ಗುಂಡಿ ಮುಚ್ಚಿದ ಬಳಿಕವೇ ಆ ರಸ್ತೆ ‘ಗುಂಡಿ ಮುಕ್ತ ರಸ್ತೆ’ ಎಂದು ಘೋಷಿಸಿ : ರಾಜೇಂದ್ರ ಚೋಳನ್

KannadaprabhaNewsNetwork |  
Published : Sep 30, 2025, 02:00 AM IST
Bangalore Central 1 | Kannada Prabha

ಸಾರಾಂಶ

ಗುಂಡಿಗಳನ್ನು ಮುಚ್ಚಿದ ಬಳಿಕ ಅಂತಹ ರಸ್ತೆಯನ್ನು ‘ಗುಂಡಿ ಮುಕ್ತ ರಸ್ತೆ’ ಎಂದು ಘೋಷಿಸುವಂತೆ ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ಚಿಕ್ಕಪೇಟೆ ವಿಭಾಗದ ರಸ್ತೆಗಳಲ್ಲಿ ಬೈಕ್‌ನಲ್ಲಿ ಸಂಚರಿಸಿ  ಸಮಸ್ಯೆಗಳನ್ನು ಪರಿಶೀಲಿಸಿದರು

 ಬೆಂಗಳೂರು : ಗುಂಡಿಗಳನ್ನು ಮುಚ್ಚಿದ ಬಳಿಕ ಅಂತಹ ರಸ್ತೆಯನ್ನು ‘ಗುಂಡಿ ಮುಕ್ತ ರಸ್ತೆ’ ಎಂದು ಘೋಷಿಸುವಂತೆ ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸೋಮವಾರ ಚಿಕ್ಕಪೇಟೆ ವಿಭಾಗದ ರಸ್ತೆಗಳಲ್ಲಿ ಸುಮಾರು 25 ಕಿ.ಮೀ. ಬೈಕ್‌ನಲ್ಲಿ ಸಂಚರಿಸಿ ರಸ್ತೆ ಗುಂಡಿಗಳು, ದುರಸ್ತಿ ಕಾಮಗಾರಿಗಳು ಹಾಗೂ ಇತರೆ ಸಮಸ್ಯೆಗಳನ್ನು ಪರಿಶೀಲಿಸಿದ ಅವರು, ಗುಂಡಿ ಮುಕ್ತವಾಗಿರುವ ರಸ್ತೆಗಳಲ್ಲಿ ಜಿಬ್ರಾ ಕ್ರಾಸಿಂಗ್, ಕ್ಯಾಟ್ ಐಸ್, ಲೈನ್ ಮಾರ್ಕಿಂಗ್, ಕರ್ಬ್‌ಗಳಿಗೆ ಬಣ್ಣ ಹಚ್ಚುವ ಮೂಲಕ ಸಮಗ್ರವಾಗಿ ಅಭಿವೃದ್ಧಿ ಪಡಿಸಬೇಕು. ನಂತರವೇ ಗುಂಡಿ ಮುಕ್ತ ರಸ್ತೆ ಎಂದು ಘೋಷಿಸಬೇಕು ಎಂದು ತಿಳಿಸಿದರು.

ಚಿಕ್ಕಪೇಟೆ ವಿಭಾಗದ ಪ್ರಮುಖ ಜಂಕ್ಷನ್‌ಗಳನ್ನು ಬೇರೆ ಬೇರೆ ವಿನ್ಯಾಸದೊಂದಿಗೆ ಅಭಿವೃದ್ಧಿಪಡಿಸಬೇಕು. ಹೊಸೂರು ರಸ್ತೆಯ ಮೇಲ್ಮೈ ಹೆಚ್ಚು ಹಾಳಾಗಿದ್ದು, ತಕ್ಷಣವೇ ಡಾಂಬರೀಕರಣ ಮಾಡಬೇಕು. ರಸ್ತೆ ಬದಿಯ ತ್ಯಾಜ್ಯ ತೆರವುಗೊಳಿಸಬೇಕು. ಜೆ.ಸಿ. ರಸ್ತೆಯಲ್ಲಿನ ಪಾಲಿಕೆ ಜಾಗದ ಸುತ್ತ ತಂತಿ ಬೇಲಿ ಹಾಕಿ, ಜಾಗದ ಅಭಿವೃದ್ಧಿಗೆ ವಿಸ್ತೃತ ಯೋಜನಾ ವರದಿ ತಯಾರಿಸಬೇಕು ಎಂದು ಚೋಳನ್ ಸೂಚಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ