ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದಲ್ಲಿ ಸಂಸದರ ನಿವಾಸ ಶಿವ ಪಾರ್ವತಿಗೆ ಭಾನುವಾರ ಭೇಟಿ ನೀಡಿದ್ದ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರಿಗೆ ಮನವಿ ಪತ್ರ ಅರ್ಪಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಜಗಳೂರು ತಾಲೂಕನ್ನು ತೀವ್ರ ಬರಪೀಡಿತ ತಾಲೂಕು ಎಂಬುದಾಗಿ ಘೋಷಿಸುವಂತೆ ಆಗ್ರಹಿಸಿದರು.
ಇದೇ ವೇಳೆ ಮಾತನಾಡಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಜಗಳೂರು ತಾಲೂಕಿನ ಬರ ಪರಿಸ್ಥಿತಿ ಗಂಭೀರವಾಗಿದೆ. ಕೇಂದ್ರ ಸರ್ಕಾರದ ಬರ ನಿರ್ವಹಣಾ ಕೈಪಿಡಿ-2020ರ ಮಾನದಂಡಗಳ ಅನ್ವಯ ದಾವಣಗೆರೆ ಜಿಲ್ಲೆಯ ಬರ ಪರಿಸ್ಥಿತಿಯನ್ನು ಪರಿಶೀಲಿಸಿದಾಗ ಜಗಳೂರು ತಾಲೂಕನ್ನು ಹೊರತುಪಡಿಸಿ, ಉಳಿದ ತಾಲೂಕುಗಳು ಬರಪೀಡಿತವೆಂದು ಘೋಷಣೆಯಾಗಿವೆ. ಹಿಂದುಳಿದ ತಾಲೂಕಾದ ಜಗಳೂರು ನಿರಂತಪ ಬರ ಪರಿಸ್ಥಿತಿಗೆ ತುತ್ತಾಗ ತಾಲೂಕಾಗಿದ್ದು, ಈ ಸಲವೂ ಮಳೆ ಕೊರತೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದೆ ಎಂದರು.ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಸಮರ್ಪಕ ಮಳೆಯಾಗದ ಕಾರಣ ಬಿತ್ತಿದ ಬೆಳೆಗಳು ಒಣಗುತ್ತಿವೆ. ನಿರೀಕ್ಷಿತ ಪ್ರಮಾಣದಲ್ಲಿ ಬಿತ್ತನೆಯಾಗಿಲ್ಲ. ಮೇವಿನ ಕೊರತೆಯೊಂದಿಗೆ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಇದರಿಂದ ರೈತರ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ. ಜಿಲ್ಲೆಯ ಬರಪೀಡಿತ ತಾಲೂಕುಗಳ ಪಟ್ಟಿಗೆ ಜಗಳೂರನ್ನೂ ಸೇರ್ಪಡೆ ಮಾಡುವಂತೆ ಜಿಲ್ಲಾಧಿಕಾರಿಗಳು ಈಗಾಗಲೇ ಜಿಲ್ಲಾ ಸಚಿವರೊಂದಿಗೆ ಚರ್ಚಿಸಿ, ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಜಿಲ್ಲಾ ಸಚಿವರು, ತಾವು ಸಹ ಪ್ರತ್ಯೇಕವಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ ಎಂದು ತಿಳಿಸಿದರು.
ಸಚಿವ ಕೆ.ಎಸ್.ಬಸವಂತಪ್ಪ, ದಕ್ಷಿಣ ಶಾಸಕ ಸಮರ್ಥ ಎಂ.ಶಾಮನೂರು, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಇತರರು ಇದ್ದರು.
- ಡಾ.ಪ್ರಭಾ ಮಲ್ಲಿಕಾರ್ಜುನ, ಸಂಸದೆ.