ಬರ ಪ್ರದೇಶವೆಂದು ಘೋಷಿಸಿ ಎಕರೆಗೆ ₹ 30 ಸಾವಿರ ಪರಿಹಾರ ಕೊಡಿ

KannadaprabhaNewsNetwork |  
Published : Jul 13, 2026, 03:15 AM IST
ರಾಜ್ಯದೆಲ್ಲೆಡೆ ಬರಗಾಲ ಎಂದು ಘೋಷಿಸುವಂತೆ ರೈತ ಹೋರಾಟ ಸಮಿತಿ ಕಾರ್ಯಕರ್ತರು ಬ್ಯಾಡಗಿ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸುವ ಮೂಲಕ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು. | Kannada Prabha

ಸಾರಾಂಶ

ಅಸಮರ್ಪಕ ಮಳೆಯಿಂದ ಕೃಷಿಕರ ಬದುಕು ಅನಿಶ್ಚಿತತೆಯಿಂದ ಕೂಡಿದ್ದು, ಕೂಡಲೇ ಸರ್ಕಾರ ರಾಜ್ಯದೆಲ್ಲೆಡೆ ಬರಗಾಲ ಎಂದು ಘೋಷಿಸುವಂತೆ ರೈತ ಹೋರಾಟ ಸಮಿತಿ ಕಾರ್ಯಕರ್ತರು ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸುವ ಮೂಲಕ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.

ಬ್ಯಾಡಗಿ: ಅಸಮರ್ಪಕ ಮಳೆಯಿಂದ ಕೃಷಿಕರ ಬದುಕು ಅನಿಶ್ಚಿತತೆಯಿಂದ ಕೂಡಿದ್ದು, ಕೂಡಲೇ ಸರ್ಕಾರ ರಾಜ್ಯದೆಲ್ಲೆಡೆ ಬರಗಾಲ ಎಂದು ಘೋಷಿಸುವಂತೆ ರೈತ ಹೋರಾಟ ಸಮಿತಿ ಕಾರ್ಯಕರ್ತರು ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸುವ ಮೂಲಕ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಮುರಿಗೆಪ್ಪ ಶೆಟ್ಟರ, ರಾಜ್ಯ ನಿರಂತರ ಬರಗಾಲ, ಅತೀವೃಷ್ಟಿ, ಅನಾವೃಷ್ಟಿಯಿಂದ ರಾಜ್ಯದ ರೈತರು ನಿರಂತರವಾಗಿ ಸಂಕಷ್ಟದಲ್ಲಿ ಸಿಲುಕುತ್ತಿದ್ದಾರೆ. ರೈತರು ಸಾಲಗಾರರಾಗಿ ಆತ್ಮಹತ್ಯೆಗಳತ್ತ ಮುಖ ಮಾಡಿದ್ಧಾರೆ. ವಿಶೇಷವಾಗಿ ರೈತ ಕಾರ್ಮಿಕರು ಗ್ರಾಮೀಣ ಪ್ರದೇಶದಲ್ಲಿ ಜೀವನ ನಿರ್ವಹಣೆ ದುಸ್ತರವಾಗಿದ್ದು ಉದ್ಯೋಗವನ್ನರಿಸಿ ಬೇರೆಡೆಗೆ ವಲಸೆ ಹೋಗುತ್ತಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ರೈತ ಪರ ಚಿಂತನೆ ನಡೆಸಿ ಸಹಾಯಕ್ಕೆ ಮುಂದಾಗುವಂತೆ ಆಗ್ರಹಿಸಿದರು.

ಬೆಳೆ ನಾಶಪಡಿಸುತ್ತಿದ್ದಾರೆ: ಗೋಣೆಪ್ಪ ಸಂಕಣ್ಣನವರ ಮಾತನಾಡಿ, ಬಿತ್ತನೆ ಮಾಡಿದ ರೈತರು ಮಳೆ ನಿರೀಕ್ಷೆಯಲ್ಲಿದ್ದರು. ಆದರೆ ಮಳೆ ಕೊರತೆಯಿಂದ ಕೆಲವರು ಮತ್ತೊಮ್ಮೆ ಬಿತ್ತನೆ ಮಾಡಿದ್ದಾರೆ. ಇನ್ನೂ ಕೆಲವರು ಮಳೆ ಬಾರದೆ ಬೆಳೆ ನಾಶಪಡಿಸಿದ್ಧಾರೆ. ಇದೀಗ ಕೆಲವು ಕಡೆ ಮಳೆಯಾಗಿದೆ. ಇನ್ನೂ ಕೆಲವೆಡೆ ಬಿತ್ತನೆಯೇ ಆಗಿರುವುದಿಲ್ಲ, ಹೀಗಾಗಿ ರಾಜ್ಯದಲ್ಲಿ ಸಂಪೂರ್ಣ ಬರದ ಛಾಯೆಯಿದ್ದು ಸರ್ಕಾರ ಕೂಡಲೇ ಬರಗಾಲ ಪ್ರದೇಶ ಎಂದು ಘೋಷಿಸುವಂತೆ ಆಗ್ರಹಿಸಿದರು.

ಪ್ರತಿ ಎಕರೆಗೆ ಕನಿಷ್ಠ ರು. 30 ಸಾವಿರ ಪರಿಹಾರ: ಚಂದ್ರಶೇಕರ ಮಾಗೋಡ ಮಾತನಾಡಿ, ಬರದ ಹಿನ್ನೆಲೆಯಲ್ಲಿ ಪ್ರತಿ ಎಕರೆಗೆ ರು.30 ಸಾವಿರ ಪರಿಹಾರ ಘೋಷಿಸಬೇಕು, ರೈತರ ಜಾನುವಾರುಗಳಿಗೆ ಮೇವು, ನೀರಿನ ವ್ಯವಸ್ಥೆ ಮಾಡಬೇಕು, ರೈತ ಕಾರ್ಮಿಕರಿಗೆ ಗುಳೆ ಹೋಗದೆ ಬೇರೆ ಕಾಮಗಾರಿಗಳನ್ನು ಪ್ರಾರಂಭಿಸಬೇಕು. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಕಳೆದ ಸಾಲಿನ ಪರಿಹಾರ ಸಮರ್ಪಕವಾಗಿ ಎಲ್ಲಾ ರೈತರಿಗೆ ಸಂದಾಯವಾಗಿಲ್ಲ, ಕಾಟಾಚಾರಕ್ಕೆ ಕೆಲವೆ ರೈತರಿಗೆ ಪರಿಹಾರ ಘೋಷಣೆ ಮಾಡಿದ್ದು, ಅನ್ಯಾಯವಾಗಿರುವುದನ್ನು ಸರಿಪಡಿಸಿ ಪುನರ್ ಪರಿಶೀಲಿಸಿ ಎಲ್ಲ ರೈತರಿಗೆ ಪರಿಹಾರ ಘೋಷಣೆ ಮಾಡುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ರೈತ ಸಂಘದ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವೈ. ರಾಮಕೃಷ್ಣರ ನಿರ್ಧಾರ ಸಾವಿರಾರು ಜನರಿಗೆ ಆಶ್ರಯ
ವಿದ್ಯಾರ್ಥಿಗಳಿಗೆ ಶಿಸ್ತು ಪರಿಶ್ರಮ ಯಶಸ್ಸಿನ ಮೆಟ್ಟಿಲು