ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಈ ವೇಳೆ ಮಾತನಾಡಿದ ಲಕ್ಷ್ಮೀನಾರಾಯಣರೆಡ್ಡಿ, ವಿಮಾ ಮೊತ್ತ ವಿತರಣೆಯಲ್ಲಿ ಆಗಿರುವ ವಂಚನೆ ಬಗ್ಗೆ ಅಧಿಕಾರಿಗಳ ಮೂಲಕ ಸರ್ವೇ ಮಾಡಿಸಿ ಅನ್ಯಾಯ ಆಗಿರುವ ರೈತರಿಗೆ ನ್ಯಾಯಕೊಡಬೇಕು ಎಂದರು.
ಬೆಳೆನಷ್ಟ ಪರಿಹಾರ ನೀಡಲಿಈ ಬಾರಿ ಮುಂಗಾರು ಹಿಂಗಾರು ಕೈಕೊಟ್ಟ ಕಾರಣ ಶೇ.100 ರಷ್ಟು ಬರಗಾಲಕ್ಕೆ ತುತ್ತಾಗಿದ್ದು ಸಂಪೂರ್ಣ ಬೆಳೆನಾಶವಾಗಿದೆ. ಮತ್ತೆ ಮುಂಗಾರು ಬರುವ ಕಾಲ ಸನ್ನಿಹಿತವಾಗಿದ್ದರೂ ಕೇಂದ್ರ ಮತ್ತು ರಾಜ್ಯ ಸರಕಾರಗಳು ರೈತರ ನೆರವಿಗೆ ಬಾರದೆ ಕಾಲಹರಣ ಮಾಡುತ್ತಿರುವುದು ಸರಿಯಲ್ಲ. ಜಿಲ್ಲಾಡಳಿತ ಕೂಡಲೇ ರೈತರ ನೆರವಿಗೆ ಬಂದು ಹಣ ಬಿಡುಗಡೆಗೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿ, ರೈತರಿಗೆ ಆಗಿರುವ ಮೋಸದ ಬಗ್ಗೆ ಮಾಹಿತಿ ಪಡೆದಿದ್ದು ಕೂಡಲೇ ಈ ಸಂಬಂಧ ಮಾಹಿತಿ ಅಧಿಕಾರಿಗಳಿಂದ ವರದಿ ಪಡೆದು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವ ಆಶ್ವಾಸನೆ ನೀಡಿದರು.ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್, ಶಿಡ್ಲಘಟ್ಟ ತಾಲೂಕು ಅಧ್ಯಕ್ಷ ಮುನೇಗೌಡ, ಕಾರ್ಯದರ್ಶಿ ನವೀನ್ಕುಮಾರ್, ಆಂಜಿನಪ್ಪ, ಕದಿರೇಗೌಡ, ಬಿ.ಆಂಜಿನಪ್ಪ ಮತ್ತಿತರರು ಇದ್ದರು.