ಕನ್ನಡಪ್ರಭ ವಾರ್ತೆ ರಾಮನಗರ
ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀರಿನ ಕರ ಮನ್ನಾ ಮಾಡುವಂತೆ ನಗರಸಭೆಯಲ್ಲಿ ನಿರ್ಣಯ ಕೈಗೊಂಡು ಸಂಬಂಧಪಟ್ಟ ಇಲಾಖೆಗೆ ತಲುಪಿಸಬೇಕು. ಆನಂತರ ಸದಸ್ಯರು ನಿಯೋಗದಲ್ಲಿ ನನ್ನೊಂದಿಗೆ ಬಂದರೆ ಸಚಿವರೊಂದಿಗೆ ಚರ್ಚಿಸಿ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ ನೀರಿನ ಕರ ಮನ್ನಾ ಮಾಡಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ, ಉದ್ಯಮಿಗಳ ಸಾವಿರಾರು ಕೋಟಿ ರುಪಾಯಿ ಸಾಲ ಮನ್ನಾ ಮಾಡಿರುವಾಗ ಬಡವರ ನೀರಿನ ಶುಲ್ಕ ಮನ್ನಾ ಮಾಡುವುದು ದೊಡ್ಡ ವಿಷಯವೇನೂ ಅಲ್ಲ. ನಗರಸಭೆ ಸದಸ್ಯರು, ಅಧಿಕಾರಿಗಳು ಒಟ್ಟಾಗಿ ಸೇರಿ ನಿರ್ಣಯ ಕೈಗೊಂಡು ಪ್ರಸ್ತಾವನೆ ಸಲ್ಲಿಸಿ, ಸರ್ಕಾರದ ಮೇಲೆ ಒತ್ತಡ ಹೇರಬೇಕು. ನಗರಸಭೆಯಲ್ಲಿ ಮತ್ತೆ ಅಧಿಕಾರ ಹಿಡಿಯಬೇಕೆಂದರೆ ಈ ಕೆಲಸವನ್ನು ನಾವು ಮಾಡಬೇಕು. ಇಷ್ಟು ಚಿಕ್ಕ ವಿಷಯವನ್ನೂ ನಾನು ಹೇಳಿಕೊಡಬೇಕೇ ಎಂದು ಇಕ್ಬಾಲ್ ಹುಸೇನ್ ಪ್ರಶ್ನಿಸಿದರು.ಈ ಹಿಂದೆ ತಿಂಗಳಿಗೆ ಮೂರು ನಾಲ್ಕು ಬಾರಿಯಷ್ಟೇ ನೀರು ಪೂರೈಕೆ ಆಗುತ್ತಿತ್ತು. ಕಳೆದ ಬೇಸಿಗೆಯಲ್ಲಿ ತಿಂಗಳಿಗೊಮ್ಮೆ ಮಾತ್ರವೇ ನೀರು ಪೂರೈಕೆ ಮಾಡಲಾಗಿದೆ. ಆದರೆ, ನೀರು ಪೂರೈಕೆ ಆಗದಿದ್ದರೂ ಜಲಮಂಡಳಿ ಅಧಿಕಾರಿಗಳು ಬಿಲ್ ಕಟ್ಟುವಂತೆ ಸಾರ್ವಜನಿಕರ ಮೇಲೆ ಒತ್ತಡ ಹೇರುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ನೀರು ಪೂರೈಸದೆ ಹಣ ಕೇಳುವುದು ಸರಿಯಲ್ಲ ಎಂದರು.
ಕೈಲಾಂಚ ಹೋಬಳಿಯಲ್ಲಿ ಹಲವಾರು ಏತ ನೀರಾವರಿ ಯೋಜನೆಗಳು ಪ್ರಗತಿಯಲ್ಲಿವೆ. ತೆಂಗಿನಕಲ್ಲು ಕೆರೆಗೆ ಈಗಾಗಲೇ ಕಾವೇರಿ ನೀರು ಹರಿದಿದ್ದು, ಅಲ್ಲಿಂದ ಅವ್ವೇರಹಳ್ಳಿ ಕೆರೆಗೆ ನೀರು ತರಲು ಕಾಮಗಾರಿ ನಡೆಯುತ್ತಿದೆ. ಜತೆಗೆ ಸುತ್ತಮುತ್ತಲಿನ 10- 20 ಕೆರೆ ತುಂಬಿಸಲು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ವಿವರಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕೆ.ರಾಜು, ತಾಲೂಕು ಅಧ್ಯಕ್ಷ ವಿ.ಎಚ್.ರಾಜು, ಕೈಲಾಂಚ ಗ್ರಾಪಂ ಅಧ್ಯಕ್ಷೆ ರತ್ನಮ್ಮ, ಮುಖಂಡರಾದ ದಿನೇಶ್ , ಸುಶೀಲ್ ಕುಮಾರ್ , ಬಸವರಾಜು, ರವಿ, ಕೆ.ಪಿ.ನಾಗರಾಜು, ಕೆ.ಪಿ.ಈರೇಗೌಡ, ವಿಜಯ್ ಕುಮಾರ್ , ಜಗದೀಶ್ , ದೇವರಾಜು, ಪುಟ್ಟಸ್ವಾಮಯ್ಯ, ಕೃಷ್ಣಪ್ಪ ಮತ್ತಿತರರು ಹಾಜರಿದ್ದರು.
ಕೊಳ್ಳಿಗನಹಳ್ಳಿ ಕೃಷಿ ಸಂಘ ಕಾಂಗ್ರೆಸ್ ತೆಕ್ಕೆಗೆ
ರೈತರಿಗೆ ಪ್ರಾಥಮಿಕ ಹಂತದಲ್ಲಿ ಸಹಾಯ ಮಾಡಲು ರೈತ ಸೇವಾ ಸಹಕಾರ ಸಂಘ ತುಂಬಾ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಶ್ರಮ ವಹಿಸಿ ಒಗ್ಗಟ್ಟಿನಿಂದ ಹೋರಾಡಿ ಸಂಘದಲ್ಲಿ ಕಾಂಗ್ರೆಸ್ ಬಾವುಟವನ್ನು ಹಾರಿಸಿದ್ದಾರೆ ಎಂದರು.
ನಿರ್ದೇಶಕರಾದ ಜಿ.ರವಿ, ವೆಂಕಟೇಶ್ , ನಂಜೇಗೌಡ, ಕೆಂಪೇಗೌಡ, ಶಿವಕುಮಾರ್ , ಜಯಮ್ಮ, ಕೆಂಚಕಾಳಯ್ಯ ಮತ್ತಿತರರು ಹಾಜರಿದ್ದರು.