ಪಟ್ಟಣದ ಜಗನ್ನಾಥ ನಾಯ್ಡು ಎಂಬುವರ ಬಾವಿಗೆ ಬಿದ್ದಿದ್ದ ಜಿಂಕೆಯನ್ನು ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಸುರಕ್ಷಿತವಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕನ್ನಡಪ್ರಭ ವಾರ್ತೆ ಹನೂರು
ಪಟ್ಟಣದ ಜಗನ್ನಾಥ ನಾಯ್ಡು ಎಂಬುವರ ಬಾವಿಗೆ ಬಿದ್ದಿದ್ದ ಜಿಂಕೆಯನ್ನು ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಸುರಕ್ಷಿತವಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಡಿನಿಂದ ನಾಡಿಗೆ ಬಂದು ಹಾದಿತಪ್ಪಿ ಬೀದಿ ನಾಯಿಗಳ ಅಟ್ಟಿಸಿಕೊಂಡು ಬಂದ ಸಂದರ್ಭದಲ್ಲಿ ಬಾವಿಗೆ ಬಿದ್ದಿದ್ದ ಜಿಂಕೆಯನ್ನು ಜಮೀನಿನ ಮಾಲೀಕರು ನೋಡಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಿದ್ದಾರೆ.
ಜಿಂಕೆ ಮೇಲೆತ್ತಲು ಯಶಸ್ವಿ:
ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಗ್ನಿಶಾಮಕ ದಳದ ಅಧಿಕಾರಿ ಸಿಬ್ಬಂದಿಗಳ ಸಹಕಾರದೊಂದಿಗೆ ಜಿಂಕೆಯನ್ನು ಬಾವಿಯಿಂದ ಮೇಲೆತ್ತಲು ಶ್ರಮಿಸುವ ಮೂಲಕ ರಕ್ಷಣೆ ಮಾಡಿ ಅರಣ್ಯಕ್ಕೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ.
---
21ಸಿಎಚ್ಎನ್11
ಬಾವಿಗೆ ಬಿದ್ದಿದ್ದ ಜಿಂಕೆಯನ್ನು ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.