)
ಕನ್ನಡಪ್ರಭ ವಾರ್ತೆ ಬೆಂಗಳೂರು
ವಿಧಾನಸೌಧದಲ್ಲಿ ಬುಧವಾರ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ವರ್ಷಗಟ್ಟಲೆ ಗಣಿಗಾರಿಕೆ ಆರಂಭಿಸದವರ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ ಎಂದು ಇಲಾಖಾ ಅಧಿಕಾರಿಗಳನ್ನು ಪ್ರಶ್ನಿಸಿದರು. ಅಧಿಕಾರಿಗಳ ಉತ್ತರಕ್ಕೆ ಸಮಾಧಾನಗೊಳ್ಳದ ಮುಖ್ಯಮಂತ್ರಿ ಅವರು, ರಾಜ್ಯದಲ್ಲಿ ಗಣಿಗಾರಿಕೆಗೆ ಭೂಮಿ ಪಡೆದವರ ಸಂಖ್ಯೆ ಎಷ್ಟು? ಭೂಮಿ ಲೀಸ್ಗೆ ಪಡೆದ ಪ್ರಕರಣಗಳ ಸ್ಥಿತಿ ಗತಿ ಏನಿದೆ? ಗಣಿಗಾರಿಕೆ ಆರಂಭಿಸದಿರುವವರು ಎಷ್ಟು ಮಂದಿ ಇದ್ದಾರೆ, ಅದಕ್ಕೆ ಕಾರಣಗಳೇನು, ಅರಣ್ಯ ಅನುಮತಿ ಬಾಕಿ ಇರುವ ಪ್ರಕರಣಗಳೆಷ್ಟು, ಬಾಕಿ ಉಳಿಯಲು ಕಾರಣಗಳೇನು ಎನ್ನುವುದೂ ಸೇರಿ ಸಮಗ್ರ ವರದಿ ಸಲ್ಲಿಸುವಂತೆ ಗಣಿ ಇಲಾಖೆ ಕಾರ್ಯದರ್ಶಿ ರೋಹಿಣಿ ಸಿಂದೂರಿ ಅವರಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು.
ಜೊತೆಗೆ ರಾಜ್ಯದ ಗಣಿ ನೀತಿ ಮತ್ತು ಇತರೆ ರಾಜ್ಯಗಳಲ್ಲಿ ಇರುವ ಗಣಿ ನೀತಿ, ನಿಯಮ ಮತ್ತು ಕಾನೂನುಗಳನ್ನು ಸಮಗ್ರವಾಗಿ ಅಧ್ಯಯನ ನಡೆಸಿ, ಹರಾಜು ನಡೆದು ಎಷ್ಟು ಕನಿಷ್ಠ ಅವಧಿಯೊಳಗೆ ಗಣಿಗಾರಿಕೆ ಆರಂಭಿಸಬೇಕು ಎನ್ನುವ ಬಗ್ಗೆ ವೈಜ್ಞಾನಿಕ ನಿಯಮ ರೂಪಿಸಲು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್.ಕೆ.ಅತೀಕ್ ಮತ್ತು ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಅವರಿಗೆ ಜವಾಬ್ದಾರಿ ವಹಿಸಲಾಯಿತು.ಅಕ್ರಮ ಗಣಿಗಾರಿಕೆ ವಿರುದ್ಧ 268 ಎಫ್ಐಆರ್:
ಇದೇ ವೇಳೆ, ಹಿಂದಿನ ಅವಧಿಗೆ ಅಥವಾ ಪೂರ್ವಾನ್ವಯವಾಗುವ ತೆರಿಗೆಯಿಂದ ಸರ್ಕಾರಕ್ಕೆ ಬರಬೇಕಾದ ಆದಾಯಗಳ ಮೇಲೆ ಬೀರಬಹುದಾದ ಪರಿಣಾಮಗಳ ಬಗ್ಗೆ ಸಮಗ್ರ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದ ಗಣಿ ನಿಯಮಗಳು ಮತ್ತು ಸುಪ್ರೀಂಕೋರ್ಟ್ನ ನಿರ್ದೇಶನಗಳನ್ನು ಮೀರದಂತೆ ಕ್ರಮ ವಹಿಸುವಂತೆ ಸೂಚಿಸಿದರು. ಜೊತೆಗೆ ಪೂರ್ವಾನ್ವಯದೊಂದಿಗೆ ತೆರಿಗೆ ಜಾರಿಯಾದರೆ ಸರ್ಕಾರದ ಆದಾಯದ ಮೇಲೆ ಆಗುವ ಪರಿಣಾಮಗಳ ಬಗ್ಗೆ ಮೌಲ್ಯಮಾಪನ ಮಾಡಲು ಸೂಚಿಸಿದರು.