ದೀನ್ ದಯಾಳ್ ಸ್ಪರ್ಶ್ ಯೋಜನೆ : ಅರ್ಜಿ ಆಹ್ವಾನ

KannadaprabhaNewsNetwork |  
Published : Aug 25, 2024, 01:50 AM IST

ಸಾರಾಂಶ

Deen Dayal Sparsh Scheme : Application Invitation

ಯಾದಗಿರಿ : 6ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅಂಚೆ ಇಲಾಖೆಯು ಅರ್ಜಿ ಆಹ್ವಾನಿಸಲಾಗಿದೆ ಎಂದು ಭಾರತೀಯ ಅಂಚೆ ಇಲಾಖೆ ಅಧೀಕ್ಷಕರು ತಿಳಿಸಿದ್ದಾರೆ. 9ನೇ ತರಗತಿಗೆ ಫಾರ್ ಶಾಲಾ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹವನ್ನು ಉತ್ತೇಜಿಸಲು “ದೀನ್ ದಯಾಳ್ ಸ್ಪರ್ಶ್ ಯೋಜನೆ” ಅಡಿಯಲ್ಲಿ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು. ಶೈಕ್ಷಣಿಕ ಪಠ್ಯಕ್ರಮವನ್ನು ಬಲಪಡಿಸಲು ಮತ್ತು ಪೂರಕವಾಗಿ ಸಮರ್ಥನೀಯ ರೀತಿಯಲ್ಲಿ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹವನ್ನು ಉತ್ತೇಜಿಸುವುದು ವಿದ್ಯಾರ್ಥಿ ವೇತನದ ಉದ್ದೇಶವಾಗಿದೆ. 2023-24 ಶೈಕ್ಷಣಿಕ ವರ್ಷದಲ್ಲಿ 60 ಅಂಕಗಳನ್ನು ಹೊಂದಿರುವ ಮತ್ತು ಅಂಚೆ ಚೀಟಿಗಳ ಸಂಗ್ರಹದ ಠೇವಣಿ ಖಾತೆ, ಫಿಲಾಟೆಲಿಕ್ ಕ್ಲಬ್‌ನ ಸದಸ್ಯ ಮತ್ತು ಅಂಚೆ ಚೀಟಿ ಸಂಗ್ರಹವನ್ನು ಹವ್ಯಾಸವಾಗಿ ಮುಂದುವರಿಸುವ ವಿದ್ಯಾರ್ಥಿಗಳಿಗೆ 6000 ರು. ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಅಂಚೆ ಇಲಾಖೆಯು ನೀಡುವ ಅಂಚೆ ಚೀಟಿಗಳ ಸಂಗ್ರಹ ಯೋಜನೆಯಲ್ಲಿ ಯಶಸ್ವಿಯಾಗಿ ಸ್ಪರ್ಧಿಸಬೇಕಾಗುತ್ತದೆ. ರಸ ಪ್ರಶ್ನೆಯಲ್ಲಿ ಭಾಗವಹಿಸಲು ಸೆಪ್ಟೆಂಬರ್ 3ರ ಒಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಂಚೆ ಇಲಾಖೆ ಅಧೀಕ್ಷಕರ ಸಂಪರ್ಕಿಸಬಹುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಂ ಜಿ ವಿರೋಧಕ್ಕೆ ರೈತರಿಗೆ ಸಿಎಂ ಕರೆ
ನೀವೂ ಸಿಎಂ ಆಗಬೇಕು : ಡಿಕೆಗೆ ಪೂಜಾರಿ ಹಾರೈಕೆ