ಹೆಣ್ಣುಮಕ್ಕಳ ಸಂತತಿ ಕ್ಷೀಣಿಸುತ್ತಿರುವುದು ಆತಂಕಕಾರಿ: ತಮ್ಮಯ್ಯ

KannadaprabhaNewsNetwork |  
Published : Mar 09, 2026, 01:15 AM IST
ಸಸಸ | Kannada Prabha

ಸಾರಾಂಶ

ಚಿಕ್ಕಮಗಳೂರುಹೆಣ್ಣು ಮಕ್ಕಳ ಸಂತತಿ ಕಡಿಮೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಭ್ರೂಣಹತ್ಯೆ ಮತ್ತಿತರೆ ದುಷ್ಕೃತ್ಯ ಯಾರು ಮಾಡುತ್ತಾರೋ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ನಗರದ ಆಜಾದ್‌ ಪಾರ್ಕಿನಲ್ಲಿ ಜಿಲ್ಲಾಡಳಿತದಿಂದ ಭಾನುವಾರ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಹೆಣ್ಣು ಮಕ್ಕಳ ಸಂತತಿ ಕಡಿಮೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಭ್ರೂಣಹತ್ಯೆ ಮತ್ತಿತರೆ ದುಷ್ಕೃತ್ಯ ಯಾರು ಮಾಡುತ್ತಾರೋ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.ನಗರದ ಆಜಾದ್‌ ಪಾರ್ಕಿನಲ್ಲಿ ಜಿಲ್ಲಾಡಳಿತದಿಂದ ಭಾನುವಾರ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಸಂಜೀವಿನಿ ಒಕ್ಕೂಟದ ಮಹಿಳೆಯರು ಉತ್ಪಾದಿಸಿದ ವಸ್ತಗಳ ಮಾರಾಟ ಮಳಿಗೆ ಉದ್ಘಾಟಿಸಿ ಮಾತನಾಡಿ ಬಯಲು ಸೀಮೆ ಯಲ್ಲಿ ಪ್ರವಾಸ ಮಾಡುವಾಗ 40 ವರ್ಷ ದಾಟಿದ ಅನೇಕ ಯುವಕರು ಇನ್ನೂ ಮದುವೆಯಾಗಿಲ್ಲ. ಕಾರಣ ಹೆಣ್ಣು ಸಿಗುತ್ತಿಲ್ಲ ಎಂದು ತಿಳಿಯಿತು. ಹೆಣ್ಣಿನ ಸಂತತಿಯೇ ಕಡಿಮೆ ಆಗುತ್ತಿರುವುದು ಆತಂಕಾರಿ ಬೆಳವಣಿಗೆ. ಈ ಬಗ್ಗೆ ರಾಜ್ಯ ಸರ್ಕಾರ, ಜಿಲ್ಲಾಡಳಿತ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮಹಿಳೆಯರ ಹಕ್ಕುಗಳು, ಸಾಧನೆ, ಸವಾಲುಗಳ ಬಗ್ಗೆ ಜಾಗೃತಿ ಮೂಡಿಸಲು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಮುಖ ವೇದಿಕೆ. ವಾಲ್ಮಿಕಿ ರಾಮಾಯಣ, ಕುಮಾರವ್ಯಾಸನ ಮಹಾಭಾರತ ಹೆಣ್ಣಿನಿಂದಲೇ ನಡೆದಿದೆ ಎನ್ನುತ್ತಾರೆ. ಆದರೆ, ವಾಸ್ತವಾಗಿ ತಪ್ಪು ಮಾಡಿರುವುದು ಗಂಡಸರು ಕಳಂಕ ಹೊತ್ತಿರುವುದು ಮಾತ್ರ ಮಹಿಳೆಯರು ಎಂದರು.

ಯಾವುದೇ ಒಂದು ಸಮುದಾಯದ ಅಭಿವೃದ್ಧಿಯನ್ನು ನಾನು ಆ ಸಮುದಾಯದ ಮಹಿಳೆಯರ ಸಾಧನೆಯನ್ನು ಮಾನದಂಡ ವಾಗಿಟ್ಟು ಕೊಂಡು ಅಳೆಯುತ್ತೇನೆ ಎಂದು ಡಾ.ಬಿ.ಆರ್.ಅಂಬೇಡ್ಕರ್‌ ಹೇಳಿದ್ದಾರೆ ಎಂದು ಹೇಳಿದರು.

ವಿಧಾಪರಿಷತ್‌ ಸದಸ್ಯ ಎಸ್.ಎಲ್.ಬೋಜೇಗೌಡ ಮಾತನಾಡಿ, ಮಹಿಳೆಯರ ಪಾತ್ರ ಸಮಾಜದಲ್ಲಿ ಬಹಳ ಹಿರಿದಾಗಿರು ವಂತಹದ್ದು. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರಿಗೆ ಸರಿಯಾದ ಸ್ಥಾನಮಾನ ನೀಡಿಲ್ಲ ಎಂಬ ಕೊರಗಿದೆ. ಆದರೆ, ಮಹಿಳೆರಿಗೆ ಎಲ್ಲ ರೀತಿಯ ಸ್ಥಾನಮಾನವನ್ನು ಅವರಿಗೆ ನಿರ್ವಹಿಸುವ ಶಕ್ತಿ ಇರುವುದಕ್ಕೆ ನೀಡಲಾಗಿದೆ. ಬುದ್ಧಿ ಶಕ್ತಿ, ಜ್ಞಾನಶಕ್ತಿ ಮಹಿಳೆಯರಲ್ಲಿ ಹೆಚ್ಚಿದೆ. ಮಹಿಳೆಯರು ಸ್ವಾವಲಂಬಿಗಳಾಗಲು ಇಂದು ಗ್ರಾಮೀಣ ಭಾಗದಲ್ಲಿ ಅನೇಕ ಚಟುವಟಿಕೆ ಮೂಲಕ ತಮ್ಮಆರ್ಥಿಕ ಶಕ್ತಿ ಹೆಚ್ಚಿಸಿಕೊಳ್ಳುತ್ತಿರುವುದು ಸಂತಸದ ವಿಚಾರ ಎಂದರು.

ಜೂಜಿನಲ್ಲಿ ದ್ರೌಪದಿಯನ್ನು ಪಣವಾಗಿಡಲು ಆಕೆ ಹೇಳಿ ದ್ದಳೆ? ಸೀತೆ ವ್ಯಾಮೋಹಕ್ಕೆ ಒಳಗಾಗಿ ರಾವಣ ಆಕೆಯನ್ನು ಹೊತ್ತೊಯ್ದ ಅದು ಆಕೆ ತಪ್ಪೇ ? ಹೀಗಾಗಿ ಈ ಇಬ್ಬರಿಂದ ರಾಮಾಯಣ ಮತ್ತು ಮಹಾಭಾರತ ನಡೆದಿದೆ ಎಂದು ಬಿಂಬಿಸುವುದು ತಪ್ಪು.ಆ ವಿಚಾರ ತೆಗೆದು ಹಾಕಬೇಕು ಎಂದು ಪ್ರತಿಪಾದಿಸಿದರು.

ಈ ವೇಳೆ ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ.ಶಿವಾನಂದ ಸ್ವಾಮಿ, ಸಿಡಿಎ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸುಜಾತಾ ಉಪಸ್ಥಿತರಿದ್ದರು.

----ಬಾಕ್ಸ್‌---

ಸ್ವ ಸಹಾಯ ಸಂಘಗಳಿಂದ ವಸ್ತು ಪ್ರದರ್ಶನ

ಅಂರಾತಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನಗರದ ಅಜಾದ್‌ ಪಾರ್ಕ್‌ ಬಳಿ ಸ್ವಸಹಾಯ ಗುಂಪುಗಳು ತಯಾರಿಸಿದ ವಸ್ತು, ತಿನ್ನಿಸುಗಳ ಮಾರಾಟ ಮತ್ತು ಪ್ರದರ್ಶನದಲ್ಲಿ ಜಿಲ್ಲೆಯ ಸುಮಾರು 40 ರಿಂದ 50 ಸ್ವ ಸಹಾಯ ಗುಂಪುಗಳು ಭಾಗವಹಿಸಿದ್ದವು.

-- ಫೋಟೋ--

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಸ್ವ ಸಹಾಯ ಗುಂಪುಗಳಿಗೆ ಶಾಸಕ ಎಚ್‌.ಡಿ.ತಮ್ಮಯ್ಯ ಪ್ರಶಸ್ತಿ ಪ್ರದಾನ ಮಾಡಿದರು. ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ.ಶಿವಾನಂದ ಸ್ವಾಮಿ, ಸಿಡಿಎ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸುಜಾತಾ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೆಣ್ಣನ್ನು ಗೌರವಿಸುವವನೇ ನಿಜವಾದ ಮನುಜ
ಹೆಣ್ಣು ಅಬಲೆಯಲ್ಲಿ ಸಬಲೆ: ಮಾಜಿ ಸಚಿವ ಆಂಜನೇಯ