ಡಿಡಿಪಿಐ- ಎಫ್‌ಡಿಎ ಲೋಕಾಯುಕ್ತ ಬಲೆಗೆ

KannadaprabhaNewsNetwork |  
Published : Nov 04, 2023, 12:30 AM IST

ಸಾರಾಂಶ

ಡಿಡಿಪಿಐ- ಎಫ್‌ಡಿಎ ಲೋಕಾಯುಕ್ತ ಬಲೆಗೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು ಶೌಚಾಲಯ ನಿರ್ಮಾಣ ಕಾಮಗಾರಿಯ ಆಡಳಿತಾತ್ಮಕ ಮಂಜೂರಾತಿ ಕಡತಕ್ಕೆ ಸಹಿ ಹಾಕಲು ಲಂಚ ಪಡೆಯುತ್ತಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಹಾಗೂ ದ್ವಿತೀಯ ದರ್ಜೆ ಸಹಾಯಕ ಶುಕ್ರವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೂಡಿಗೆರೆ ತಾಲೂಕಿನ ಹೆಸ್ಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಪು ನಗರ ವಾಸಿ ಅಬುಬೇಕರ್ ರವರ ಪುತ್ರ ನೀಡಿದ ದೂರನ್ನು ಆಧರಿಸಿ, ದಾಳಿ ನಡೆಸಿದ ಪೊಲೀಸರು ಡಿಡಿಪಿಐ ರಂಗನಾಥಸ್ವಾಮಿ ಹಾಗೂ ದ್ವಿತೀಯ ದರ್ಜೆ ಸಹಾಯಕ ಅಸ್ರಾರ್ ಅಹಮದ್ ನನ್ನು ಬಂಧಿಸಿದ್ದಾರೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೊಲ್ಲಿಬೈಲು ಮತ್ತು ಕಡೆಮಡಕಲ್ಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 4.80 ಲಕ್ಷ ರು. ವೆಚ್ಚದಲ್ಲಿ ಶೌಚಾಲಯ ನಿರ್ಮಿಸಿದ್ದು ಅದಕ್ಕೆ ಆಡಳಿತಾತ್ಮಕ ಅನುಮೋದನೆ ಅಗತ್ಯವಿತ್ತು. ಅನುಮೋದನೆ ನೀಡುವಂತೆ ಡಿಡಿಪಿಐ ರವರನ್ನು ಗುತ್ತಿಗೆದಾರರ ಮಗ ಭೇಟಿಯಾದಾಗ ಅವರು ದ್ವಿತೀಯ ಸಹಾಯಕ ಅಸ್ರಾರ್ ಅಹಮದ್ ಭೇಟಿಯಾಗಲು ತಿಳಿಸಿದ್ದರು ಎನ್ನಲಾಗಿದೆ. ಶೇ.2 ರಂತೆ 10,000 ರೂ.ಗಳಿಗೆ ಬೇಡಿಕೆ ಇಟ್ಟಿದ್ದು, ಅಂತಿಮವಾಗಿ 4,000 ರು. ಗಳಿಗೆ ಒಪ್ಪಿಗೆಯಾಗಿ 1,000 ರು. ಮುಂಗಡ ನೀಡಿ ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿತ್ತು. ಉಳಿಕೆ 3,000 ರು. ನೀಡುವ ಕುರಿತು ಡಿಡಿಪಿಐ ರೊಂದಿಗೆ ನಡೆಸಿದ ಸಂಭಾಷಣೆ ಮುದ್ರಿಸಿಕೊಂಡು ಲೋಕಾಯುಕ್ತಕ್ಕೆ ನೀಡಲಾಗಿತ್ತು. ಶುಕ್ರವಾರ ಉಳಿಕೆ ಹಣ ನೀಡುವ ಸಂದರ್ಭದಲ್ಲಿ ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ನಡೆಸಿ ರಂಗನಾಥ ಸ್ವಾಮಿ ಮತ್ತು ಅಸ್ರಾರ್ ಅಹಮದ್ ನನ್ನು ವಶಕ್ಕೆ ಪಡೆಯಲಾಯಿತು. ಈ ದಾಳಿಯಲ್ಲಿ ಇನ್ಸ್‌ಸ್ಪೆಕ್ಟರ್‌ ಮಲ್ಲಿಕಾರ್ಜುನ್, ಅನಿಲ್ ರಾಥೋಡ್, ಸಿಬ್ಬಂದಿ ವೇದಾವತಿ, ವಿಜಯ ಭಾಸ್ಕರ್, ಸಲ್ಮಾ ಬೇಗಮ್, ಅನಿಲ್ ನಾಯಕ್, ಪ್ರಸಾದ್ ,ರವಿ, ಮುಜಬ್ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!