)
ಕನ್ನಡಪ್ರಭ ವಾರ್ತೆ, ಕಡೂರು
ಮಂಗಳವಾರ ಪಟ್ಟಣದ ಕೋಟೆಯ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ತಾಲೂಕಿನ ಎರಡು ಪ್ರಮುಖ ಕಾರಣಗಳಿಗಾಗಿ ಹೋರಾಟ ಮಾಡುತ್ತಿದ್ದೇನೆ ಎಂದು ಕಲ್ಕೆರೆ ಗ್ರಾಮದಲ್ಲಿ ಇತ್ತೀಚೆಗೆ ಹೇಳಿಕೆ ನೀಡಿದ್ದು, ಒಂದು ಕಲ್ಕೆರೆ ಕುಕ್ಕಸಮುದ್ರ ಕೆರೆ ತುಂಬಿಸುವುದು ಮತ್ತೊಂದು ಕಡೂರು ತಾಲೂಕನ್ನು ಬರಪೀಡಿತವೆಂದು ಘೋಷಿಸ ಬೇಕು. ಕುಕ್ಕಸಮುದ್ರ ಕೆರೆ ತುಂಬಿಸಲು ವಿಶ್ವೇಶ್ವರಯ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಮೇಂದ್ರ ಒಪ್ಪಿಕೊಂಡಿರು ವುದರಿಂದ 80 ಕಿ.ಮೀ ಪಾದಯಾತ್ರೆಯನ್ನು 40 ಕಿ.ಮೀ.ಗೆ ನಿಗದಿ ಪಡಿಸಲಾಗಿದೆ. ಕಲ್ಕೆರೆ ಗ್ರಾಮದಿಂದ ಆ.28 ರ ಶುಕ್ರವಾರ ಬೆಳಗ್ಗೆ ನೂರಾರು ರೈತರೊಂದಿಗೆ, ಜಾತ್ಯತೀತವಾಗಿ ಎಲ್ಲ ಪಕ್ಷಗಳ ಮುಖಂಡರೊಂದಿಗೆ ಪಾದಯಾತ್ರೆಗೆ ಬೆಳಗ್ಗೆ 9 ಗಂಟೆಗೆ ಚಾಲನೆ ನೀಡಿ ಶನಿವಾರ ಸಂಜೆ ಕಡೂರು ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸುವ ಮೂಲಕ ಪಾದಯಾತ್ರೆ ಮುಕ್ತಾಯಗೊಳ್ಳಲಿದೆ ಎಂದರು.
ನಮ್ಮ ಪಾದಯಾತ್ರೆಗೆ ಸರ್ಕಾರ ಸ್ಪಂದಿಸಿ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡದಿದ್ದರೆ ಮುಂದಿನ ಹೋರಾಟಕ್ಕೂ ಸಿದ್ಧವಾಗಿದ್ದೇವೆ. ಜಿಲ್ಲಾಧಿಕಾರಿಗಳು ಬರದ ವಿಷಯದಲ್ಲಿ ಸರ್ವೇ ಮಾಡಿ ಸರ್ಕಾರಕ್ಕೆ ಕಳುಹಿಸಿದ್ದು ಕಡೂರು ತಾಲೂಕನ್ನು ಕೈ ಬಿಟ್ಟಿರುವುದಕ್ಕೆ ಕಾರಣ ತಿಳಿಸಬೇಕು. ಇದರಿಂದ ಇಲ್ಲಿನ ರೈತರಿಗೆ ಅನ್ಯಾಯ ಮತ್ತು ನೋವಾಗಿದೆ ಎಂದರು.ಸುದ್ದಿಗೋಷ್ಠಿಯಲ್ಲಿ ಪ್ರೇಮಕುಮಾರ್, ಬಿ.ಟಿ. ಗಂಗಾಧರನಾಯ್ಕ, ಪಾಲಾಕ್ಷಪ್ಪ, ಬ್ಯಾಗಡೇಹಳ್ಳಿ ಕುಮಾರ್ ಮತ್ತಿತರರು ಇದ್ದರು.
ಪಾದಯಾತ್ರೆ ಎಲ್ಲೆಲ್ಲಿ?
25ಕೆಕೆಡಿಯು5.