ಗದಗ ಎಪಿಎಂಸಿ ಬಳಿ ಕರುವಿನ ಮೃತದೇಹ ಪತ್ತೆ

KannadaprabhaNewsNetwork |  
Published : Dec 02, 2025, 02:15 AM IST
ಎಪಿಎಂಸಿಯಲ್ಲಿ ಕುರುವಿನದ ದೇಹ ಪತ್ತೆಯಾಗಿರುವುದು.  | Kannada Prabha

ಸಾರಾಂಶ

ಈ ಕೃತ್ಯವು ಸ್ಥಳೀಯರಲ್ಲಿ ತೀವ್ರ ಗೊಂದಲ ಮೂಡಿಸಿದ್ದು, ಚಿರತೆ ದಾಳಿಯಿಂದ ಕರು ಸಾವಿಗೀಡಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಗದಗ: ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ದುಷ್ಕರ್ಮಿಗಳು ಕರುವಿನ ಶಿರಚ್ಛೇದ ಮಾಡಿದ ದೇಹವನ್ನು ಬಿಸಾಡಿ ಹೋಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಈ ಕೃತ್ಯವು ಸ್ಥಳೀಯರಲ್ಲಿ ತೀವ್ರ ಗೊಂದಲ ಮೂಡಿಸಿದ್ದು, ಚಿರತೆ ದಾಳಿಯಿಂದ ಕರು ಸಾವಿಗೀಡಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಎಪಿಎಂಸಿ ಜಾನುವಾರು ಮಾರುಕಟ್ಟೆ ಬಳಿಯೇ ಈ ಕೃತ್ಯ ನಡೆದಿರುವುದು ಸಾರ್ವಜನಿಕರಲ್ಲಿ ಎರಡು ಬಗೆಯ ಚರ್ಚೆಗೆ ಕಾರಣವಾಗಿದೆ. ಅನಾಮಿಕ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಕರುವಿನ ತಲೆ ಕತ್ತರಿಸಿ ಗೋಹತ್ಯೆ ಮಾಡಿ, ದೇಹವನ್ನು ಇಲ್ಲಿ ಬಿಸಾಡಿ ಹೋಗಿರುವ ಸಾಧ್ಯತೆ ಇದೆ. ಕರುವಿನ ತಲೆಯನ್ನು ಚೀಲದಲ್ಲಿ ತುಂಬಿಕೊಂಡು ತಂದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ.

​ಚಿರತೆಯ ಕೃತ್ಯ?: ಮತ್ತೊಂದು ವಾದದ ಪ್ರಕಾರ, ಇತ್ತೀಚೆಗೆ ಅವಳಿ ನಗರದ ಸುತ್ತಮುತ್ತ ಕಾಣಿಸಿಕೊಂಡಿದ್ದ ಚಿರತೆಯೇ ಈ ಕೃತ್ಯ ಎಸಗಿದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಚಿರತೆಯು ಕೊಂದ ನಂತರ ದೇಹವನ್ನು ಎಳೆದು ತಂದಿರಬಹುದು ಎಂದು ಊಹಿಸಲಾಗಿದೆ. ​ಈ ಎರಡೂ ಸಾಧ್ಯತೆಗಳಿಂದಾಗಿ ಅವಳಿ ನಗರದ ಜನರಲ್ಲಿ ತೀವ್ರ ಗೊಂದಲ ಉಂಟಾಗಿದ್ದು, ಪೊಲೀಸರು ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಒತ್ತಾಯ: ​ಕರುವಿನ ದೇಹ ಪತ್ತೆಯಾದ ಕೂಡಲೇ ಸುದ್ದಿ ತಿಳಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇದು ಗೋಹತ್ಯೆ ನಿಷೇಧ ಕಾಯ್ದೆಯ ಸ್ಪಷ್ಟ ಉಲ್ಲಂಘನೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ದುರುದ್ದೇಶದಿಂದಲೇ ಈ ಕೃತ್ಯ ಎಸಗಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ​ಗೋವು ಹತ್ಯೆ ಮಾಡಿದ ದುಷ್ಟರಿಗೆ ತಕ್ಷಣವೇ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.

​ಘಟನೆಯು ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣದ ಹಿಂದೆ ಇರುವವರನ್ನು ಪತ್ತೆ ಹಚ್ಚಲು ಮತ್ತು ಇದು ನಿಜಕ್ಕೂ ಚಿರತೆಯ ಕೃತ್ಯವೇ ಅಥವಾ ದುಷ್ಕರ್ಮಿಗಳ ಕೃತ್ಯವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಸಮಗ್ರ ತನಿಖೆಯಾಗಬೇಕಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಾರತೀಯರ ಕರೆತರಲು ವಿಶೇಷ ವಿಮಾನ ಮಾಡಿ: ಮೋದಿಗೆ ಸಿಎಂ ಸಿದ್ದು ಪತ್ರ
100ಕ್ಕೂ ಕನ್ನಡಿಗರ ಹೊತ್ತು ಬಂತು ಮೊದಲ ವಿಮಾನ