ಅಪಘಾತ: ಕ್ರೈಸ್ತ ಪಾದ್ರಿ ಅಂಟೋನಿ ಪೀಟರ್‌ ಸಾವು

KannadaprabhaNewsNetwork |  
Published : Jul 24, 2024, 12:17 AM IST
23ಕೆಡಿವಿಜಿ21-ಶಿವಮೊಗ್ಗ-ಶಿಕಾರಿಪುರ ಮಾರ್ಗದಲ್ಲಿ ರಸ್ತೆ ಅಪಘಾತದಲ್ಲಿ ನಿಧನರಾದ ಫಾದರ್ ಡಾ.ಅಂಟೋನಿ ಪೀಟರ್. | Kannada Prabha

ಸಾರಾಂಶ

ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಸಾಗುತ್ತಿದ್ದ ವೇಳೆ ಕಾರು-ಬಸ್‌ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಾವಣಗೆರೆ ಜಿಲ್ಲೆಯ ಹರಿಹರದ ಆರೋಗ್ಯ ಮಾತೆ ಬಸಿಲಿಕದ ಧರ್ಮಗುರುವಾಗಿ ಸೇವೆ ಸಲ್ಲಿಸಿ, ಶಿಕಾರಿಪುರದ ಚರ್ಚ್‌ಗೆ ವರ್ಗಾವಣೆಯಾಗಿದ್ದ ರೆವರೆಂಡ್ ಫಾದರ್ ಅಂಟೋನಿ ಪೀಟರ್ ಮಂಗಳವಾರ ಸಾವನ್ನಪ್ಪಿದ್ದಾರೆ.

ದಾವಣಗೆರೆ: ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಸಾಗುತ್ತಿದ್ದ ವೇಳೆ ಕಾರು-ಬಸ್‌ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹರಿಹರದ ಆರೋಗ್ಯ ಮಾತೆ ಬಸಿಲಿಕದ ಧರ್ಮಗುರುವಾಗಿ ಸೇವೆ ಸಲ್ಲಿಸಿ, ಶಿಕಾರಿಪುರದ ಚರ್ಚ್‌ಗೆ ವರ್ಗಾವಣೆಯಾಗಿದ್ದ ರೆವರೆಂಡ್ ಫಾದರ್ ಅಂಟೋನಿ ಪೀಟರ್ ಮಂಗಳವಾರ ಸಾವನ್ನಪ್ಪಿದ್ದಾರೆ.

ಹರಿಹರದಲ್ಲಿ ಧರ್ಮಗುರುವಾಗಿ ಕಾರ್ಯನಿರ್ವಹಿಸುತ್ತಿದ್ದ ಅಂಟೋನಿ ಪೀಟರ್‌ ಜನಾನುರಾಗಿಯಾಗಿದ್ದರು. ಹಲವಾರು ಸಮಾಜ ಸೇವೆಗಳಿಗೆ ಸಹಕಾರ ನೀಡುತ್ತಿದ್ದರು. ಶಿಕಾರಿಪುರಕ್ಕೆ ವರ್ಗಾವಣೆಯಾದ ನಂತರ ಅಲ್ಲಿನ ಚರ್ಚ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಹರಿಹರದಲ್ಲಿ ಚಿಂತನಾ ಪ್ರತಿಷ್ಟಾನದ ಕಾರ್ಯಕ್ರಮಗಳಿಗೆ ಸದಾ ಬೆನ್ನೆಲುಬಾಗಿದ್ದರು.

ಶಿವಮೊಗ್ಗದ ಪವಿತ್ರ ಹೃದಯ ಪ್ರಾರ್ಥನಾಲಯದಲ್ಲಿ ಕ್ಯಾಥೋಲಿಕ್ ಧರ್ಮದ ಪೂಜಾ ವಿಧಾನ, ಪದ್ಧತಿ ನೆರವೇರಿಸಿದ ನಂತರ ಮೃತ ಫಾದರ್ ಡಾ.ಅಂಟೋನಿ ಪೀಟರ್‌ ಅವರ ಅಂತ್ಯ ಸಂಸ್ಕಾರ ನಡೆಸಲಾಗುವುದು.

- - - -23ಕೆಡಿವಿಜಿ21:

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸ್ತೆ ಸುರಕ್ಷತೆಗೆ ಸಾರಿಗೆ ಇಲಾಖೆ ಎಐ ಆಧರಿತ ಕ್ಯಾಮೆರಾ ಅಳವಡಿಕೆ
ಮಂಡ್ಯ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಸ್ವತಂತ್ರ ಸ್ಪರ್ಧೆ - ಸುಮಲತಾ ಪರ ನಾರಾಯಣಗೌಡ ಬ್ಯಾಟಿಂಗ್‌