ಶ್ರೀಮಹಾಲಿಂಗೇಶ್ವರ ದೇಗುಲಕ್ಕೆ ಪಂಚಲೋಹದ ಕಂಚಿನ ಶಿವನ ವಿಗ್ರಹ ಸಮರ್ಪಣೆ

KannadaprabhaNewsNetwork |  
Published : Feb 17, 2026, 01:30 AM IST
16ಕೆಎಂಎನ್‌ಡಿ-8ಪಾಂಡವಪುರ ತಾಲೂಕಿನ ಕೆ.ಬೆಟ್ಟಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆಪಂಚಲೋಹ ಕಂಚಿನ ಶಿವನ ಕೊಳಗವನ್ನು ಸಮರ್ಪಣೆ ಮಾಡಲಾಯಿತು. | Kannada Prabha

ಸಾರಾಂಶ

ಕೆ.ಬೆಟ್ಟಹಳ್ಳಿ ಗ್ರಾಮದ ಗೌಡೇಗೌಡರ ಕುಟುಂಬದ ಪರವಾಗಿ ಕಮಲಮ್ಮ-ಸ್ವಾಮಿಗೌಡ ಅವರು ತಮ್ಮ ಮೊಮ್ಮಗಳು ಬಿ.ಪಿ.ಚಾರ್ವಿಕ ಅವರ ಏಳಿಗೆ ಹಾಗೂ ಅಭಿವೃದ್ಧಿಗಾಗಿ ಮೊಮ್ಮಗಳ ಹೆಸರಿನಲ್ಲಿ ಶ್ರೀಮಹಾಲಿಂಗೇಶ್ವರನಿಗೆ ಪಂಚಲೋಹ ಕಂಚಿನ ಶಿವನ ಕೊಳಗವನ್ನು ಅರ್ಪಣೆ ಮಾಡಿದರು.

ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕಿನ ಕೆ.ಬೆಟ್ಟಹಳ್ಳಿ ಗ್ರಾಮದ ಹೊರ ವಲಯದಲ್ಲಿರುವ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹಾ ಶಿವರಾತ್ರಿ ಹಬ್ಬದ ದಿನದಂದು ಪಂಚಲೋಹ ಕಂಚಿನ ಶಿವನ ಕೊಳಗವನ್ನು ಸಮರ್ಪಣೆ ಮಾಡಲಾಯಿತು.

ಗ್ರಾಮದ ಗೌಡೇಗೌಡರ ಕುಟುಂಬದ ಪರವಾಗಿ ಕಮಲಮ್ಮ-ಸ್ವಾಮಿಗೌಡ ಅವರು ತಮ್ಮ ಮೊಮ್ಮಗಳು ಬಿ.ಪಿ.ಚಾರ್ವಿಕ ಅವರ ಏಳಿಗೆ ಹಾಗೂ ಅಭಿವೃದ್ಧಿಗಾಗಿ ಮೊಮ್ಮಗಳ ಹೆಸರಿನಲ್ಲಿ ಶ್ರೀಮಹಾಲಿಂಗೇಶ್ವರನಿಗೆ ಪಂಚಲೋಹ ಕಂಚಿನ ಶಿವನ ಕೊಳಗವನ್ನು ಅರ್ಪಣೆ ಮಾಡಿದರು.

ಮುಂದಿನ ದಿನಗಳಲ್ಲಿ ಗ್ರಾಮ ದೇವತೆ ಶ್ರೀ ಲಕ್ಷ್ಮೀದೇವಿಗೆ ನಮ್ಮ ಕುಟುಂಬದಿಂದ ಚಿನ್ನದ ಕವಚವನ್ನು ಅರ್ಪಿಸಬೇಕೆಂಬ ಮಹಾದಾಸೆ ಹೊಂದಿರುವುದಾಗಿ ಕೆ.ಬೆಟ್ಟಹಳ್ಳಿ ಗ್ರಾಮದ ಮುಖಂಡರಾದ ಸ್ವಾಮಿಗೌಡ ಅವರು ತಿಳಿಸಿದರು.

ಈ ವೇಳೆ ಗ್ರಾಮದ ಯಜಮಾನರಾದ ಪುಟ್ಟಸಿದ್ದೇಗೌಡ, ಕೃಷ್ಣೇಗೌಡ ಬಿ.ಟಿ.ಶಿವಣ್ಣ, ಮಹದೇವೇಗೌಡ, ದೇವಸ್ಥಾನದ ಅರ್ಚಕ ಸತ್ಯನಾರಾಯಣ, ಸೇವಾರ್ಥದಾರರಾದ ಕಮಲಮ್ಮ, ಸ್ವಾಮಿಗೌಡ ಹಲವರು ಹಾಜರಿದ್ದರು.

ನಾಳೆ ವಿದ್ಯುತ್ ವ್ಯತ್ಯಯ

ಮಂಡ್ಯ: 66/11 ಕೆ.ವಿ. ಹಂಪಾಪುರ ಮತ್ತು ಬಸರಾಳು ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಕೆಲಸ ಹಮ್ಮಿಕೊಂಡಿರುವುದರಿಂದ ಫೆ.18ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಹಂಪಾಪುರ ವಿದ್ಯುತ್ ವಿತರಣಾ ಕೇಂದ್ರಗಳಾದ ಕೆರಗೋಡು, ದೊಡ್ಡಗರುಡನಹಳ್ಳಿ, ಬಿಳಿದೇಗಲು, ಮುದಗಂದೂರು, ಮಾರಗೌಡನಹಳ್ಳಿ, ಬಿ.ಹೊಸೂರು, ಹಂಪಾಪುರ, ಕಲ್ಕಂಟಿದೊಡ್ಡಿ, ಸೌದೇನಹಳ್ಳಿ ಬೆಟ್ಟಹಳ್ಳಿ, ಬೀಚನಹಳ್ಳಿ, ಪುರದಕೊಪ್ಪಲು, ಎಂ.ಹೊನ್ನೇನಹಳ್ಳಿ, ಮನುಗನಹಳ್ಳಿ, ಉಪ್ಪಾರಕನಹಳ್ಳಿ, ಹನಗನಹಳ್ಳಿ, ಗುಡಿಗೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು. ಬಸರಾಳು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಾದ ಬಸರಾಳು, ಶಿವಪುರ, ಬೇಬಿ, ಕಂಬದಹಳ್ಳಿ, ಬಿದರಕಟ್ಟೆ, ಮಾರಸಿಂಗನಹಳ್ಳಿ, ಅಂಕುಶಾಪುರ, ಬೆನ್ನಹಟ್ಟಿ, ಶಾನಭೋಗನಹಳ್ಳಿ, ಬೊಮ್ಮನಹಳ್ಳಿ, ಎಂ.ಹಟ್ನ, ಗಣಿಗ ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆ.17ರಂದು ರೈತರ ಸಭೆ

ಮದ್ದೂರು:

ತಾಲೂಕಿನ ಮದ್ದೂರು ಕೆರೆ ವ್ಯಾಪ್ತಿಯಲ್ಲಿ ಬರುವ ಬೈರನ್, ವೈದ್ಯನಾಥಪುರ ಹಾಗೂ ಚಾಮನಹಳ್ಳಿ ನಾಲೆಗಳ ಆಧುನೀಕರಣ ಕಾಮಗಾರಿ ಕೈಗೊಳ್ಳುವ ಸಂಬಂಧ ಫೆ.17ರಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ರೈತರ ಸಭೆಯನ್ನು ಆಯೋಜಿಸಲಾಗಿದೆ ಎಂದು ಶಾಸಕ ಕೆ.ಎಂ. ಉದಯ್ ಹೇಳಿದರು. ಪ್ರವಾಸಿ ಮಂದಿರದಲ್ಲಿ ಮಧ್ಯಾಹ್ನ 2:30 ಗಂಟೆಗೆ ನಡೆಯುವ ಸಭೆಯಲ್ಲಿ ನಾಲಾ ವ್ಯಾಪ್ತಿಗಳ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಲಹೆ ಮತ್ತು ಅಭಿಪ್ರಾಯಗಳನ್ನು ತಿಳಿಸುವಂತೆ ಶಾಸಕರು ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಲಾ ಹಂತದಲ್ಲೇ ಮಕ್ಕಳನ್ನು ದಂಡಿಸದಿದ್ದರೆ ಅಪಾಯ: ನಿಶ್ಚಲಾನಂದನಾಥ ಸ್ವಾಮೀಜಿ
ಜಾತ್ರೆ: ಎಸ್‌ಪಿ ನೇತೃತ್ವದಲ್ಲಿ ಜನಜಾಗೃತಿ ಪಥ ಸಂಚಲನ