ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳು ಅನುಷ್ಠಾನಗಳ ತಾಲೂಕು ಸಮಿತಿ ಸಭೆಯಲ್ಲಿ ಮಾತನಾಡಿ, ಸರ್ಕಾರ ಬಡ ಜನರಿಗೆ ಗ್ಯಾರಂಟಿ ಯೋಜನೆಗಳು ಸೇರಿದಂತೆ ಹಲವು ಸವಲತ್ತು ನೀಡುತ್ತಿದೆ. ಅದನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಬೇಕು. ಸಮಿತಿ ಪದಾಧಿಕಾರಿಗಳು ಸಹಯೋಗದೊಂದಿಗೆ ಯೋಜನೆಗಳ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಸೂಚಿಸಿದರು.
ಗ್ರಾಮೀಣ ಭಾಗದ ಹಲವೆಡೆ ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಮಸ್ಯೆಯಾಗುತ್ತಿದೆ. ಈ ವ್ಯತ್ಯಾಸಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಸೆಸ್ಕ್ ಇಲಾಖೆ ಅಧಿಕಾರಿಗಳು ಜಾಗೃತಿರಾಗಬೇಕು. ಕೆಲವೆಡೆ ಅಧಿಕಾರಿಗಳ ಸಮನ್ವಯದ ಕೊರತೆ ಕಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.ಸಮಿತಿ ತಾಲೂಕು ಅಧ್ಯಕ್ಷ ಪಿ.ಮಾದೇಶ್ ಮಾತನಾಡಿ, ಗೃಹಲಕ್ಷ್ಮಿ ಯೋಜನೆ ವ್ಯಾಪ್ತಿಯ ಹೊರಗುಳಿದಿರುವ ಫಲಾನುಭವಿಗಳಿರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಎಲ್ಲಾ ಸಾರಿಗೆ ಸೌಲಭ್ಯ ಕಲ್ಪಿಸಲು ಇಲಾಖೆ ಗಮನ ಹರಿಸಬೇಕು. ಯಾವುದೇ ನ್ಯೂನತೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಗ್ರಾಮ ಆಡಳಿತಾಧಿಕಾರಿಗಳಿಗೆ ಕಚೇರಿ ವ್ಯವಸ್ಥೆಗೆ ಸೂಚನೆ
ಸ್ವಂತ ಕಚೇರಿ ಹೊಂದಿರದ ಗ್ರಾಮ ಆಡಳಿತ ಅಧಿಕಾರಿಗಳಿಗೆ (ವಿಎಒ) ಗ್ರಾಮ ಪಂಚಾಯ್ತಿ ಕಟ್ಟಡ ಹಾಗೂ ಇತರೆ ಸರ್ಕಾರಿ ಕಟ್ಟಡಗಳಲ್ಲಿ ಕಚೇರಿ ವ್ಯವಸ್ಥೆ ಮಾಡಿ ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.