ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಶ್ರೀವೀರಭದ್ರಸ್ವಾಮಿ ಹಾಗೂ ಭೈರವೇಶ್ವರಸ್ವಾಮಿಗೆ ಪುಣ್ಯಾಹಃವಾಚನ ಹಾಗೂ ಗಂಗಾಕ್ಷೀರ ಜಲ ಹಾಗೂ ಗಣಪತಿ ಹೋಮ, ರಕ್ಷಾಬಂಧನ ಸೇರಿದಂತೆ ವಿವಿಧ ಹೋಮಗಳು, ಪೂಜೆ, ಮಹಾ ಮಂಗಳಾರತಿ ನೆರವೇರಿಸಲಾಯಿತು.
ಬೆಳಗ್ಗೆ 5.30ರಿಂದ 6.20ರೊಳಗೆ ದೇವರ ಪ್ರತಿಷ್ಟಾಪನಾ ನಂತರ ಪ್ರಾಣ ಪ್ರತಿಷ್ಟಾಪನಾ ಮತ್ತು ಪೂರ್ಣಾಹುತಿ ಹೋಮದೊಡನೆ ವಿಮಾನ ಗೋಪುರ ಕಳಸ ಸ್ಥಾಪನೆಯೂ ಭಕ್ತಾದಿಗಳ ಸಮ್ಮುಖದಲ್ಲಿ ನೆರವೇರಿಸಲಾಯಿತು.ಧ್ವಜಾರೋಹಣ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಶ್ರೀಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಪುರುಷೋತ್ತಮಾನಂದನಾಥ ಸ್ವಾಮೀಜಿ, ಕನಕಪುರ ದೇಗುಲಮಠದ ಡಾ.ಮುಮ್ಮಡಿ ನಿರ್ವಾಣಮಹಾಸ್ವಾಮೀಜಿ, ಹುಲ್ಲಹಳ್ಳಿ ಶ್ರೀಶಾಂತಮಲ್ಲಿಕಾರ್ಜುನ ಕ್ಷೇತ್ರ ವಿರಕ್ತಮಠದ ಶ್ರೀಇಮ್ಮಡಿ ಚನ್ನಮಲ್ಲದೇಶಿಕೇಂದ್ರ ಸ್ವಾಮೀ, ಶಾಸಕರಾದ ಕೆ.ಎಂ.ಉದಯ್, ಮಧು ಜಿ.ಮಾದೇಗೌಡ, ಮಾಜಿ ಎಂಎಲ್ಸಿ ಡಿ.ಎಸ್.ವೀರಯ್ಯ, ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಮನ್ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ, ಜಿಪಂ ಮಾಜಿ ಅಧ್ಯಕ್ಷ ಬಿ.ಬಸವರಾಜು, ಜಿಲ್ಲಾ ಸಮಾಜ ಸೇವಕರಾದ ನಂಜುಂಡಪ್ಪ, ಸಿ.ರಾಮು, ಪ್ರೇಮ ಯುವರಾಜು,
ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮಕ್ಕೆ ಶಾಸಕರಿಂದ ಚಾಲನೆ
ಜಾನುವಾರುಗಳಿಗೆ ಕಡ್ಡಾಯವಾಗಿ ಕಾಲುಬಾಯಿ ಜ್ವರ ಲಸಿಕೆ ಹಾಕಿಸುವ ಮೂಲಕ ರೈತರು ತಮ್ಮ ಜಾನುವಾರಗಳ ರಕ್ಷಣೆ ಜೊತೆಗೆ ಪಶುಪಾಲನೆ ಇಲಾಖೆ ಅಧಿಕಾರಿಗಳಿಗೆ ಸಹಕಾರ ನೀಡುವಂತೆ ಶಾಸಕ ಎಚ್.ಟಿ.ಮಂಜು ಮನವಿ ಮಾಡಿದರು.
ರೈತರು ನಷ್ಟ ತಪ್ಪಿಸಿಕೊಳ್ಳಲು ಕಾಲುಬಾಯಿ ರೋಗ ನಿಯಂತ್ರಣ ಹಾಗೂ ರೋಗ ನಿರ್ಮೂಲನೆ ಮಾಡುವುದು ಬಹಳ ಮುಖ್ಯ. ಹಾಗಾಗಿ ರೈತರು ಲಸಿಕೆ ಹಾಕಿಸುವ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಬಾರದು ಎಂದರು.