ಕನ್ನಡಪ್ರಭ ವಾರ್ತೆ ಮೈಸೂರು
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಾಧಿಕಾರದ ಉದ್ದೇಶ ಲಾಭ ಹಾಗೂ ನಷ್ಟರಹಿತವಾಗಿ ಕಾರ್ಯನಿರ್ವಹಿಸಿ, ನಗರದ ನಾಗರಿಕರಿಗೆ ಅಗತ್ಯ ಮೂಲಸೌಕರ್ಯವನ್ನು ಒದಗಿಸಿಕೊಡುವುದಾಗಿದೆ. ಆದರೆ, ಈಗ ನೋಡಿದರೆ ಇದು ವಿರುದ್ಧವಾದ ದಿಕ್ಕಿನಲ್ಲಿ ಸಾಗುತ್ತಿರುವುದು ಕಂಡು ಬಂದಿದೆ ಎಂದರು.
ನಮ್ಮ ಅಧಿಕಾರಿಗಳಲ್ಲಿ ಹೊಂದಾಣಿಕೆ ಇಲ್ಲದ ಕಾರಣ ಈ ರೀತಿಯಾಗಿದೆ. ತಾಂತ್ರಿಕ ಇಲಾಖೆ, ನಗರ ಯೋಜನಾ ಇಲಾಖೆ, ಭೂಸ್ವಾಧೀನ ಇಲಾಖೆಯ ಅಧಿಕಾರಿಗಳಲ್ಲಿ ಸಮನ್ವಯ ಕೊರತೆ ಇರುವುದರಿಂದ ಸಾರ್ವಜನಿಕರ ಸಮಸ್ಯೆ ಬಗೆಹರಿಸುವಲ್ಲಿ ವಿಳಂಬವಾಗುತ್ತಿದೆ ಎಂದು ಅವರು ಹೇಳಿದರು.ಎಂಡಿಎ ವ್ಯಾಪ್ತಿಯಲ್ಲಿ ಇರುವ ಬಿಡಿ ನಿವೇಶನಗಳು, ವಾಸವಿರುವ ಮನೆಗಳು, ನಿವೇಶನಗಳು, ತುಂಡು ಭೂಮಿ, ಬಾಡಿಗೆ ಕೊಟ್ಟಿರುವಂತಹ ಜಾಗಗಳು ಇವೆಲ್ಲವನ್ನೂ ಅಧಿಕಾರಿಗಳು ಶೀಘ್ರವೇ ಸ್ಥಳ ಪರಿಶೀಲಿಸಿ ಮಾಹಿತಿ ನೀಡಬೇಕು. ಸಿಎ ನಿವೇಶನಗಳನ್ನು ಸಮುದಾಯದ ಅವಶ್ಯಕತೆಗೆ ಮಂಜೂರು ಮಾಡುವಾಗ ಯಾವ ಮಾನದಂಡದ ಆಧಾರದ ಮೇಲೆ ಮಂಜೂರು ಮಾಡಬೇಕು ಹಾಗೂ ಅರ್ಜಿ ಹಾಕಿರುವ ಸಂಸ್ಥೆಗಳ ಆರ್ಥಿಕ ಸ್ಥಿತಿಗತಿಗಳು ಹಾಗೂ ಉದ್ದೇಶಗಳ ಪೂರ್ಣ ಪ್ರಮಾಣದ ಮಾಹಿತಿಯನ್ನು ಸಮರ್ಪಕವಾಗಿ ನೀಡಬೇಕು ಎಂದು ಅವರು ತಿಳಿಸಿದರು.
ಎಂಡಿಎ ಆಯುಕ್ತ ದಿನೇಶ್ ಕುಮಾರ್, ಅಧಿಕಾರಿಗಳಾದ ಶಿವರಾಂ, ಧರ್ಮೇಂದ್ರ , ಶೇಖರ್ ಮೊದಲಾದಲರು ಇದ್ದರು.