ಕನ್ನಡಪ್ರಭ ವಾರ್ತೆ ಸುರಪುರ
ಕೂಡಲೇ ಆ ವ್ಯಕ್ತಿ ಯಾರು ಎಂದು ಪತ್ತೆ ಮಾಡಿ ಆತನ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ಸಂಘಟನೆಯ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನರೆಡ್ಡಿ ಅಮ್ಮಾಪುರ ನೇತೃತ್ವದಲ್ಲಿ ಅನೇಕ ಮುಖಂಡರು ನಗರದ ಪೊಲೀಸ್ ಠಾಣೆಯಲ್ಲಿ ಡಿವೈಎಸ್ಪಿ ಜಾವಿದ್ ಇನಾಂದಾರ್ ಅವರಿಗೆ ಮನವಿ ಸಲ್ಲಿಸಿ ಆಗ್ರಹಸಿದರು.
ಈ ಸಂದರ್ಭದಲ್ಲಿ ಸುರಪುರ ಠಾಣೆಯ ಪೊಲೀಸ್ ಇನ್ಸ್ಪೇಕ್ಟರ್ ಆನಂದ ವಾಘಮೊಡೆ ಅವರಿಗೆ ಮತ್ತು ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.ಮುಖಂಡರಾದ ಸಿದ್ದಲಿಂಗಯ್ಯಸ್ವಾಮಿ, ಮಲ್ಲಣ್ಣ ಸಾಹು, ರವಿಗೌಡ ಹೆಮನೂರ, ಪ್ರದೀಪ ಕದರಾಪುರ, ಸಿದ್ದನಗೌಡ ಹೆಬ್ಬಾಳ, ಶಾಂತಗೌಡ ಗೋನಾಲ, ಗುರುನಾಥರಡ್ಡಿ, ಬಸನಗೌಡ ಪಾಟೀಲ್ ಸೇರಿದಂತೆ ಅನೇಕರಿದ್ದರು.ಬಸ್ ನಿಲ್ದಾಣದಲ್ಲಿ ಬಸವಣ್ಣನವರಿಗೆ ಅವಮಾನಕರವಾಗಿ ಮಾತನಾಡಿ, ಸಮಾಜದಲ್ಲಿ ಅಶಾಂತಿ ಹುಟ್ಟು ಹಾಕಲು ಕಾರಣವಾದ ವ್ಯಕ್ತಿ ಬೀದರ್ ಜಿಲ್ಲೆಯ ಬೀದರ್ ತಾಲೂಕಿನ ನಾಗವಾರ ಗ್ರಾಮದ ಜಿ. ಜೈಶೀಲ ಪಾಸ್ಟರ್ ಎನ್ನಲಾಗಿದ್ದು, ಈತನು ಸುರಪುರ ತಾಲೂಕಿನ ಸೂಗೂರ ಗ್ರಾಮದಲ್ಲಿ ವಾಸವಾಗಿದ್ದಾನೆ ಎಂದು ಹೇಳಲಾಗಿದೆ. ಪೊಲೀಸರು ಆದಷ್ಟು ಬೇಗ ಈತನ ಕರೆತಂದು ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಬೇಕು.
- ಮಲ್ಲಿಕಾರ್ಜುನರಡ್ಡಿ ಅಮ್ಮಾಪುರ, ಅಕವೀಲಿಂ ಸಮಾಜ ಸಂಘದ ರಾಜ್ಯಾಧ್ಯಕ್ಷರು