ಶಾಶ್ವತ ವಿದ್ಯುತ್‌ ಸಂಪರ್ಕಕ್ಕೆ ಅರ್ಜಿ ಸಲ್ಲಿಸಲು ಜು.6 ಗಡುವು

KannadaprabhaNewsNetwork |  
Published : Jun 27, 2026, 12:15 AM IST
ಚಿತ್ರದುರ್ಗ ಮೂರನೇ ಪುಟದ ಲೀಡ್    | Kannada Prabha

ಸಾರಾಂಶ

ಮೇ 31, 2026ಕ್ಕೂ ಮೊದಲು ಪೂರ್ಣಗೊಂಡಿರುವ ವಸತಿ ಕಟ್ಟಡಗಳಿಗೆ ಮಾತ್ರ ಅನ್ವಯ

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಬೆಸ್ಕಾಂ ವ್ಯಾಪ್ತಿಯಲ್ಲಿ 2400 ಚದರ ಅಡಿವರೆಗಿನ (ಶೇ.20ರಷ್ಟು ಹೆಚ್ಚುವರಿ ವ್ಯತ್ಯಾಸದ ಮಿತಿಯೊಂದಿಗೆ) ಅಳತೆಯ ನಿವೇಶನಗಳಲ್ಲಿ ನಿರ್ಮಿಸಿರುವ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ವಿನಾಯಿತಿ ನೀಡಲಾಗಿದ್ದು, ಜಿ+3 ಅಥವಾ ಸಿಲ್ಟ್‌ ಪಾರ್ಕಿಂಗ್‌ + 4 ಮಹಡಿಗಳಿರುವ ವಸತಿ ಕಟ್ಟಡಗಳ ಮಾಲೀಕರು ಜುಲೈ 6, 2026ರೊಳಗೆ ಶಾಶ್ವತ ವಿದ್ಯುತ್‌ ಸಂಪರ್ಕ ಪಡೆಯಲು ಬೆಸ್ಕಾಂ ಮನವಿ ಮಾಡಿದೆ.

ಮೇ 31, 2026 ರಂದು ಅಥವಾ ಅದಕ್ಕೂ ಮೊದಲು ಪೂರ್ಣಗೊಂಡಿರುವ ವಸತಿ ಕಟ್ಟಡಗಳಿಗೆ ಮಾತ್ರ ಅನ್ವಯವಾಗುವಂತೆ 2400 (ಶೇ.20ರಷ್ಟು ಹೆಚುವರಿ ವ್ಯತ್ಯಾಸದ ಮಿತಿಯೊಂದಿಗೆ) ಅಳತೆಯ ನಿವೇಶನಗಳಲ್ಲಿ ಒಸಿ ಇಲ್ಲದೆ ನಿರ್ಮಿಸಿರುವ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ ಕಲ್ಪಿಸಲು ಒಂದು ಬಾರಿಯ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿ 15 ದಿನಗಳೊಳಗೆ ಅರ್ಜಿ ಸಲ್ಲಿಸಲು ಸೂಚಿಸಿದೆ.

ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ವ್ಯಾಪ್ತಿಯೊಳಿಗಿರುವ ವಸತಿ ಕಟ್ಟಡಗಳಿಗೆ ಮಾತ್ರ ಶಾಶ್ವತ ವಿದ್ಯುತ್‌ ಸಂಪರ್ಕ ಕಲ್ಪಿಸಲು ಬೆಸ್ಕಾಂ ಈಗಾಗಲೇ ಚಾಲನೆ ನೀಡಿದ್ದು, ಸಾರ್ವಜನಿಕರು ಹತ್ತಿರದ ಬೆಸ್ಕಾಂ ಉಪ ವಿಭಾಗ ಕಚೇರಿಗಳಿಗೆ ಭೇಟಿ ನೀಡಿ, ಅಥವಾ ಬೆಸ್ಕಾಂ ಆನ್ಲೈನ್ ಜಾಲತಾಣದ ಮೂಲಕ ಜುಲೈ 6ರೊಳಗೆ ಅರ್ಜಿ ಸಲ್ಲಿಸಿ ಯೋಜನೆಯ ಉಪಯೋಗ ಪಡೆಯಲು ಬೆಸ್ಕಾಂ ವಿನಂತಿಸಿದೆ.

ಶಾಶ್ವತ ವಿದ್ಯುತ್‌ ಸಂಪರ್ಕ ಪಡೆಯಲು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಸಾರ್ವತ್ರಿಕ ರಜೆ ದಿನಗಳಾದ ಜೂನ್‌ 27 (ನಾಲ್ಕನೇ ಶನಿವಾರ), 28 (ಭಾನುವಾರ) ಹಾಗೂ ಜುಲೈ 5 (ಭಾನುವಾರ) ರಂದು ಬೆಸ್ಕಾಂನ ಉಪ ವಿಭಾಗ ಕಚೇರಿಗಳು ಕಾರ್ಯನಿರ್ವಹಿಸುತ್ತವೆ.

ಮೇ 31, 2026ರೊಳಗೆ ಕಟ್ಟಡ ಪೂರ್ಣಗೊಂಡು, ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಮಾಲೀಕರು ಅರ್ಜಿ ಸಲ್ಲಿಸಿದ್ದರೆ, ಅರ್ಜಿದಾರರು/ಮಾಲೀಕರು ಸೇವಾ ಸಂಪರ್ಕ ಕಲ್ಪಿಸುವ ಅಧಿಕಾರಿಗಳ ಸಮ್ಮುಖದಲ್ಲಿ ಕಟ್ಟಡದ ಜಿಯೋ ಟ್ಯಾಗ್ ಆಧರಿತ ಫೋಟೋವನ್ನು ಸಲ್ಲಿಸಿ ಶಾಶ್ವತ ವಿದ್ಯುತ್ ಸಂಪರ್ಕವನ್ನು ಪಡೆಯಬೇಕು.

ಮೇ 31, 2026ರೊಳಗೆ ಕಟ್ಟಡ ಪೂರ್ಣಗೊಂಡು, ತಾತ್ಕಾಲಿಕ ವಿದ್ಯುತ್‌ ಸಂಪರ್ಕದಲ್ಲಿದ್ದು, ಶಾಶ್ವತ ಸಂಪರ್ಕಕ್ಕೆ ಅರ್ಜಿ ಸಲ್ಲಿಸದಿದ್ದಲ್ಲಿ, ಅರ್ಜಿದಾರರು/ಮಾಲೀಕರು ಕಟ್ಟಡದ ಸಮ್ಮುಖದಲ್ಲಿ ತೆಗೆಸಿದ ಜಿಯೋ ಟ್ಯಾಗ್ ಆಧರಿತ ಫೋಟೋವನ್ನು ಸಲ್ಲಿಸಿ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಹತ್ತಿರದ ಬೆಸ್ಕಾಂ ಉಪ ವಿಭಾಗ ಕಚೇರಿಗೆ ಭೇಟಿ ನೀಡಿ ಅಥವಾ ಬೆಸ್ಕಾಂ ಆನ್ಲೈನ್ ಜಾಲತಾಣದ ಮೂಲಕ ಅರ್ಜಿ ನೋಂದಣಿ ಮಾಡಿಕೊಳ್ಳಬೇಕು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ
ಪೊಲೀಸರಿಂದ ಅಕ್ರಮ ಕೈ ಕೋಳ: ಮಾನನಷ್ಟ ಮೊಕದ್ದಮೆ