ಹಿರೇಸಿಂದೋಗಿ ಹೋಬಳಿಯಾಗಿಸಲು ತೀರ್ಮಾನ

KannadaprabhaNewsNetwork |  
Published : Nov 08, 2025, 02:15 AM IST
7ಕೆಪಿಎಲ್24 ಹಿರೇಸಿಂದೋಗಿಯಲ್ಲಿ 50 ಹಾಸಿಗೆಯ ಸಮುದಾಯ ಅರೋಗ್ಯ ಕೇಂದ್ರಕ್ಕೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅಡಿಗಲ್ಲು ನೆರವೇರಿಸಿದರು. | Kannada Prabha

ಸಾರಾಂಶ

ಹಿರೇಸಿಂದೋಗಿ ಗ್ರಾಮವನ್ನು ಹೋಬಳಿಯನ್ನಾಗಿ ಮಾಡಲು ಈಗಾಗಲೇ ತೀರ್ಮಾನ ಮಾಡಿದ್ದು, ಈ ಕುರಿತು ಕಂದಾಯ ಇಲಾಖೆಯ ಸಚಿವ ಕೃಷ್ಣಭೈರಗೌಡ ಅವರಿಗೆ ಮನವಿ ಮಾಡಿದ್ದೇನೆ

ಕೊಪ್ಪಳ: ಹಿರೇಸಿಂದೋಗಿ ಗ್ರಾಮವನ್ನು ಹೋಬಳಿ ಕೇಂದ್ರವನ್ನಾಗಿ ಮಾಡುವುದಾಗಿ ಶಾಸಕ ರಾಘವೇಂದ್ರ ಹಿಟ್ನಾಳ ಭರವಸೆ ನೀಡಿದ್ದಾರೆ.

ತಾಲೂಕಿನ ಹಿರೇಸಿಂದೋಗಿ ಜಿಪಂ ವ್ಯಾಪ್ತಿಯ ದದೇಗಲ್, ಹಲಿಗೇರಿ, ಕೋಳೂರು, ಕಾಟ್ರಳ್ಳಿ, ಹಿರೇಸಿಂದೋಗಿ, ಚಿಕ್ಕಸಿಂದೋಗಿ, ಗುನ್ನಳ್ಳಿ, ವರತಟ್ನಾಳ ಹಾಗೂ ಮಂಗಳಾಪುರ ಅಂದಾಜು ಮೊತ್ತ ₹8 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ನೆರವೇರಿಸಿ ಮಾತನಾಡಿದರು.

ಹಿರೇಸಿಂದೋಗಿ ಗ್ರಾಮವನ್ನು ಹೋಬಳಿಯನ್ನಾಗಿ ಮಾಡಲು ಈಗಾಗಲೇ ತೀರ್ಮಾನ ಮಾಡಿದ್ದು, ಈ ಕುರಿತು ಕಂದಾಯ ಇಲಾಖೆಯ ಸಚಿವ ಕೃಷ್ಣಭೈರಗೌಡ ಅವರಿಗೆ ಮನವಿ ಮಾಡಿದ್ದೇನೆ. ಸಚಿವರೂ ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಘೋಷಣೆ ಮಾಡುವ ಭರವಸೆ ನೀಡಿದ್ದಾರೆ. ಇದರಿಂದ ಹಿರೇಸಿಂದೋಗಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ ಹೆಚ್ಚಿನ ಅನುಕೂಲ ಆಗಲಿದೆ ಎಂದರು.

ಆರೋಗ್ಯ ಕೇಂದ್ರಕ್ಕೆ ಅಡಿಗಲ್ಲು: ಹಿರೇಸಿಂದೋಗಿಯಲ್ಲಿರುವ 30ಹಾಸಿಗೆಯ ಸಮುದಾಯ ಆರೋಗ್ಯ ಕೇಂದ್ರವನ್ನು 50 ಬೆಡ್ಡಿನ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲು ಆರೋಗ್ಯ ಸಚಿವರಲ್ಲಿ ಮನವಿ ಮಾಡಿದ್ದೆ. ನನ್ನ ಮನವಿಗೆ ಸ್ಪಂದಿಸಿದ ಸಚಿವರು 50 ಬೆಡ್ಡಿನ ಅರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಿ ಕಟ್ಟಡ ನಿರ್ಮಾಣಕ್ಕೆ ₹6 ಕೋಟಿ ಅನುದಾನ ಮಂಜೂರು ಮಾಡಿದ್ದಾರೆ.ಇಂದು ಕಾಮಗಾರಿಗೆ ಅಡಿಗಲ್ಲು ನೆರವೇರಿಸಿದ್ದೇನೆ,ನಾಳೆಯಿಂದಲೇ ಕಾಮಗಾರಿ ಪ್ರಾರಂಭ ಮಾಡುವಂತೆ ಏಜನ್ಸಿಯವರಿಗೆ ಸೂಚನೆ ನೀಡಿದ್ದೇನೆ ಎಂದರು.

ಮೈನಳ್ಳಿ ಕ್ರಾಸ್‌ನಿಂದ ಕಂಪ್ಲಿ ಕ್ರಾಸ್ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಆಗಿದೆ. ಕಂಪ್ಲಿ ಕ್ರಾಸ್ ನಿಂದ ಬೆಳಗಟ್ಟಿವರೆಗಿನ ರಸ್ತೆ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ಅದು ಕೂಡ ಈಗಾಗಲೇ 80% ಕಾಮಗಾರಿ ಮುಗಿದಿದ್ದು, ಅಳವಂಡಿಯಲ್ಲಿ ಕಾಮಗಾರಿ ನಡೆಯುತ್ತಿದೆ. ಇನ್ನೂ ಬಾಕಿ ಇರುವ ಹಿರೇಸಿಂದೋಗಿಯಿಂದ ಮೈನಳ್ಳಿ ಕ್ರಾಸ್ ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಕೊಟ್ಟಿದ್ದೇವೆ. ಕಾಮಗಾರಿ ಕೂಡ ಪ್ರಾರಂಭ ಮಾಡುತ್ತೇವೆ ಎಂದರು.

ಗ್ರಾಪಂ ಅಧ್ಯಕ್ಷೆ ಗಾಳೆವ್ವ ಪೂಜಾರ, ಕೋಳೂರು ಗ್ರಾಪಂ ಅಧ್ಯಕ್ಷೆ ಶಿವಮ್ಮ ಗಾಳೆಪ್ಪ ಪೂಜಾರ, ಗೂಳಪ್ಪ ಹಲಿಗೇರಿ, ಪ್ರಸನ್ನ ಗಡಾದ, ಕೃಷ್ಣರಡ್ಡಿ ಗಲಬಿ, ಹನುಮರೆಡ್ಡಿ ಅಂಗನಕಟ್ಟಿ, ಗಾಳೆಪ್ಪ ಪೂಜಾರ, ಕೇಶವ್ ರೆಡ್ಡಿ, ನಿಂಗಪ್ಪ ಯತ್ನಟ್ಟಿ, ಡಿಎಚ್ಒ ಲಿಂಗರಾಜ್, ಪಂಪಣ್ಣ ಪೂಜಾರಿ, ಹನಮಂತ ಹಳ್ಳಿಕೇರಿ, ಸುರೇಶ ಹಳ್ಳಿಕೇರಿ, ದೇವಪ್ಪ ಹಲಿಗೇರಿ, ವಸಂತ ಹೊರಟಾತ್ನಾಳ, ವಿರೂಪಾಕ್ಷಪ್ಪ ಚಿಕ್ಕಸಿಂದೋಗಿ, ಶಿವಣ್ಣ ಗುನ್ನಳ್ಳಿ, ಅಂದಾನಸ್ವಾಮಿ, ಮಲ್ಲು ಪೂಜಾರ್, ಗವಿಸಿದ್ದನಗೌಡ ಪಾಟೀಲ್, ಪರಶುರಾಮ್ ಕೆರೆಹಳ್ಳಿ, ತಹಸೀಲ್ದಾರ್ ವಿಠ್ಠಲ್ ಚೌಗಲೇ, ಅಕ್ಬರ್ ಪಲ್ಟಾನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV

Recommended Stories

83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!