ಸುಳ್ಳು ಕೇಸ್‌ ಹಾಕಿದ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ

KannadaprabhaNewsNetwork |  
Published : Feb 23, 2024, 01:49 AM IST
ಹೊಸಪೇಟೆಯಲ್ಲಿ ವಕೀಲರು ತಹಸೀಲ್ದಾರ್ ಶೃತಿ ಎಂ. ಮಳ್ಳಪ್ಪಗೌಡ್ರ ಅವರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ರಾಮನಗರದ ಐಜೂರು ಪೊಲೀಸ್ ಠಾಣೆಯಲ್ಲಿ ಸಕಾರಣವಿಲ್ಲದೆ 50 ಜನ ವಕೀಲರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಹೊಸಪೇಟೆ: ವಕೀಲರ ವಿರುದ್ಧ ರಾಮನಗರ ಪೊಲೀಸರು ಸಲ್ಲಿಸಿದ ಸುಳ್ಳು ಪ್ರಕರಣ ಹಿಂಪಡೆಯಲು ಮತ್ತು ಪಿಎಸ್ಐ ವಿರುದ್ಧ ಕ್ರಮ ಜರುಗಿಸಲು ಒತ್ತಾಯಿಸಿ ಇಲ್ಲಿನ ವಕೀಲರ ಸಂಘದದಿಂದ ಗುರುವಾರ ಕಲಾಪ ಬಹಿಷ್ಕರಿಸಿ ನಗರದಲ್ಲಿ ಪ್ರತಿಭಟನೆ ಮಾಡಿದರು.

ನ್ಯಾಯಾಲಯದ ಆವರಣದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಪುನೀತ್ ರಾಜಕುಮಾರ ವೃತ್ತದಲ್ಲಿ ಸೇರಿ ರಾಮನಗರ ಪೊಲೀಸರ ವಿರುದ್ಧ ಘೋಷಣೆ ಕೂಗಲಾಯಿತು. ವಕೀಲರ ಹಿತರಕ್ಷಣಾ ಕಾಯ್ದೆಯನ್ನು ಕೂಡಲೇ ಜಾರಿಗೆ ತರಲು ಒತ್ತಾಯಿಸಲಾಯಿತು. ನಂತರ ತಹಸೀಲ್ದಾರ್ ಶೃತಿ ಎಂ. ಮಳ್ಳಪ್ಪಗೌಡ್ರ ಅವರಿಗೆ ಮನವಿ ಸಲ್ಲಿಸಿದರು.

ವಕೀಲರ ಸಂಘದ ಜಿಲ್ಲಾಧ್ಯಕ್ಷ ಕೆ. ಪ್ರಹ್ಲಾದ್ ಮಾತನಾಡಿ, ರಾಮನಗರದ ಐಜೂರು ಪೊಲೀಸ್ ಠಾಣೆಯಲ್ಲಿ ಸಕಾರಣವಿಲ್ಲದೆ 50 ಜನ ವಕೀಲರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ವಕೀಲರ ವಿರುದ್ಧವೇ ಪೊಲೀಸರು ಈ ರೀತಿಯ ಸುಳ್ಳು ಕೇಸುಗಳನ್ನು ದಾಖಲಿಸುವುದು ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದು, ಕಾನೂನು ರಕ್ಷಣೆ ಮಾಡುವ ಮತ್ತು ಪಾಲನೆ ಮಾಡುವ ವಕೀಲರ ಪರಿಸ್ಥಿತಿ ಹೀಗಾದರೆ ಸಾಮಾನ್ಯ ಜನರ ಪಾಡೇನು? ಇಂತಹ ವಾತಾವರಣ ಸೃಷ್ಟಿಸಿದ ರಾಮನಗರ ಪೊಲೀಸರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಈಗಾಗಲೇ ವಕೀಲರ ಮೇಲೆ ದಾಖಲಿಸಿದ ಸುಳ್ಳು ಪ್ರಕರಣವನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಪಿ. ಶ್ರೀನಿವಾಸಮೂರ್ತಿ, ಉಪಾಧ್ಯಕ್ಷ ಎಚ್.ಎಂ. ಮಂಜುನಾಥಸ್ವಾಮಿ, ಜಂಟಿ ಕಾರ್ಯದರ್ಶಿ ವಿ. ರವಿಕುಮಾರ, ವಕೀಲರಾದ ಎ. ಮರಿಯಪ್ಪ, ಎಸ್.ವಿ. ಜವಳಿ, ಡಿ. ರವಿರಾಜ್. ಜಿ. ವೀರಭದ್ರಪ್ಪ, ಜೆ. ಪ್ರಹ್ಲಾದ್ ಶೆಟ್ಟಿ, ಎ. ಕರುಣಾನಿಧಿ, ಬಳ್ಳಾರಿ ಜಿ. ಬಸವರಾಜ್, ಐ. ಪರಶುರಾಮ, ಬಿ.ಸಿ. ಮಹಾಂತೇಶ, ನೋಟರಿಗಳಾದ ಚಂದ್ರಶೇಖರ ವಿ. ಯಲಗೊಡು, ತಾರಿಹಳ್ಳಿ ಹನುಮಂತಪ್ಪ, ಎನ್.ಎಂ. ಸೌದಾಗರ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುಸ್ತಕ ಸಂಸ್ಕೃತಿ ಸಂವೇದನೆಗೆ ಸಂಬಂಧಿಸಿದ್ದು: ಬರಗೂರು
ಜಿಬಿಎ ಚುನಾವಣೆಗೆ ಕಾಂಗ್ರೆಸ್‌ ಅರ್ಜಿಗೆ ₹50 ಸಾವಿರ!