ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ ಹಾಗೂ ಅಧೀಕ್ಷಕ

KannadaprabhaNewsNetwork |  
Published : Jan 05, 2025, 01:33 AM IST
4ಎಚ್ಎಸ್ಎನ್17 : ಡಿಡಿಪಿಐ ಪಾಂಡು ಹಾಗೂ ಅಧೀಕ್ಷಕ ವೇಣುಗೋಪಾಲ್‌. | Kannada Prabha

ಸಾರಾಂಶ

ಈತನನ್ನು ವಿಚಾರಣೆಗೆ ಒಳಪಡಿಸಿದಾಗ ಉಪನಿರ್ದೇಶಕರಾದ ಪಾಂಡು ಆದೇಶದ ಮೇರೆಗೆ ಹಣ ಪಡೆಯುತ್ತಿರುವುದಾಗಿ ಹೇಳಿಕೆ ನೀಡಿದ ಕಾರಣ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಕೆ. ಪಾಂಡು ಅವರನ್ನು ಕೂಡ ವಶಕ್ಕೆ ಪಡೆಯಲಾಗಿದೆ.

ಕನ್ನಡಪ್ರಭ ವಾರ್ತೆ ಹಾಸನ

ಅನುದಾನಿತ ಹೈಸ್ಕೂಲ್‌ನ ಇಬ್ಬರು ಶಿಕ್ಷಕರನ್ನು ನಿಯೋಜನೆಗೊಳಿಸಲು ಸುಮಾರು ೪೦ ಸಾವಿರ ಲಂಚ ಪಡೆಯುವಾಗ ಸೂಪರಿಂಟೆಂಡೆಂಟ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಜಿಲ್ಲಾ ಪತ್ರಕರ್ತರದ ಭವನದ ಎದುರಿನ ಡಿಡಿಪಿಐ ಕಚೇರಿಯಲ್ಲಿ ನಡೆದಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಅನುದಾನಿತ ಹೈಸ್ಕೂಲ್‌ನ ಇಬ್ಬರು ಶಿಕ್ಷಕರನ್ನು ನಿಯೋಜನೆಗೊಳಿಸಲು ಸುಮಾರು ೪೦ ಸಾವಿರ ಲಂಚ ಕೇಳಿದ್ದು, ಲಂಚ ಕೊಡಲು ಇಷ್ಟವಿರದ ಶಿಕ್ಷಕರು ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು. ಶಿಕ್ಷಕರ ದೂರು ಆಧರಿಸಿ ಲೋಕಾಯುಕ್ತ ಸಿಪಿಐ ಶಿಲ್ಪಾ ಮತ್ತು ಬಾಲು ಅವರ ನೇತೃತ್ವದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಮೇಲೆ ದಾಳಿ ನಡೆಸಿ ಲಂಚದ ಹಣದ ಸಮೇತ ಸೂಪರಿಂಟೆಂಡೆಂಟ್ ವೇಣುಗೋಪಾಲ್ ಅವರನ್ನು ಬಂಧನ ಮಾಡಿದ್ದಾರೆ. ಈತನನ್ನು ವಿಚಾರಣೆಗೆ ಒಳಪಡಿಸಿದಾಗ ಉಪನಿರ್ದೇಶಕರಾದ ಪಾಂಡು ಆದೇಶದ ಮೇರೆಗೆ ಹಣ ಪಡೆಯುತ್ತಿರುವುದಾಗಿ ಹೇಳಿಕೆ ನೀಡಿದ ಕಾರಣ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಕೆ. ಪಾಂಡು ಅವರನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಡಿಡಿಪಿಐ ಸೂಚನೆಯಂತೇ ಲಂಚ ಪಡೆಯುತ್ತಿದ್ದ ಬಗ್ಗೆ ದೂರು ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ವೇಣುಗೋಪಾಲ್ ಹಾಗೂ ಡಿಡಿಪಿಐ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ