ಬೆಳೆಹಾನಿಯ ಅರ್ಜಿ ಸ್ವೀಕಾರ ವಿಳಂಬ: ರೈತರಿಂದ ಆಕ್ರೋಶ

KannadaprabhaNewsNetwork |  
Published : Aug 21, 2025, 01:00 AM IST
20ಎಚ್‌ಯುಬಿ22ರೈತ ಸಂಪರ್ಕ ಕೇಂದ್ರದ ಮುಂದೆ ನೆರೆದಿದ್ದ ಇಂಗಳಹಳ್ಳಿ, ಶಿರಗುಪ್ಪಿ ರೈತರು. | Kannada Prabha

ಸಾರಾಂಶ

72 ಗಂಟೆಗಳಲ್ಲಿ ಹಾನಿಗೊಳಗಾದ ಬೆಳೆಗಳ ಹಾನಿಯ ಅರ್ಜಿ ಸಲ್ಲಿಸಬೇಕೆಂಬ ಸುದ್ದಿ ಹಿನ್ನೆಲೆಯಲ್ಲಿ ಸಾವಿರಾರು ರೈತರು ರೈತ ಸಂಪರ್ಕ ಕೇಂದ್ರದ ಮುಂದೆ ಬೆಳಗ್ಗೆಯಿಂದಲೇ ಸರತಿಸಾಲಿನಲ್ಲಿ ನಿಂತಿದ್ದರು. ಆದರೆ, ಮಧ್ಯಾಹ್ನ 12 ಗಂಟೆಯಾದರೂ ವಿಮಾ ಕಂಪನಿಯ ಯಾವೊಬ್ಬ ಪ್ರತಿನಿಧಿ ಕೇಂದ್ರಕ್ಕೆ ಬಂದು ಅರ್ಜಿ ಸ್ವೀಕರಿಸದ ಹಿನ್ನೆಲೆಯಲ್ಲಿ ರೈತರು ಅಸಮಾಧಾನ ವ್ಯಕ್ತಪಡಿಸಿದರು.

ಹುಬ್ಬಳ್ಳಿ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ರೈತರ ಬೆಳೆಗಳು ಹಾನಿಯಾಗಿದೆ. ಇದೀಗ ಕಟಾವಿಗೆ ಬಂದಿದ್ದ ಹೆಸರು ಬೆಳೆ ಸಂಪೂರ್ಣವಾಗಿ ಮಳೆಯಿಂದಾಗಿ ಹಾನಿಗೊಳಗಾಗಿದ್ದು, ಈ ಹಿನ್ನೆಲೆಯಲ್ಲಿ ತಾಲೂಕಿನ ಇಂಗಳಹಳ್ಳಿ, ಶಿರಗುಪ್ಪಿಯ ಸಾವಿರಾರು ರೈತರು ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿ ಸಲ್ಲಿಸಲು ಬಂದು ಪರದಾಡಿದ ಘಟನೆ ಬುಧವಾರ ನಡೆದಿದೆ.

72 ಗಂಟೆಗಳಲ್ಲಿ ಹಾನಿಗೊಳಗಾದ ಬೆಳೆಗಳ ಹಾನಿಯ ಅರ್ಜಿ ಸಲ್ಲಿಸಬೇಕೆಂಬ ಸುದ್ದಿ ಹಿನ್ನೆಲೆಯಲ್ಲಿ ಸಾವಿರಾರು ರೈತರು ರೈತ ಸಂಪರ್ಕ ಕೇಂದ್ರದ ಮುಂದೆ ಬೆಳಗ್ಗೆಯಿಂದಲೇ ಸರತಿಸಾಲಿನಲ್ಲಿ ನಿಂತಿದ್ದರು. ಆದರೆ, ಮಧ್ಯಾಹ್ನ 12 ಗಂಟೆಯಾದರೂ ವಿಮಾ ಕಂಪನಿಯ ಯಾವೊಬ್ಬ ಪ್ರತಿನಿಧಿ ಕೇಂದ್ರಕ್ಕೆ ಬಂದು ಅರ್ಜಿ ಸ್ವೀಕರಿಸದ ಹಿನ್ನೆಲೆಯಲ್ಲಿ ರೈತರು ಅಸಮಾಧಾನ ವ್ಯಕ್ತಪಡಿಸಿದರು. ಮಳೆಯಲ್ಲೇ ಸರದಿಯಲ್ಲಿ ನಿಂತರೂ ಯಾರೊಬ್ಬರೂ ಅರ್ಜಿ ಸ್ವೀಕರಿಸಲು ಬರುತ್ತಿಲ್ಲ ಎಂದು ಕಿಡಿಕಾರಿದರು.

ಈ ವೇ‍ಳೆ, ಇಂಗಳಹಳ್ಳಿ ರೈತ ಮಲ್ಲಪ್ಪ ಹಳಕಟ್ಟಿ ಮಾತನಾಡಿ, ಬೆಳಗ್ಗೆಯಿಂದಲೇ ಹಾನಿಗೊಳಗಾದ ಬೆಳೆಗಳ ಬಗ್ಗೆ ಅರ್ಜಿ ಸಲ್ಲಿಸಲು ಬಂದಿದ್ದೇವೆ. ಆದರೆ, ಇಲ್ಲಿ ಯಾರೊಬ್ಬರೂ ನಮ್ಮ‌ ಅರ್ಜಿ ಸ್ವೀಕರಿಸುವವರಿಲ್ಲ. ಶೀಘ್ರವೇ ವಿಮಾ ಕಂಪನಿಯವರು ರೈತರ ಅರ್ಜಿಗಳನ್ನು ಪಡೆದು ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಅಲ್ಲದೇ ಜಿಲ್ಲಾಧಿಕಾರಿಗಳು, ಸಚಿವರು ಈ ಕುರಿತು ಗಮನ ಹರಿಸಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಮಹಿಳೆಯರು, ಮಕ್ಕಳು, ಅನೇಕ ವಾಹನಗಳ ಜತೆಗೆ ರೈತ ಸಂಪರ್ಕ ಕೇಂದ್ರಕ್ಕೆ ಬಂದು ಅರ್ಜಿ ಸ್ವೀಕರಿಸುವುದನ್ನು ಸುರಿಯುತ್ತಿರುವ ಮಳೆಯಲ್ಲಿ ಎದುರು ನೋಡುತ್ತಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ