ಜನರ ಮನೆ ಬಾಗಿಲಿಗೆ ಸರ್ಕಾರದ ಸೌಲಭ್ಯ ತಲುಪಿಸಿ: ಶಾಸಕ ಎಚ್.ಟಿ.ಮಂಜು

KannadaprabhaNewsNetwork |  
Published : Jun 07, 2025, 02:03 AM IST
6ಕೆಎಂಎನ್ ಡಿ18 | Kannada Prabha

ಸಾರಾಂಶ

ಗ್ರಾಪಂಗಳು ಸರ್ಕಾರಿ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಿ ಯೋಜನೆಗಳ ಫಲ ಜನರಿಗೆ ದೊರಕುವಂತೆ ಮಾಡುತ್ತಿಲ್ಲ. ಆಯುಷ್ಮಾನ್ ಭಾರತ್ ಕಾರ್ಡ್ ಉಚಿತವಾಗಿ ಮಾಡಲಾಗುತ್ತದೆ. ಇದರಿಂದ ಯಾವುದೇ ಖಾಸಗಿ ಆಸ್ಪತ್ರೆಗೆ ಹೋದರೂ 5 ಲಕ್ಷ ರು. ವರೆಗೆ ಉಚಿತ ಚಿಕಿತ್ಸಾ ಸೌಲಭ್ಯ ಪಡೆಯಬಹುದು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಗ್ರಾಮ ಪಂಚಾಯ್ತಿಗಳು ಸರ್ಕಾರಿ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಪ್ರಾಮಾಣಿಕ ಕೆಲಸ ಮಾಡಬೇಕು ಶಾಸಕ ಎಚ್.ಟಿ.ಮಂಜು ಆಗ್ರಹಿಸಿದರು.

ತಾಲೂಕಿನ ಬೂಕನಕೆರೆ ಗ್ರಾಪಂ ಆವರಣದಲ್ಲಿ ಆಯೋಜಿಸಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ರಾಜ್ಯ ಸರ್ಕಾರ ಶ್ರೀಸಾಮಾನ್ಯರಿಗಾಗಿ ಅನೇಕ ಯೋಜನೆ ರೂಪಿಸಿ ಜಾರಿಗೆ ತಂದಿದೆ. ಆದರೆ, ಯೋಜನೆಗಳ ಬಗ್ಗೆ ಜನರಿಗೆ ಅರಿವಿಲ್ಲ ಎಂದರು.

ಗ್ರಾಪಂಗಳು ಸರ್ಕಾರಿ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಿ ಯೋಜನೆಗಳ ಫಲ ಜನರಿಗೆ ದೊರಕುವಂತೆ ಮಾಡುತ್ತಿಲ್ಲ. ಆಯುಷ್ಮಾನ್ ಭಾರತ್ ಕಾರ್ಡ್ ಉಚಿತವಾಗಿ ಮಾಡಲಾಗುತ್ತದೆ. ಇದರಿಂದ ಯಾವುದೇ ಖಾಸಗಿ ಆಸ್ಪತ್ರೆಗೆ ಹೋದರೂ 5 ಲಕ್ಷ ರು. ವರೆಗೆ ಉಚಿತ ಚಿಕಿತ್ಸಾ ಸೌಲಭ್ಯ ಪಡೆಯಬಹುದು ಎಂದರು.

ಪ್ರಧಾನ ಮಂತ್ರಿ ಜೀವನ್ ಭೀಮಾ ಯೋಜನೆ, ಪ್ರದಾನ ಮಥ್ರಿ ಸಂಧ್ಯಾ ಭೀಮಾ ಯೋಜನೆ, ಅನುಗ್ರಹ ಯೋಜನೆ, ಎನ್.ಎಲ್.ಎಂ ಯೋಜನೆ, ಅನ್ನ ಸುವಿಧಿ ಯೋಜನೆ, ಗೃಹ ಆರೋಗ್ಯ ಯೋಜನೆ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಅಪಾರವಾಗಿದ್ದರೂ ಅವುಗಳ ಅರಿವು ಜನಸಾಮಾನ್ಯರಿಗಿಲ್ಲ ಎಂದರು.

ಗ್ರಾಪಂಗಳು ಸರ್ಕಾರದ ಯೋಜನೆಗಳನ್ನು ಪ್ರಚಾರ ಪಡಿಸಿ ಜನರಿಗೆ ಅರಿವು ಮೂಡಿಸಬೇಕು. ಜನರ ಮನೆ ಬಾಗಿಲಿಗೆ ಹೋಗಿ ಯೋಜನೆ ತಲುಪಿಸಬೇಕು. ಯೋಜನೆಗಳು ಕೇವಲ ಕಾಗದ ಮೇಲಿದ್ದರೆ ಗ್ರಾಮೀಣರ ಬದುಕು ಹಸನಾಗುವುದು ಅಸಾಧ್ಯ ಎಂದರು.

ಸಭೆಯಲ್ಲಿ ಗ್ರಾಪಂ ಅಧ್ಯಕ್ಷ ಶ್ಯಾಂಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಕುಸುಮ, ತಾಪಂ ಇಒ ಕೆ.ಸುಷ್ಮಾ, ಯೋಜನಾಧಿಕಾರಿ ಮೋದೂರು ಶ್ರೀನಿವಾಸ್, ಮಾಜಿ ಸದಸ್ಯ ಹುಲ್ಲೇಗೌಡ, ಬಲ್ಲೇನಹಳ್ಳಿ ನಂದೀಶ್, ಪಿಡಿಒ ಡಾ.ಟಿ.ನರಸಿಂಹರಾಜು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮ ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ