ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ತಾಲೂಕು ಕಾಂಗ್ರೆಸ್ ಕಾರ್ಯಕರ್ತರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕ್ಷೇತ್ರದ ಶಾಸಕ ಎನ್.ಚಲುವರಾಯಸ್ವಾಮಿ ಅವರು ನಾಲ್ಕನೇ ಬಾರಿಗೆ ಸಚಿವರಾಗಿರುವುದು ತಾಲೂಕು ಹಾಗೂ ಜಿಲ್ಲೆಯ ಜನರಿಗೆ ಅತ್ಯಂತ ಹೆಮ್ಮೆಯ ವಿಷಯ ಎಂದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಎನ್.ಚಲುವರಾಯಸ್ವಾಮಿ ಮಂತ್ರಿಯಾಗಿರುವುದು ಅವರ ದೀರ್ಘ ರಾಜಕೀಯ ಅನುಭವ, ಆಡಳಿತ ದಕ್ಷತೆ ಹಾಗೂ ಜನಪರ ಕಾರ್ಯವೈಖರಿಗೆ ದೊರೆತ ಗೌರವವಾಗಿದೆ ಎಂದರು.ಆ.10ರ ಸೋಮವಾರ ಬೆಳಗ್ಗೆ ತಾಲೂಕಿಗೆ ಆಗಮಿಸುತ್ತಿರುವ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ಅದ್ಧೂರಿ ಸ್ವಾಗತ ಕೋರಿ ಬರಮಾಡಿಕೊಳ್ಳಲು ಕಾಂಗ್ರೆಸ್ ಕಾರ್ಯಕರ್ತರು ಸಜ್ಜಾಗಬೇಕು. ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಲಿಗೆರೆ ಟೋಲ್ ಕೇಂದ್ರದಿಂದ ನಾಗಮಂಗಲ ಪಟ್ಟಣದ ಟಿ.ಮರಿಯಪ್ಪ ವೃತ್ತದವರೆಗೆ 2000ಕ್ಕೂ ಹೆಚ್ಚು ಬೈಕ್ಗಳು ಹಾಗೂ 300ಕ್ಕೂ ಹೆಚ್ಚು ಕಾರುಗಳ ರ್ಯಾಲಿಯೊಂದಿಗೆ ತೆರೆದ ವಾಹನದಲ್ಲಿ ಸಚಿವರನ್ನು ಮೆರವಣಿಗೆ ಮೂಲಕ ಕರೆತರಲಾಗುವುದು ಎಂದರು.
ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ ಮಾತನಾಡಿ, ಜನಪರ ಆಡಳಿತ, ಅಭಿವೃದ್ಧಿಪರ ಚಿಂತನೆ, ಸಂಘಟನಾ ಸಾಮರ್ಥ್ಯ ಹಾಗೂ ಆಡಳಿತ ದಕ್ಷತೆಯನ್ನು ಗುರುತಿಸಿ ಪಕ್ಷದ ವರಿಷ್ಠರು ತಂದೆಯವರಿಗೆ ಮತ್ತೊಮ್ಮೆ ಸಚಿವ ಸಂಪುಟದಲ್ಲಿ ಮಹತ್ವದ ಜವಾಬ್ದಾರಿ ನೀಡಿದ್ದಾರೆ ಎಂದರು.
ಸಭೆಯಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮೂಡ್ಲೀಗೌಡ, ಮುಖಂಡ ಸುನಿಲ್ ಲಕ್ಷ್ಮೀಕಾಂತ್, ಮುಖಂಡರಾದ ಎಚ್.ಟಿ.ಕೃಷ್ಣೇಗೌಡ, ಬಿ.ರಾಜೇಗೌಡ, ಎಂ.ಪ್ರಸನ್ನ, ತಿಮ್ಮರಾಯಿಗೌಡ ಸೇರಿದಂತೆ ನೂರಾರು ಮಂದಿ ಕಾರ್ಯಕರ್ತರು ಇದ್ದರು.