ವಕ್ಫ್‌ ಕಾಯ್ದೆ ತಿದ್ದುಪಡಿ ವಿರುದ್ಧ ಬೃಹತ್ ಹೋರಾಟಕ್ಕೆ ನಿರ್ಧಾರ

KannadaprabhaNewsNetwork |  
Published : Apr 16, 2025, 12:36 AM IST
ಕೇಂದ್ರದ ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಭಟ್ಕಳದ ರಬಿತಾ ಸೊಸೈಟಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಭಟ್ಕಳ ತಂಝೀಂ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಮಾತನಾಡಿದರು. | Kannada Prabha

ಸಾರಾಂಶ

ಸಭೆಯಲ್ಲಿ ಗೋವಾದಿಂದ ಮಂಗಳೂರು ವರೆಗಿನ ಕರಾವಳಿ ಜಿಲ್ಲೆಗಳ ಮುಸ್ಲಿಂ ಮುಖಂಡರ ಒಗ್ಗಟ್ಟು ಪ್ರದರ್ಶಿಸಿ, ವಕ್ಫ್‌ ಕಾಯ್ದೆ ತಿದ್ದುಪಡಿ ವಿರುದ್ಧ ಕೇಂದ್ರ ಸರ್ಕಾರದ ಗಮನ ಸೆಳೆಯಲು ನಿರ್ಣಯಿಸಲಾಯಿತು.

ಭಟ್ಕಳ: ಕೇಂದ್ರ ಸರ್ಕಾರ ವಕ್ಫ್‌ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಬೃಹತ್ ಹೋರಾಟ ನಡೆಸಲು ಪಟ್ಟಣದ ರಬಿತಾ ಸಭಾಂಗಣದಲ್ಲಿ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ನೇತೃತ್ವದಲ್ಲಿ ನಡೆದ ಮುಸ್ಲಿಂ ಮುಖಂಡರ, ಉಲೇಮಾಗಳ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಯಿತು.

ಸಭೆಯಲ್ಲಿ ಗೋವಾದಿಂದ ಮಂಗಳೂರು ವರೆಗಿನ ಕರಾವಳಿ ಜಿಲ್ಲೆಗಳ ಮುಸ್ಲಿಂ ಮುಖಂಡರ ಒಗ್ಗಟ್ಟು ಪ್ರದರ್ಶಿಸಿ, ವಕ್ಫ್‌ ಕಾಯ್ದೆ ತಿದ್ದುಪಡಿ ವಿರುದ್ಧ ಕೇಂದ್ರ ಸರ್ಕಾರದ ಗಮನ ಸೆಳೆಯಲು ನಿರ್ಣಯಿಸಲಾಯಿತು.

ಸಭೆಯಲ್ಲಿ ಕರಾವಳಿ ಜಿಲ್ಲೆಗಳ ಮುಸ್ಲಿಮರ ಐಕ್ಯತೆಯ ಮಹತ್ವವನ್ನು ಒತ್ತಿ ಹೇಳಲಾಯಿತು. ತಂಝೀಮ್ ನೇತೃತ್ವದಲ್ಲಿ ಕರಾವಳಿಯ ಸಮಸ್ತ ಮುಸ್ಲಿಮರ ಏಕತೆಯ ಸಂಕೇತವಾಗಿ ಒಂದು ವೇದಿಕೆಯನ್ನು ರಚಿಸಲು ಸಭೆ ಒಪ್ಪಿಗೆ ನೀಡಿತು.ವಕ್ಫ್ ಕಾಯ್ದೆ ತಿದ್ದುಪಡಿ ಸೇರಿದಂತೆ ಕೇಂದ್ರ ಸರ್ಕಾರದ ಕೆಲವು ಕಾಯ್ದೆ ಜಾರಿ ವಿರೋಧಿಸಿ ಶುಕ್ರವಾರ ಜಿಲ್ಲೆಯಾದ್ಯಂತ ಪ್ರತಿಭಟನಾ ಸಭೆಗಳು, ಮನವಿ ಸಲ್ಲಿಕೆ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ತೀರ್ಮಾನಿಸಲಾಯಿತು. ಮುಂಬರುವ ದಿನಗಳಲ್ಲಿ ಸಿಎಎ ಮತ್ತು ಎನ್‌ಆರ್‌ಸಿ ರೀತಿಯಲ್ಲಿ ವಕ್ಫ್‌ ಕಾಯ್ದೆ ವಿರೋಧಿಸಿ ಸತತ ಪ್ರತಿಭಟನೆಗಳಿಗೆ ಕರಾವಳಿಯ ಮುಸ್ಲಿಂ ಸಮುದಾಯವು ಒಗ್ಗಟ್ಟಾಗಬೇಕು ಎಂದು ಸಭೆಯಲ್ಲಿ ಕರೆ ನೀಡಲಾಯಿತು.

ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಂಬಂದ್ರಿ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಮಂಗಳೂರಿನ ಮಾಜಿ ಮೇಯರ್ ಅಶ್ರಫ್ ಬ್ಯಾರಿ, ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಸದಸ್ಯ ಮೌಲಾನಾ ಮುಹಮ್ಮದ್ ಇಲಿಯಾಸ್ ನದ್ವಿ, ಮಾಜಿ ಶಾಸಕ ಮೋಹಿದ್ದೀನ್ ಬಾವಾ, ರಾಬಿತಾ ಸೊಸೈಟಿಯ ಪ್ರಧಾನ ಕಾರ್ಯದರ್ಶಿ ಡಾ. ಅತಿಕುರ್ರಹ್ಮಾನ್ ಮುನಿರಿ, ಉಡುಪಿ ಮುಸ್ಲಿಮ್ ಒಕ್ಕೂಟದ ಮುಹಮ್ಮದ್ ಮೌಲಾ, ತಂಝೀಮ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಖೀಬ್ ಎಂ.ಜೆ., ತಂಝೀಮ್ ರಾಜಕೀಯ ಸಮಿತಿ ಸಂಚಾಲಕ ಸೈಯ್ಯದ್ ಇಮ್ರಾನ್ ಲಂಕಾ, ಜಮಾಅತೆ ಇಸ್ಲಾಮಿ ಹಿಂದ್ ಉತ್ತರ ಕನ್ನಡ ಜಿಲ್ಲಾ ಸಂಚಾಲಕ ಅಬ್ದುಲ್ ಮನ್ನಾನ್ ಸಿರ್ಸಿ, ಎಸ್‌ಡಿಪಿಐ ಜಿಲ್ಲಾಧ್ಯಕ್ಷ ತೌಫೀಖ್ ಬ್ಯಾರಿ, ನಮ್ಮ ನಾಡು ಒಕ್ಕೂಟದ ಕಾರ್ಯದರ್ಶಿ ಹುಸೇನ್ ಹೈಕಾಡಿ, ಎಪಿಸಿಆರ್ ರಾಜ್ಯ ಕಾರ್ಯದರ್ಶಿ ಹುಸೇನ್ ಕೋಡಿ ಬೇಂಗ್ರೆ ಹಾಗೂ ಗೋವಾ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ವಿವಿಧ ಜಮಾಅತ್‌ಗಳ ಮುಖಂಡರು, ಪ್ರತಿನಿಧಿಗಳು ಭಾಗವಹಿಸಿದ್ದರು.

ಕೇಂದ್ರದ ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಭಟ್ಕಳದ ರಬಿತಾ ಸೊಸೈಟಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಭಟ್ಕಳ ತಂಝೀಂ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ