ಉಡುಪಿ ಜಿಲ್ಲೆಯ 5 ಗ್ರಾಪಂಗಳಿಗೆ ದೀನ್ ದಯಾಳ್ ಪುರಸ್ಕಾರ್

KannadaprabhaNewsNetwork |  
Published : Apr 01, 2026, 02:30 AM IST
(ಫೋಟೊ31ಬಿಕೆಟಿ4, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಉಪಚುನಾವಣೆ ನಿಮಿತ್ತ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ  ನವನಗರದ ವಾರ್ಡ ನಂ. 31, 35, 19ರಲ್ಲಿ  ಮನೆಮನೆಗೆ ಅಬ್ಬರದ ಪ್ರಚಾರ ಮಾಡಿದರು) | Kannada Prabha

ಸಾರಾಂಶ

ಕೇಂದ್ರ ಸರ್ಕಾರದ ನೀಡುವ ದೀನ್ ದಯಾಲ್ ಉಪಾಧ್ಯಾಯ್ ಸತತ್ ಪಂಚಾಯತ್ ವಿಕಾಸ್ ಪುರಸ್ಕಾರ್ (ಡಿಡಿಯುಪಿಎಸ್‌ವಿಪಿ)ಗೆ ಉಡುಪಿ ಜಿಲ್ಲೆಯ 5 ಗ್ರಾಪಂಗಳು ಆಯ್ಕೆಯಾಗಿವೆ.

ಉಡುಪಿ: ಕೇಂದ್ರ ಸರ್ಕಾರದ ನೀಡುವ ದೀನ್ ದಯಾಲ್ ಉಪಾಧ್ಯಾಯ್ ಸತತ್ ಪಂಚಾಯತ್ ವಿಕಾಸ್ ಪುರಸ್ಕಾರ್ (ಡಿಡಿಯುಪಿಎಸ್‌ವಿಪಿ)ಗೆ ಉಡುಪಿ ಜಿಲ್ಲೆಯ 5 ಗ್ರಾಪಂಗಳು ಆಯ್ಕೆಯಾಗಿವೆ. ರಾಜ್ಯದಿಂದ ಒಟ್ಟು 6 ಗ್ರಾಪಂಗಳನ್ನು ಈ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದ್ದು, ಅವುಗಳಲ್ಲಿ ಉಡುಪಿ ಜಿಲ್ಲೆಯ 5 ಗ್ರಾಪಂಗಳಿಗೆ ಈ ಗೌರವ ಸಲ್ಲುತ್ತಿದೆ.ಬಡತನ ನಿರ್ಮೂಲನೆ, ನೀರಿನ ಸದ್ಬಳಕೆ, ಸ್ವಯಂ ಅಭಿವೃದ್ಧಿ ಇತ್ಯಾದಿ ಮಾನದಂಡಗಳಡಿ 5 ವಿಭಾಗಗಳಲ್ಲಿ ಪ್ರತಿ ರಾಜ್ಯದಿಂದ 6 ಗ್ರಾಪಂಗಳನ್ನು ಈ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗುತ್ತದೆ.ಅದರಂತೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಪಂಗೆ ಬಡತನ ನಿರ್ಮೂಲನೆ ಮತ್ತು ಜೀವನೋಪಾಯಗಳ ವರ್ಧನೆ ವಿಭಾಗದಲ್ಲಿ ಪ್ರಥಮ ಸ್ಥಾನ ದೊರಕಿದೆ.

ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಪಂಗೆ ಆರೋಗ್ಯ ಪಂಚಾಯತ್ ವಿಭಾಗದಲ್ಲಿ ದ್ವಿತೀಯ, ಹೆಬ್ರಿ ತಾಲೂಕಿನ ಮಡಾಮಕ್ಕಿ ಗ್ರಾಪಂಗೆ ಜಲ ಸಮೃದ್ಧ ವಿಭಾಗದಲ್ಲಿ ದ್ವಿತೀಯ ಮತ್ತು ಕಾರ್ಕಳ ತಾಲೂಕಿನ ಸಾಣೂರು ಗ್ರಾಪಂಗೆ ಸ್ವಯಂ ಸಮೃದ್ಧ ಮೂಲಸೌಕರ್ಯ ಅಭಿವೃದ್ಧಿ ವಿಭಾಗದಲ್ಲಿ ತೃತೀಯ, ಕುಂದಾಪುರ ತಾಲೂಕಿನ ಹಕ್ಲಾಡಿ ಗ್ರಾಪಂಗೆ ಸಾಮಾಜಿಕ ನ್ಯಾಯ ಮತ್ತು ಸಾಮಾಜಿಕ ರಕ್ಷಣೆ ವಿಭಾಗದಲ್ಲಿ ತೃತೀಯ ಸ್ಥಾನ ದೊರಕಿದೆ.

ಜೊತೆಗೆ ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ಪೂರ್ವ ತಾಲೂಕಿನ ಹಾಲನಾಯಕನಹಳ‍್ಳಿ ಪಂಚಾಯತ್‌ ಮಕ್ಕಳಸ್ನೇಹಿ ಪಂಚಾಯತ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.ಉಡುಪಿ ಜಿಲ್ಲೆಯ ಈ ಗ್ರಾಮ ಪಂಚಾಯತಿಗಳು ಆಯ್ಕೆಯಾಗಿರುವುದು ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಉತ್ತಮ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ಸಾಧನೆಗೆ ಆಯಾ ಪಂಚಾಯಿತಿಗಳ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಮತ್ತು ಗ್ರಾಮಸ್ಥರ ಶ್ರಮ ಕಾರಣವಾಗಿದೆ. ಈ ಸಾಧನೆಗಳು ಇತರ ಪಂಚಾಯಿತಿಗಳಿಗೆ ಪ್ರೇರಣೆಯಾಗಲಿ ಎಂದು ಹಾರೈಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

(ಮಸ್ಟ್) ಸಮರ್ಪಕ ಅನಿಲ ವಿತರಣೆ: ಸಂಸದ ಕೋಟ ಸೂಚನೆ
ಮನೆಯಿಂದ 15 ಲಕ್ಷ ರು. ಮೌಲ್ಯದ ಚಿನ್ನ ಕಳ್ಳತನ: ಆರೋಪಿ ಸೆರೆ