ವಿಷ್ಣು ಸಮಾಧಿ ಸ್ಥಳವನ್ನು ಪುಣ್ಯ ಭೂಮಿಯನ್ನಾಗಿ ಘೋಷಿಸಿ: ಮೂರ್ತಿ ಎಸ್. ಸಿಂಹ

KannadaprabhaNewsNetwork |  
Published : Dec 17, 2023, 01:46 AM IST
ವಿಷ್ಣುಸೇನಾ ಸಮಿತಿ ಕಚೇರಿಯಲ್ಲಿ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. | Kannada Prabha

ಸಾರಾಂಶ

ಕನ್ನಡ ಚಿತ್ರರಂಗದ ಮೇರು ನಟ ಡಾ. ವಿಷ್ಣುವರ್ಧನ್ ಅವರ ಸಮಾಧಿ ಸ್ಥಳವನ್ನು ಡಾ. ವಿಷ್ಣು ಪುಣ್ಯಭೂಮಿ ಎಂದು ಘೋಷಿಸುವಂತೆ ಜಿಲ್ಲಾ ವಿಷ್ಣು ಸೇನಾ ಸಮಿತಿಯ ಜಿಲ್ಲಾಧ್ಯಕ್ಷ ಮೂರ್ತಿ ಎಸ್. ಸಿಂಹ ಸರ್ಕಾರವನ್ನು ಒತ್ತಾಯಿಸಿದ್ದಾರೆ. ನಗರದ ಜಿಲ್ಲಾ ವಿಷ್ಣುಸೇನಾ ಸಮಿತಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಭಾರತೀಯ ಸಿನಿಮಾ ರಂಗದ ಮೇರು ನಟರಾಗಿದ್ದ ಡಾ. ವಿಷ್ಣು ಕನ್ನಡ ಚಿತ್ರರಂಗದ ಅಗ್ರಗಣ್ಯ ನಾಯಕ ನಟರಾಗಿ ಅತ್ಯಂತ ಗುಣಾತ್ಮಕ ಸದಭಿರುಚಿಯ ಚಿತ್ರಗಳನ್ನು ನೀಡಿ, ಕರ್ನಾಟಕದ ನಾಡು-ನುಡಿಗೆ ಅನ್ಯಾಯವಾದಾಗ ಬೀದಿಗಿಳಿದು ಹೋರಾಟಕ್ಕೆ ಭಾಗವಹಿಸುತ್ತಿದ್ದರು ಎಂದರು.

ಜಿಲ್ಲಾ ವಿಷ್ಣುಸೇನಾ ಸಮಿತಿ ಕಚೇರಿಯಲ್ಲಿ ನಡೆದ ಸಭೆ

ಕನ್ನಡಪ್ರಭ ವಾರ್ತೆ ತುಮಕೂರು

ಕನ್ನಡ ಚಿತ್ರರಂಗದ ಮೇರು ನಟ ಡಾ. ವಿಷ್ಣುವರ್ಧನ್ ಅವರ ಸಮಾಧಿ ಸ್ಥಳವನ್ನು ಡಾ. ವಿಷ್ಣು ಪುಣ್ಯಭೂಮಿ ಎಂದು ಘೋಷಿಸುವಂತೆ ಜಿಲ್ಲಾ ವಿಷ್ಣು ಸೇನಾ ಸಮಿತಿಯ ಜಿಲ್ಲಾಧ್ಯಕ್ಷ ಮೂರ್ತಿ ಎಸ್. ಸಿಂಹ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಗರದ ಜಿಲ್ಲಾ ವಿಷ್ಣುಸೇನಾ ಸಮಿತಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಭಾರತೀಯ ಸಿನಿಮಾ ರಂಗದ ಮೇರು ನಟರಾಗಿದ್ದ ಡಾ. ವಿಷ್ಣು ಕನ್ನಡ ಚಿತ್ರರಂಗದ ಅಗ್ರಗಣ್ಯ ನಾಯಕ ನಟರಾಗಿ ಅತ್ಯಂತ ಗುಣಾತ್ಮಕ ಸದಭಿರುಚಿಯ ಚಿತ್ರಗಳನ್ನು ನೀಡಿ, ಕರ್ನಾಟಕದ ನಾಡು-ನುಡಿಗೆ ಅನ್ಯಾಯವಾದಾಗ ಬೀದಿಗಿಳಿದು ಹೋರಾಟಕ್ಕೆ ಭಾಗವಹಿಸುತ್ತಿದ್ದರು ಎಂದರು.

ಬಡವರ ಕಣ್ಣೊರೆಸಲು ತಮ್ಮ ಮಿತಿಯನ್ನು ಮೀರಿ ಸಹಾಯ ಹಸ್ತ ಚಾಚುತ್ತಿದ್ದರು. ಅನೇಕ ಆಶ್ರಮಗಳಿಗೆ, ಮಂದಿರ ಮಠಗಳಿಗೆ, ಆರೋಗ್ಯ ಸೇವೆ ಹಾಗೂ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ಸಹಾಯ ಮಾಡಿದ್ದು, ದಾನ ಧರ್ಮಗಳಲ್ಲಿ ಹಾಗೂ ಸ್ನೇಹ ಸಂಬಂಧಗಳಲ್ಲಿ ಕರ್ನಾಟಕದ ಕಲಿಯುಗ ಕರ್ಣನಾಗಿ, ಅನೇಕ ರೀತಿಯ ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಈ ಮಹಾನ್ ವ್ಯಕ್ತಿಗೆ ಈ ನಮ್ಮ ರಾಜ್ಯ ಸರ್ಕಾರಗಳು ನಡೆದುಕೊಂಡ ರೀತಿ ನಿಜಕ್ಕೂ ತಲೆತಗ್ಗಿಸುವಂಥದ್ದು, ಒಬ್ಬ ಕಲಾ ಪ್ರೇಮಿಯಾಗಿ ವಿಷ್ಣುವರ್ಧನ್ ಅವರ ಅಭಿಮಾನಿಯಾಗಿ ಸ್ವಾಭಿಮಾನಿ ಕನ್ನಡಿಗನಾಗಿ ಸರ್ಕಾರಗಳ ಈ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದರು.

ಜಿಲ್ಲಾ ವಿಷ್ಣು ಸೇನಾ ಸಮಿತಿ ಯ ಪ್ರಧಾನ ಕಾರ್ಯದರ್ಶಿ ಎಸ್. ರಾಮಚಂದ್ರರಾವ್ ಮಾತನಾಡಿ, ಡಾ. ವಿಷ್ಣುವರ್ಧನ್ ಅವರ ಸಮಾಧಿಯ ಸ್ಥಳ ಕನ್ನಡಿಗರ ಆದರ್ಶ ಸ್ಥಳವಾಗಬೇಕಿತ್ತು. ಆದರೆ ನಮ್ಮನ್ನಾಳಿದ ಎಲ್ಲಾ ಪಕ್ಷಗಳ ಸರ್ಕಾರಗಳು ಆ ಬಗ್ಗೆ ಚಿಂತಿಸಲಿಲ್ಲ. ವಿಷ್ಣುವರ್ಧನ್ ಅವರ ಕುಟುಂಬಕ್ಕೂ ಕೋಟ್ಯಂತರ ಅಭಿಮಾನಿಗಳ ಮಧ್ಯೆ ವಿರಸ ಉಂಟಾಗುವಂತೆ ನಡೆದುಕೊಂಡಿವೆ.

ತಕ್ಷಣ ಮುಖ್ಯಮಂತ್ರಿಗಳು ಸರ್ಕಾರದ ಈ ಭೂಮಿಯನ್ನು ವಶಕ್ಕೆ ಪಡೆದು ಡಾ. ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಿಸುಲು ಆದೇಶಿಸಿ, ಆ ಸ್ಥಳವನ್ನು ಡಾ. ವಿಷ್ಣು ಪುಣ್ಯಭೂಮಿ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ವಿಷ್ಣು ಸೇನಾ ಸಮಿತಿಯ ಸಂಘಟನಾ ಕಾರ್ಯದರ್ಶಿ ವಿಷ್ಣುಕುಮಾರ್ ಮಾತನಾಡಿ, ಡಿ.17 ರಂದು ಬೆಳಿಗ್ಗೆ 9 ರಿಂದ ಸಂಜೆ ನಾಲ್ಕು ಗಂಟೆಯವರೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಮಟ್ಟದ ಡಾ. ವಿಷ್ಣುವರ್ಧನ್ ಅವರ ಪುಣ್ಯಭೂಮಿ ಹೋರಾಟವನ್ನು ಹಮ್ಮಿಕೊಂಡಿದ್ದು, ಎಲ್ಲಾ ವಿಷ್ಣುವರ್ಧನ್ ಅಭಿಮಾನಿಗಳು, ಕಲಾವಿದರು, ಜಿಲ್ಲಾ ಹಾಗೂ ರಾಜ್ಯಮಟ್ಟದ ಎಲ್ಲಾ ಸಂಘಟನೆಗಳು, ಸಂಘ ಸಂಸ್ಥೆಗಳು, ಕನ್ನಡಪರ ಸಂಘಟನೆಗಳು, ಕಲಾ ಹಾಗೂ ಸಾಂಸ್ಕೃತಿಕ ಸಂಘಟನೆಗಳು, ರೈತ ಸಂಘಟನೆಗಳು, ಆಟೋ ಮಾಲೀಕರು ಹಾಗೂ ಚಾಲಕ ಸಂಘಟನೆಗಳು, ಹೋಟೆಲ್ ಉದ್ಯಮ ಸಂಘಟನೆಗಳು ಮತ್ತು ಅನೇಕ ಸ್ತರನಾದ ಸಂಘಟನೆಗಳು ಈ ಬೃಹತ್ ಹೋರಾಟದಲ್ಲಿ ಪಾಲ್ಗೊಂಡು ತಮ್ಮ ಬೆಂಬಲ ವ್ಯಕ್ತಪಡಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ವಕ್ಫ್ ಬೋರ್ಡಿನ ಉಪಾಧ್ಯಕ್ಷ ಶಬ್ಬೀರ್ ಅಹ್ಮದ್, ಜಿಲ್ಲಾ ಡಾ.ವಿಷ್ಣು ಸೇನಾ ಸಮಿತಿಯ ಪದಾಧಿಕಾರಿಗಳಾದ ಟಿ.ಕೆ ಯೋಗೇಶ್, ರಮೇಶ್ ನಾಯಕ್, ಹೃದಯ ಚಂದನ್, ದಿವಾಕರ್, ಟಿ.ಡಿ. ಅನಿಲ್‌ಕುಮಾರ್, ಇಮ್ರಾನ್ ಅಹಮದ್, ರವಿಕುಮಾರ್, ಕಿರಣ್, ದಿನೇಶ್, ಅಶ್ವಿನಿ ಮತ್ತಿತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ