ಕನ್ನಡಪ್ರಭ ವಾರ್ತೆ ಮೈಸೂರು
ದನ, ಕರುಗಳು, ಕೋತಿ ಪ್ರಾಣಿ– ಪಕ್ಷಿಗಳಿಗೆ ನೀರು ಕುಡಿಯಲು ಅನುಕೂಲವಾಗುವ ದೃಷ್ಟಿಯಿಂದ ತೊಟ್ಟಿಗಳನ್ನು ಅಳವಡಿಸಲಾಯಿತು.
ಅತಿಥಿಯಾಗಿ ಪಾಲ್ಗೊಂಡಿದ್ದ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ. ನಾರಾಯಣಗೌಡ ಮಾತನಾಡಿ, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನಿಂದ ಜನರೇ ನರಕಯಾತನೆ ಅನುಭವಿಸುತ್ತಿರುವಾಗ ಮೂಕ ಪ್ರಾಣಿಗಳ ಗತಿಯೇನು ಎಂಬುದನ್ನು ಅರಿತು ಕುಡಿಯುವ ನೀರಿನ ತೊಟ್ಟಿಗಳನ್ನು ಅಳವಡಿಸುತ್ತಿರುವುದು ಶ್ಲಾಘನೀಯ ಎಂದರು.ಪ್ರಸ್ತುತ ದಿನಗಳಲ್ಲಿ ನಾನು, ನನ್ನದು ಎಂದು ಬಡಿದಾಡುವವರ ಮಧ್ಯೆ ಪ್ರಾಣಿ ಪಕ್ಷಿಗಳ ನೆರವಿಗೆ ಧಾವಿಸುತ್ತಿರುವ ಟ್ರಸ್ಟ್ ನ ಕಾರ್ಯ ಶ್ಲಾಘನೀಯ ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಈ ವೇಳೆ ನಗರ ಜೆಡಿಎಸ್ ಕಾರ್ಯಾಧ್ಯಕ್ಷ ಪ್ರಕಾಶ್ ಪ್ರಿಯದರ್ಶನ್, ಜೆಡಿಎಸ್ ನಗರ ಉಪಾಧ್ಯಕ್ಷ ಯದು ನಂದನ್, ಕೆ.ಎಂ.ಪಿ.ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷ ಕಡಕೋಳ ಜಗದೀಶ್, ಬೈರತಿ ಲಿಂಗರಾಜು, ಸಮಾಜ ಸೇವಕಿ ಸವಿತಾ ಘಾಟ್ಕೆ, ನಾಗಶ್ರೀ ಸುಚಿಂದ್ರ, ಸೈನಿಕರು ಹಾಗೂ ಸೈನಿಕ ಅಕಾಡೆಮಿಯ ತರಬೇತಿ ಪಡೆಯುತ್ತಿರುವವರು ಇದ್ದರು.