ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ತಾಲೂಕಿನ ಚಂದಗಾಲು ಗ್ರಾಮದ 76 ವರ್ಷದ ವೃದ್ಧ ಅನಕ್ಷರಸ್ಥ ರಂಗಣ್ಣರಿಗೆ ಮೇಳಾಪುರ ಗ್ರಾಮದ ಬ್ಯಾಂಕ್ ಆಫ್ ಬರೋಡ ಬಿಸಿನೆಸ್ ಕರೆಸ್ಪಾಂಡೆಂಟ್ ಯೋಗಾನಂದ ಎಂಬ ವ್ಯಕ್ತಿ 2400 ರು. ಹಣ ಡ್ರಾ ಮಾಡಿ, ಕೇವಲ 1200 ರು. ಹಣ ನೀಡಿ ವಂಚಿಸಿರುವ ಬಗ್ಗೆ ಕನ್ನಡಪ್ರಭ ಪತ್ರಿಕೆ ವರದಿ ಮಾಡಿತ್ತು.
ವೇದಿಕೆ ಅಧ್ಯಕ್ಷ ಶಂಕರ್ಬಾಬು ನೇತೃತ್ವದಲ್ಲಿ ಪದಾಧಿಕಾರಿಗಳು ಬಾಬುರಾಯನಕೊಪ್ಪಲಿನ ಬ್ಯಾಂಕ್ ಆಫ್ ಬರೋಡ ಶಾಖೆಗೆ ತೆರಳಿ ಶಾಖಾ ವ್ಯವಸ್ಥಾಪಕ ವೆಂಕಟೇಶ್ಬಾಬು ಅವರನ್ನು ಭೇಟಿ ಮಾಡಿದರು.ಸರ್ಕಾರ ವೃದ್ಧರು, ವಿಕಲಚೇತನರು ಹಾಗೂ ವಿಧವಾವೇತನ ಸೇರಿದಂತೆ ಇತರೆ ಅರ್ಹ ಫಲಾನುಭವಿಗಳಿಗೆ ಪ್ರತಿ ತಿಂಗಳು ಮಾಶಾಸನ ನೀಡುತ್ತಿದೆ. ಆದರೆ, ಬ್ಯಾಂಕಿನ ಏಜೆಂಟರುಗಳು ಅನಕ್ಷರಸ್ಥರನ್ನು ಗುರಿಯಾಗಿಸಿಕೊಂಡು ತಾಲೂಕಿನಾದ್ಯಂತ ವಂಚಸುತ್ತಿದ್ದಾರೆ ಎಂದು ದೂರಿದರು.
ಈ ವೇಳೆ ವ್ಯವಸ್ಥಾಪಕ ವೆಂಕಟೇಶ್ಬಾಬು ಸರಿಯಾದ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ವಂಚಿಸಿರುವ ವ್ಯಕ್ತಿಯೇ ತಪ್ಪಾಗಿರುವುದಾಗಿ ಒಪ್ಪಿಕೊಂಡಿದ್ದರೂ ಈ ರೀತಿ ವ್ಯವಸ್ಥಾಪಕರು ಉಡಾಫೆ ಉತ್ತರ ನೀಡುವುದು ಸರಿಯಲ್ಲ ಎಂದು ವೇದಿಕೆ ಮುಖಂಡರು ಕಿಡಿಕಾರಿದರು.