ಸಮರ್ಪಕ ವಿದ್ಯುತ್‌ ವ್ಯವಸ್ಥೆಗೆ ಆಗ್ರಹ

KannadaprabhaNewsNetwork |  
Published : Jul 12, 2024, 01:30 AM IST
ಕಂಪ್ಲಿ ಮತ್ತು ಹಾಸಣಗಿಯಲ್ಲಿ ವಿದ್ಯುತ್ ಅವ್ಯವಸ್ಥೆ ಸರಿಪಡಿಸಲು ಸ್ಥಳೀಯರಿಂದ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಮಳೆಗಾಲದ ಪ್ರಾರಂಭದಲ್ಲಿ ವಿದ್ಯುತ್ ಸರಿಯಾಗಿ ಕೊಡಲು ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳದಿರುವುದು ಇಲಾಖೆಯ ನಿಷ್ಕಾಳಜಿಯನ್ನು ತೋರಿಸುತ್ತದೆ. ಕೂಡಲೇ ವಿದ್ಯುತ್ ವ್ಯವಸ್ಥೆಯನ್ನು ಸರಿಪಡಿಸಿ ಎಂದು ಆಗ್ರಹಿಸಲಾಯಿತು.

ಯಲ್ಲಾಪುರ: ಕಳೆದ ಒಂದು ತಿಂಗಳಿಂದ ಕಂಪ್ಲಿ ಮತ್ತು ಹಾಸಣಗಿ ವ್ಯಾಪ್ತಿಯಲ್ಲಿ ತೀರಾ ವಿದ್ಯುತ ಅವ್ಯವಸ್ಥೆ ಉಂಟಾಗಿದ್ದು, ದಿನಕ್ಕೆ ೩ ತಾಸು ವಿದ್ಯುತ್ ಇರುವುದಿಲ್ಲ. ಒಂದು ವಾರದಲ್ಲಿ ವಿದ್ಯುತ್ ಇಲಾಖೆಯವರು ಸರಿಪಡಿಸಬೇಕು. ಇಲ್ಲವಾದಲ್ಲಿ ಉಗ್ರ ಪ್ರತಿಭಟನೆ ಮಾಡುವುದಾಗಿ ಕಂಪ್ಲಿ ಮತ್ತು ಹಾಸಣಗಿ ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರು ಮಂಚೀಕೇರಿ ಹೆಸ್ಕಾಂ ಕಚೇರಿಯ ಶಾಖಾಧಿಕಾರಿಗಳಿಗೆ ಮನವಿ ನೀಡಿ, ಆಗ್ರಹಪಡಿಸಿದ್ದಾರೆ.

ಮಳೆಗಾಲದ ಪ್ರಾರಂಭದಲ್ಲಿ ವಿದ್ಯುತ್ ಸರಿಯಾಗಿ ಕೊಡಲು ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳದಿರುವುದು ಇಲಾಖೆಯ ನಿಷ್ಕಾಳಜಿಯನ್ನು ತೋರಿಸುತ್ತದೆ. ಕೂಡಲೇ ವಿದ್ಯುತ್ ವ್ಯವಸ್ಥೆಯನ್ನು ಸರಿಪಡಿಸಿ, ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ ಎಂದರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ರಾಘವೇಂದ್ರ ಭಟ್ಟ ಹಾಸಣಗಿ, ಕಂಪ್ಲಿ ಗ್ರಾಪಂ ಉಪಾಧ್ಯಕ್ಷ ಸದಾಶಿವ ಚಿಕ್ಕೊತ್ತಿ, ಸದಸ್ಯ ರಘುಪತಿ ಹೆಗಡೆ, ಹಾಸಣಗಿ ಗ್ರಾಪಂ ಅಧ್ಯಕ್ಷ ವಿನೋದಾ ಬಿಲ್ಲವ, ಉಪಾಧ್ಯಕ್ಷ ಪುರಂದರ ನಾಯ್ಕ, ಪವನ ಕೇಸರಕರ, ದಿವಾಕರ ಪೂಜಾರಿ, ಮುಸ್ತಾದ್ ಶೇಕ್, ಬಾಲಚಂದ್ರ ಹೆಗಡೆ, ಹಿರಿಯಾ ಪೂಜಾರಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!