಿಗಳಲ್ಲೂ ಸಹ ಅಲ್ಪಸಂಖ್ಯಾತ ಸಮುದಾಯವನ್ನು ಪರಿಗಣಿಸುವಂತೆ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಉಪಾಧ್ಯಕ್ಷ ಸೈಮನ್ ರಾಜ್, ಪದಾಧಿಕಾರಿಗಳಾದ ಜಫರುಲ್ಲಾ ಷರೀಫ್, ಷಮೂನ್ ಷರೀಫ್, ನಜರುಲ್ಲಾ, ಫಯಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಟುಂಬ ಹಾಳು ಮಾಡುತ್ತಿರುವ ಪ್ರೇಮಿಗಳ ದಿನ
ರಾಜಕೀಯ ಬದುಕಿಗೆ ಜನ್ಮ ನೀಡಿದ್ದು ಗ್ರಾಮೀಣ ಕ್ಷೇತ್ರ