ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಧಾರ: ಜಿಲ್ಲಾಧಿಕಾರಿ ಕೆ.ಎಂ.ಜಾನಕಿ

KannadaprabhaNewsNetwork |  
Published : Oct 17, 2024, 12:57 AM ISTUpdated : Oct 17, 2024, 12:58 AM IST
ಕರ್ನಾಟಕ ವೈಭವ-50 | ಪ್ರಬಂಧ, ಸಮೂಹ ಗಾಯನ ಸ್ಪರ್ಧೆಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ | Kannada Prabha

ಸಾರಾಂಶ

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಜರುಗಿದ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಜಿಲ್ಲೆಯಾದ್ಯಂತ ನವೆಂಬರ್‌ 1ರಂದು ಆಚರಿಸಲ್ಪಡುವ ಕನ್ನಡ ರಾಜ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಹೇಳಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಜರುಗಿದ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂದು ಬೆಳಗ್ಗೆ 7.30ಕ್ಕೆ ಜಿಲ್ಲಾಡಳಿತ ಭವನದ ಮುಂದೆ ಇರುವ ಅಶೋಕ ಸ್ಥಂಬದ ವೃತ್ತದಿಂದ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ನಂತರ ಜಿಲ್ಲಾ ಕ್ರೀಡಾಂಗಣದಲ್ಲಿ 9 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ ಎಂದು ತಿಳಿಸಿದರು.

ಮೆರವಣಿಗೆಯಲ್ಲಿ ನಾಡಿನ ಸಾಹಿತ್ಯ, ಇತಿಹಾಸ, ಸಂಸ್ಕೃತಿ, ಚಾಲುಕ್ಯರ ಪರಂಪರೆ ಹಾಗೂ ಕರ್ನಾಟಕ ವೈಭವ ಬಿಂಬಿಸುವಂತ ಸ್ಥಬ್ಧ ಚಿತ್ರ ಹಾಗೂ ವಿವಿಧ ಸಾಂಸ್ಕೃತಿಕ ಕಲಾ ತಂಡ ಆಹ್ವಾನಿಸುವಂತೆ ಸಂಬಂಧಿಸಿದ ಇಲಾಖೆಗಳಿಗೆ ತಿಳಿಸಲಾಯಿತು. ಕನ್ನಡ ಸಾಹಿತ್ಯ ಪರಂಪರೆಗೆ ಬಾಗಲಕೋಟೆ ಜಿಲ್ಲೆ ಪಾತ್ರ ಕುರಿತು ಪ್ರಬಂಧ ಸ್ಪರ್ಧೆ ಹಾಗೂ ಕನ್ನಡ ನಾಡು ನುಡಿಯ ಕುರಿತು ಕನ್ನಡ ಗೀತೆಗಳ ಸಮೂಹ ಗಾಯನ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಣೆಗೆ ಕ್ರಮವಹಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಕಾರ್ಯಕ್ರಮ ಸಿದ್ಧತೆಗೆ ವಿವಿಧ ಸಮಿತಿ ರಚಿಸಲಾಗಿದ್ದು, ಸಮಿತಿ ಸದಸ್ಯರ ಕರ್ತವ್ಯಗಳ ಬಗ್ಗೆ ಸಭೆ ಕರೆದು ಕಾರ್ಯಕ್ರಮ ರೂಪು-ರೇಷೆ ತಯಾರಿಸಿ, ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಲು ತಿಳಿಸಿದರು. ಕಾರ್ಯಕ್ರಮದಲ್ಲಿ ರಾಷ್ಟ್ರ ಗೀತೆ, ನಾಡಗೀತೆ ಹಾಗೂ ಕುವೆಂಪು ವಿರಚಿತ ನೇಗಿಲಯೋಗಿ ಗೀತೆ ಹಾಡಿಸುವ ವ್ಯವಸ್ಥೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಲಾಯಿತು.

ಜಿಲ್ಲಾ ಕ್ರೀಡಾಂಗಣ ಹಾಗೂ ಮೆರವಣಿಗೆ ಸ್ಥಳಗಳನ್ನು ಸ್ವಚ್ಛತೆ, ಶುದ್ಧ ಕುಡಿಯುವ ನೀರು, ವೇದಿಕೆ, ವಿದ್ಯುತ್, ಧ್ವನಿವರ್ಧಕಗಳ ಹಾಗೂ ಜನರೇಟರ್‌, ಆಸನಗಳ ವ್ಯವಸ್ಥೆಗಳ ಜೊತೆಗೆ ಪೊಲೀಸ್ ಬಂದೋಬಸ್ತ್‌ ವ್ಯವಸ್ಥೆ ಮಾಡಲು ತಿಳಿಸಿದರು. ಶಾಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ, ಗಣ್ಯರಿಗೆ ಉಪಹಾರ ವ್ಯವಸ್ಥೆ ಮಾಡುವದರ ಜೊತೆಗೆ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳಿಗೆ ಹಳೆ ಬಾಗಲಕೋಟೆಯಿಂದ ನವನಗರಕ್ಕೆ ಬಂದು ಹೋಗಲು ಬಸ್‌ ವ್ಯವಸ್ಥೆ ಮಾಡುವಂತೆ ತಿಳಿಸಲಾಯಿತು.

ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಎಲ್ಲ ಸರ್ಕಾರಿ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚಿಸಲಾಯಿತು. ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡರು. ಜಿಲ್ಲೆಯಾದ್ಯಂತ ಕನ್ನಡಕ್ಕೆ ಮೊದಲ ಆದ್ಯತೆ ನೀಡುವ ಜೊತೆಗೆ ಜಿಲ್ಲೆಯಲ್ಲಿ ಶೇ.60ರಷ್ಟು ಸಮರ್ಪಕ ಕನ್ನಡ ಅನುಷ್ಠಾನ ಹಾಗೂ ಕನ್ನಡದಲ್ಲಿಯೇ ನಾಮಫಲಕ ಕಡ್ಡಾಯವಾಗಿ ಅಳವಡಿಕೆಗೆ ಕ್ರಮವಹಿಸುವಂತೆ ಕನ್ನಡಪರ ಸಂಘಟನೆ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿಕೊಂಡರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಇದ್ದರು. ಪ್ರಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಸ್ವಾಗತಿಸಿ, ಕೊನೆಗೆ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!