ಮುಂಡಗೋಡ: ಕಳೆದ ಸಾಲಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ೪ನೇ ಸ್ಥಾನದಲ್ಲಿದ್ದ ಮುಂಡಗೋಡ ತಾಲೂಕು ಮುಂಬರುವ ವಾರ್ಷಿಕ ವಾರ್ಷಿಕ ಪರೀಕ್ಷೆಯಲ್ಲಿ ೧೦೦ಕ್ಕೆ ೧೦೦ರಷ್ಟು ಫಲಿತಾಂಶವನ್ನು ನೀಡುವ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯನಿರ್ವಹಿಸಬೇಕು ಎಂದು ಶಿರಸಿ ಶೈಕ್ಷಣಿಕ ಜಿಲ್ಲೆ ಉಪನಿರ್ದೇಶಕ ಪಾರಿ ಬಸವರಾಜ ತಿಳಿಸಿದರು.ಗುರುವಾರ ಪಟ್ಟಣದ ನಗರಸಭಾ ಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮುಂಡಗೋಡ ಹಾಗೂ ವಿಜೇತ ಶಿಕ್ಷಣ ಸಮಿತಿ ಧಾರವಾಡ ಇವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ತಾಲೂಕಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಫಲಿತಾಂಶ ಸುಧಾರಣೆ ಹಾಗೂ ಪ್ರತಿಭಾನ್ವೇಷಣೆ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸುರೇಶ್ ಕುಲಕರ್ಣಿ ಅವರು, ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯನ್ನು ಯಾವ ರೀತಿ ಎದುರಿಸಬೇಕು ಎಂಬುದನ್ನು ವಿವರವಾಗಿ ತಿಳಿಸಿದರು.ಶಿರಸಿ ಶೈಕ್ಷಣಿಕ ಜಿಲ್ಲಾ ಪ್ರೌಢಶಾಲಾ ಮುಖ್ಯಾದ್ಯಾಪಕರ ಸಂಘದ ಜಿಲ್ಲಾ ಅಧ್ಯಕ್ಷ ಎಸ್.ಡಿ. ಮುಡೆಣ್ಣವರ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಡಾ. ರಮೇಶ ಅಂಬಿಗೇರ, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಮಂಜುನಾಥ ಮರಿತಮ್ಮಣ್ಣವರ, ಡಾ. ಪ್ರಕಾಶ್ ಕಲಹಾಳ ಹಾಗೂ ರಾಕೇಶ್ ಹಿರೇಮಠ, ತಾಲೂಕಿನ ವಿವಿಧ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಇದ್ದರು. ನಾಗರಾಜ ನಾಯ್ಕ ಸ್ವಾಗತಿಸಿದರು. ಎಸ್.ಡಿ. ಮುಡೆಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿದರು.