ಕನ್ನಡಪ್ರಭ ವಾರ್ತೆ ಕನಕಗಿರಿ
ಇಲ್ಲಿನ ತಾಪಂ ಕಚೇರಿಯ ಸಭಾಂಗಣದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಹೊಸ ಪಡಿತರ ಚೀಟಿಗೆ ಅರ್ಜಿದಾರರ ಮಾಹಿತಿಯನ್ನು ಭರ್ತಿ ಮಾಡುವಾಗ ಆದಾಯದ ಮಿತಿಯನ್ನು ನಿಯಮಿತವಾಗಿ ನಮೂದು ಮಾಡಲು ಗ್ರಾಮ ಒನ್ ಕೇಂದ್ರದ ಸಿಬ್ಬಂದಿಗೆ ಸೂಚಿಸಲಾಗಿದೆ. ಬಾಕಿ ಉಳಿದ 243 ಫಲಾನುಭವಿಗಳ ವಿವಿಧ ತಾಂತ್ರಿಕ ಕಾರಣಗಳನ್ನು ಪರಿಹರಿಸಿ ಯೋಜನೆಯ ಸದ್ಬಳಕೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ನಂತರ ಗೃಹಲಕ್ಷ್ಮೀ ಯೋಜನೆಯ ಕುರಿತು ಚರ್ಚಿಸಿ, ಬಾಕಿ ಇರುವ 139 ಫಲಾನುಭವಿಗಳು ಅರ್ಜಿ ಸಲ್ಲಿಸಿದ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ಗುರುತಿಸಿ ಪೂರ್ಣಗೊಳಿಸಲು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.ಸದರಿ ಯೋಜನೆಯಡಿ ಸಮಸ್ಯೆಗಳಿರುವ ಫಲಾನುಭವಿಗಳ ಸಂಖ್ಯೆ 154 ಇದ್ದು, ಇವುಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಮೇಲ್ಕಾಣಿಸಿದ ಸಂಖ್ಯೆಯನ್ನು ಕಡಿಮೆಗೊಳಿಸಲು ತಿಳಿಸಿದರು.
ನಂತರ ಗ್ಯಾರಂಟಿ ಯೋಜನೆಯ ಅಧ್ಯಕ್ಷರು ಮತ್ತು ಸದಸ್ಯರಿಗೆ ಗುರುತಿನ ಚೀಟಿ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ತಾಪಂ ಇಒ ಕೆ. ರಾಜಶೇಖರ, ಅನುಷ್ಠಾನ ಇಲಾಖೆಯ ಅಧಿಕಾರಿಗಳು, ಗ್ಯಾರಂಟಿ ಯೋಜನೆಯ ತಾಲೂಕು ಸದಸ್ಯರು, ತಾಪಂ ಸಿಬ್ಬಂದಿ ಇದ್ದರು.