ರೈತನಿಗೆ ಪರಿಹಾರ ನೀಡಲು ವಿಳಂಬ: ಡಿಸಿ ಕಾರು ಜಪ್ತಿಗೆ ಕೋರ್ಟ್‌ ಆದೇಶ

KannadaprabhaNewsNetwork |  
Published : Dec 06, 2025, 01:45 AM IST
ಪೋಟೋ: 05ಎಸ್‌ಎಂಜಿಕೆಪಿ03: ಜಿಲ್ಲಾಧಿಕಾರಿ ಬಳಸುತ್ತಿರುವ ಸರ್ಕಾರಿ ಕಾರು  | Kannada Prabha

ಸಾರಾಂಶ

ರೈತರೊಬ್ಬರಿಗೆ ಪರಿಹಾರ ನೀಡಲು ವಿಳಂಬ ಮಾಡಿದ್ದಕ್ಕಾಗಿ ಶಿವಮೊಗ್ಗ ಜಿಲ್ಲಾಧಿಕಾರಿಯ ಕಾರು ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ರೈತರೊಬ್ಬರಿಗೆ ಪರಿಹಾರ ನೀಡಲು ವಿಳಂಬ ಮಾಡಿದ್ದಕ್ಕಾಗಿ ಶಿವಮೊಗ್ಗ ಜಿಲ್ಲಾಧಿಕಾರಿಯ ಕಾರು ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ.

ವಸತಿ ಯೋಜನೆಗಾಗಿ ಹರಮಘಟ್ಟದ ಕೃಷಿಕ ನಂದಾಯಪ್ಪ ಅವರ ಒಂದು ಎಕರೆ ಜಮೀನನ್ನು 1992ರಲ್ಲಿ ಸರ್ಕಾರ ವಶಕ್ಕೆ ಪಡೆದಿತ್ತು. ಇದಕ್ಕೆ 22 ಲಕ್ಷ ರು. ಪರಿಹಾರ ನೀಡುವುದಾಗಿ ತಿಳಿಸಿದ್ದ ಸರ್ಕಾರ ಕೇವಲ 9 ಲಕ್ಷ ರು.ನೀಡಿತ್ತು. ಬಾಕಿ ಹಣಕ್ಕಾಗಿ ರೈತ ನಂದಾಯಪ್ಪ ಕಚೇರಿಗೆ ಅಲೆದಾಡಿದರು ಫಲ ಸಿಕ್ಕಿರಲಿಲ್ಲ. ಕೊನೆಗೆ ನಂದಾಯಪ್ಪ ಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಎರಡನೇ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ 95,88,283 ಪರಿಹಾರವನ್ನು ಪಾವತಿಸುವಂತೆ ಸೂಚಿಸಿತ್ತು.

ನ್ಯಾಯಾಲಯದ ಆದೇಶವಾಗಿದ್ದರೂ, ಪರಿಹಾರ ನೀಡದ ಹಿನ್ನೆಲೆ ಜಿಲ್ಲಾಧಿಕಾರಿ ಬಳಸುತ್ತಿರುವ ಕೆಎ 14 ಜಿ 1234 ನಂಬರ್‌ನ ಕಾರು ಜಪ್ತಿ ಮಾಡುವಂತೆ ಶಿವಮೊಗ್ಗದ ಎರಡನೇ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.

ಒಳಗಡೆ ಸಚಿವರ ಸಭೆ: ಜಪ್ತಿಗೆ ಬಂದ ಕೋಟ್ ಅಮೀನರು: ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಅಧ್ಯಕ್ಷತೆಯಲ್ಲಿ ಅಡಿಕೆ ಬೆಳೆಗೆ ಕೊಳೆ ರೋಗ, ಎಲೆ ಚುಕ್ಕೆ ರೋಗಗಳ ಕುರಿತಂತೆ ಸಂಬಂಧಿಸಿದ ಇಲಾಖೆಗಳ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಹಾಗೂ ಸುದ್ದಿಗೋಷ್ಠಿ ನಡೆಯುತ್ತಿತ್ತು. ಅದೇ ಸಂದರ್ಭದಲ್ಲಿ ಕೋರ್ಟ್ ಅಮೀನರು ನ್ಯಾಯಾಲಯದ ಆದೇಶ ಪ್ರತಿ ಹಿಡಿದುಕೊಂಡು ಜಿಲ್ಲಾಧಿಕಾರಿಗಳ ಕಾರು ಜಪ್ತಿಗೆ ಬಂದಿದ್ದರು.

ಸಂತ್ರಸ್ತ ನಂದಾಯಪ್ಪನವರು ಪರಿಹಾರಕ್ಕಾಗಿ ನ್ಯಾಯಾಲಯದ ಹೋರಾಟಕ್ಕಾಗಿ ನಾನು ನನ್ನ ಇನ್ನೊಂದು ಎಕರೆ ಜಮೀನನ್ನು ಕೂಡ ಕಳೆದುಕೊಳ್ಳಬೇಕಾಯಿತು. ನನಗೆ ವಯಸ್ಸಾಗಿದ್ದು, ಕಾಯಿಲೆಯಿಂದ ಬಳಲುತ್ತಿದ್ದು, ಬೆಂಗಳೂರು, ಶಿವಮೊಗ್ಗ ಮತ್ತು ನ್ಯಾಯಾಲಯಕ್ಕೆ ಓಡಾಡಿ ಸುಸ್ತಾಗಿದ್ದು, ಆದರೂ ಅಧಿಕಾರಿಗಳ ಕರುಣೆ ತೋರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಅಂತಿಮವಾಗಿ ಜಿಲ್ಲಾಧಿಕಾರಿಗಳು ನ್ಯಾಯಾಲಯಕ್ಕೆ ಮತ್ತೊಮ್ಮೆ ಪರಿಹಾರ ವಿತರಣೆಗೆ ಗಡುವು ಮುಂದುವರಿಸುವಂತೆ ಪತ್ರ ನೀಡಿ, ನಂದಾಯಪ್ಪ ಅವರನ್ನು ಸಾಗಾಹಾಕಿದ ಘಟನೆಯೂ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಬ್ಸಿಡಿಗಳನ್ನು ಬಳಸಿಕೊಂಡು ಹೈನುಗಾರಿಕೆ ಮಾಡಿ
ಹೊಸ್ತಿಲು ಹುಣ್ಣಿಮೆ: ಶ್ರೀ ರೇಣುಕಾಂಬೆಗೆ ವಿಶೇಷ ಪೂಜೆ