ಕನ್ನಡ ನಾಮಫಲಕ ಅಳವಡಿಕೆಗೆ ಕರವೇ ಆಗ್ರಹ

KannadaprabhaNewsNetwork |  
Published : Dec 28, 2023, 01:46 AM ISTUpdated : Dec 28, 2023, 01:47 AM IST
ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕನ್ನಡ ನಾಮಫಲಕ ಅಳವಡಿಸುವಂತೆ ಕೋರಿ ಹೂ ನೀಡಿದರು. | Kannada Prabha

ಸಾರಾಂಶ

ಬೆಳಗಾವಿ ನಗರವನ್ನು ಕನ್ನಡಮಯವನ್ನಾಗಿಸಲು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಂಗ್ಲ ಮತ್ತು ಮರಾಠಿ ಭಾಷೆಯಲ್ಲಿ ನಾಮಫಲಕ ಹಾಕಿರುವ ಅಂಗಡಿ ಮಾಲೀಕರಿಗೆ ಗುಲಾಬಿ ಹೂ ನೀಡಿ, ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸುವಂತೆ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಳಗಾವಿ ನಗರವನ್ನು ಕನ್ನಡಮಯವನ್ನಾಗಿಸಲು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ವಿಭಿನ್ನ ಅಭಿಯಾನ ಆರಂಭಿಸಿದ್ದಾರೆ.

ನಗರದ ಚನ್ನಮ್ಮ ವೃತ್ತದಿಂದ ಕರವೇ ಕಾರ್ಯಕರ್ತರು ಅಭಿಯಾನ ಆರಂಭಿಸಿದರು. ಒಂದು ತಿಂಗಳ ಅವಧಿಯೊಳಗೆ ಆಂಗ್ಲ ಮತ್ತು ಮರಾಠಿ ಭಾಷೆಯಲ್ಲಿ ನಾಮಫಲಕ ಹಾಕಿರುವ ಅಂಗಡಿ ಮಾಲೀಕರಿಗೆ ಗುಲಾಬಿ ಹೂ ನೀಡಿ, ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸುವಂತೆ ಕರವೇ ಕಾರ್ಯಕರ್ತರು ಮನವಿ ಮಾಡಿದರು.

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದ್ದು, ಹಾಗಾಗಿ, ಕನ್ನಡದಲ್ಲೇ ನಾಮಫಲಕವನ್ನು ಅಳವಡಿಸಲೇಬೇಕು. ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ 50 ವರ್ಷಗಳಾಗಿವೆ. ಈ ಕಾರಣಕ್ಕೆ ಕನ್ನಡದಲ್ಲೇ ಬೋರ್ಡ್ ಹಾಕಬೇಕು ಎಂದು ಆಗ್ರಹಿಸಿದರು. ಒಂದು ವೇಳೆ ಕನ್ನಡ ಬೋರ್ಡ್ ಹಾಕದಿದ್ದರೆ ಆಂಗ್ಲ, ಮರಾಠಿ ಬೋರ್ಡ್ ತೆರವು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ