ಎಮ್ಮಿಗನೂರಲ್ಲಿ ಕೆಟ್ಟು ನಿಂತ ಶುದ್ಧ ನೀರಿನ ಘಟಕ

KannadaprabhaNewsNetwork |  
Published : May 16, 2024, 12:46 AM IST
ಕಂಪ್ಲಿ ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಕೆಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕಗಳು  | Kannada Prabha

ಸಾರಾಂಶ

ನೀರಿನ ಘಟಕಗಳು ಕೆಟ್ಟು ನಿಂತಿರುವ ಪರಿಣಾಮ ಅನಿವಾರ್ಯವಾಗಿ ಜನರು ಖಾಸಗಿ ನೀರಿನ ಘಟಕಗಳಿಗೆ ತೆರಳಿ ಹೆಚ್ಚು ಹಣ ನೀಡಿ ನೀರನ್ನು ಸಂಗ್ರಹಿಸುವ ಸಂದಿಗ್ಧ ಸ್ಥಿತಿಗೆ ಸಿಲುಕಿದ್ದಾರೆ.

ಬಿ.ಎಚ್.ಎಂ.ಅಮರನಾಥ ಶಾಸ್ತ್ರಿ

ಕಂಪ್ಲಿ: ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ನಿಂತು ಹಲವು ತಿಂಗಳು ಕಳೆದರೂ ದುರಸ್ತಿ ಭಾಗ್ಯ ಕಾಣದಾಗಿದೆ. ಗ್ರಾಮಸ್ಥರು ಖಾಸಗಿ ಕುಡಿಯುವ ನೀರಿನ ಘಟಕಗಳನ್ನು ಅವಲಂಬಿಸಬೇಕಾದ ಪರಿಸ್ಥಿತಿ ಎದುರಾಗಿದ್ದು, ಅಧಿಕಾರಿಗಳ ನಿರ್ಲಕ್ಷತನಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಮ್ಮಿಗನೂರು ಗ್ರಾಮದ ಪಬ್ಲಿಕ್ ಶಾಲೆ, ತಳವಾರಪೇಟೆಯ ಮಲ್ಲಿಕಾರ್ಜುನ ದೇಗುಲದ ಆವರಣ, ಕೆಇಬಿ ಬಳಿ ಹಾಗೂ ಸೂಗೂರು ರಸ್ತೆ ಬಳಿಯ ಘಟಕ ಸೇರಿ ಒಟ್ಟಾರೆ ನಾಲ್ಕು ಶುದ್ಧ ಕುಡಿಯುವ ನೀರಿನ ಘಟಕಗಳಿವೆ. ಇವುಗಳಲ್ಲಿ ಸೂಗೂರು ರಸ್ತೆ ಬಳಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಹೊರತುಪಡಿಸಿ ಉಳಿದ ಮೂರು ಘಟಕಗಳು ನಿರ್ವಹಣೆಯ ಕೊರತೆಯಿಂದಾಗಿ ಕೆಟ್ಟು ನಿಂತಿವೆ.

ಖಾಸಗಿ ನೀರಿನ ಘಟಕಗಳಿಗೆ ಮೊರೆ:

ಗ್ರಾಮದಲ್ಲಿ ಸರ್ಕಾರಿ ಅನುದಾನದಲ್ಲಿ ನಿರ್ಮಿಸಲಾದ ಮೂರು ಶುದ್ಧ ಕುಡಿವ ನೀರಿನ ಘಟಕಗಳು ಕೆಟ್ಟು ನಿಂತಿರುವ ಪರಿಣಾಮ ಅನಿವಾರ್ಯವಾಗಿ ಜನರು ಖಾಸಗಿ ನೀರಿನ ಘಟಕಗಳಿಗೆ ತೆರಳಿ ಹೆಚ್ಚು ಹಣ ನೀಡಿ ನೀರನ್ನು ಸಂಗ್ರಹಿಸುವ ಸಂದಿಗ್ಧ ಸ್ಥಿತಿಗೆ ಸಿಲುಕಿದ್ದಾರೆ. ಈ ಕುರಿತು ಗ್ರಾಪಂ ಸದಸ್ಯರು, ಅಧಿಕಾರಿಗಳ ಗಮನಕ್ಕೆ ತಂದು ಶುದ್ಧ ನೀರಿನ ಘಟಕಗಳ ದುರಸ್ತಿಗೆ ಮುಂದಾಗುವಂತೆ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ.

ಅಧಿಕಾರಿಗಳ ನಿರ್ಲಕ್ಷತನದಿಂದಲೇ ಗ್ರಾಮಸ್ಥರಿಗೆ ಈ ಸಮಸ್ಯೆ ಬಂದೊದಗಿದೆ. ಈಗಲಾದರೂ ಸಂಬಂಧಪಟ್ಟಂತಹ ಅಧಿಕಾರಿಗಳು ಎಚ್ಚೆತ್ತು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿಗೊಳಿಸಿ ಸಮರ್ಪಕವಾಗಿ ನೀರು ಪೂರೈಸುವ ಮೂಲಕ ಸಾರ್ವಜನಿಕರಿಗೆ ಅನುಕೂಲತೆ ಕಲ್ಪಿಸಿ ಕೊಡಬೇಕು ಎನ್ನುತ್ತಾರೆ ಗ್ರಾಮಸ್ಥರು.

ಗ್ರಾಮದಲ್ಲಿನ ಸರ್ಕಾರಿ ಶುದ್ಧ ಕುಡಿವ ನೀರಿನ ಘಟಕಗಳು ಕೆಟ್ಟು ನಿಂತಿರುವ ಹಿನ್ನೆಲೆ ಖಾಸಗಿಯವರಿಗೆ ಹೆಚ್ಚು ಹಣ ನೀಡಿ ನೀರನ್ನು ಖರೀದಿಸುವ ಸ್ಥಿತಿ ಬಂದೊದಗಿದೆ. ಈಗಲಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಘಟಕಗಳ ದುರಸ್ತಿಗೆ ಮುಂದಾಗುವ ಮೂಲಕ ಗ್ರಾಮಸ್ಥರಿಗೆ ಅನುಕೂಲತೆ ಕಲ್ಪಿಸಿ ಕೊಡಬೇಕು ಎನ್ನುತ್ತಾರೆ ಎಮ್ಮಿಗನೂರು ಗ್ರಾಮಸ್ಥ ಬಸವರಾಜ್.

ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿಗತಿ ಪರಿಶೀಲಿಸಿ ಅವುಗಳನ್ನು ದುರಸ್ತಿಗೊಳಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಲಾಗುವುದು ಎನ್ನುತ್ತಾರೆ ಎಮ್ಮಿಗನೂರು ಪಿಡಿಒ ಲಕ್ಷ್ಮಣ ತಾರು ನಾಯಕ್.

PREV

Recommended Stories

KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?