ಕನ್ನಡಪ್ರಭ ವಾರ್ತೆ ಕುಶಾಲನಗರ
KA 11 P 1379 ನಂಬರಿನ ಮಾರುತಿ ಕಾರಿನಲ್ಲಿ ಶವ ಪತ್ತೆಯಾಗಿದೆ. ಮಂಡ್ಯ ತಾಲೂಕಿನ ಶಿವಳ್ಳಿಯಲ್ಲಿ ಖಾಸಗಿ ಕ್ಲಿನಿಕ್ ತೆರೆದಿದ್ದ ಸತೀಶ್ ಶುಕ್ರವಾರ ಬೆಳಗ್ಗೆ ಪಿರಿಯಾಪಟ್ಟಣದಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದು, ಬಳಿಕ ಅಲ್ಲಿದ ಕೊಡಗಿನತ್ತ ಬಂದಿದ್ದರು ಎನ್ನಲಾಗಿದೆ. ಭ್ರೂಣ ಲಿಂಗಪತ್ತೆ ಪ್ರಕರಣ ಕಾವೇರಿದ್ದು, ಗುರುವಾರವಷ್ಟೇ ಆಲೆಮನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದ್ದರು. ಸಚಿವರ ಮುಂದೆಯೂ ವೈದ್ಯನ ವಿರುದ್ಧ ಸ್ಥಳೀಯರು ಆರೋಪಿಸಿದ್ದಾಗಿ ತಿಳಿದುಬಂದಿದೆ.ಪ್ರಕರಣದ ತನಿಖೆಯನ್ನ ಸಿಐಡಿಗೆ ವಹಿಸಿದ ಹಿನ್ನೆಲೆ ತನಿಖೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಮೂಡಿದೆ.ಕಾರಿನಲ್ಲೇ ವಿಷ ಸೇವಿಸಿ, ಇಂಜೆಕ್ಷನ್ ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ವಿಧಿ ವಿಜ್ಞಾನ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಕುಶಾಲನಗರ ಆಸ್ಪತ್ರೆಗೆ ಸ್ಥಳಾಂತರ ಮಾಡಿದ್ದು, ಮರಣೋತ್ತರ ಪರೀಕ್ಷೆಗೆ ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಫಾರೆನ್ಸಿಕ್ ತಜ್ಞರು ಭೇಟಿ ನೀಡಿದ್ದಾರೆ.ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ಡಾ. ಸತೀಶ್ ಪತ್ನಿ ಹಾಗೂ ಕುಟುಂಬಸ್ಥರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.