ಗೊರೂರು ಡ್ಯಾಂ ಮುಂದಿನ ಉದ್ಯಾನವನಕ್ಕೆ ಐನೂರು ಕೋಟಿ ಮೀಸಲಿಗೆ ಆಗ್ರಹ

KannadaprabhaNewsNetwork |  
Published : Feb 24, 2026, 02:45 AM IST
23ಎಚ್ಎಸ್ಎನ್6 :  | Kannada Prabha

ಸಾರಾಂಶ

ಗೊರೂರು ಸಮೀಪದ ಹೇಮಾವತಿ ಅಣೆಕಟ್ಟೆ ಮುಂಭಾಗದ ವಿಶಾಲ ಖಾಲಿ ಭೂ ಪ್ರದೇಶವನ್ನು ಪ್ರವಾಸಿಗರ ಆಕರ್ಷಣೆಯ ಕೇಂದ್ರವನ್ನಾಗಿ ರೂಪಿಸುವ ಉದ್ದೇಶದಿಂದ, ಬೃಂದಾವನ ಗಾರ್ಡನ್ಸ್ ಮಾದರಿಯಲ್ಲಿ ಭವ್ಯ ಉದ್ಯಾನ ನಿರ್ಮಿಸಲು ರಾಜ್ಯ ಸರ್ಕಾರವು ಈ ವರ್ಷದ ಬಜೆಟ್‌ನಲ್ಲಿ ೫೦೦ ಕೋಟಿ ಅನುದಾನವನ್ನು ಮೀಸಲಿಡಬೇಕು ಎಂದು ಬೃಂದಾವನ ಹೋರಾಟ ಸಮಿತಿ ಗೌರವಾಧ್ಯಕ್ಷ ಹೇಮರಾಜ್ ಆಗ್ರಹಿಸಿದರು. ಕೆಆರ್‌ಎಸ್ ಮಾದರಿಯಲ್ಲಿ ಸುಂದರ ಉದ್ಯಾನ ನಿರ್ಮಿಸಲು ಸರ್ಕಾರದಿಂದ ಅಗತ್ಯ ಅನುದಾನ ನೀಡುವುದಾಗಿ ಸಾರ್ವಜನಿಕ ವೇದಿಕೆಯಲ್ಲಿ ಭರವಸೆ ನೀಡಿದ್ದರು ಎಂದು ಹೇಳಿದರು.

ಹಾಸನ: ತಾಲೂಕಿನ ಗೊರೂರು ಸಮೀಪದ ಹೇಮಾವತಿ ಅಣೆಕಟ್ಟೆ ಮುಂಭಾಗದ ವಿಶಾಲ ಖಾಲಿ ಭೂ ಪ್ರದೇಶವನ್ನು ಪ್ರವಾಸಿಗರ ಆಕರ್ಷಣೆಯ ಕೇಂದ್ರವನ್ನಾಗಿ ರೂಪಿಸುವ ಉದ್ದೇಶದಿಂದ, ಬೃಂದಾವನ ಗಾರ್ಡನ್ಸ್ ಮಾದರಿಯಲ್ಲಿ ಭವ್ಯ ಉದ್ಯಾನ ನಿರ್ಮಿಸಲು ರಾಜ್ಯ ಸರ್ಕಾರವು ಈ ವರ್ಷದ ಬಜೆಟ್‌ನಲ್ಲಿ ೫೦೦ ಕೋಟಿ ಅನುದಾನವನ್ನು ಮೀಸಲಿಡಬೇಕು ಎಂದು ಬೃಂದಾವನ ಹೋರಾಟ ಸಮಿತಿ ಗೌರವಾಧ್ಯಕ್ಷ ಹೇಮರಾಜ್ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಕಳೆದ ವರ್ಷ ಪತ್ರಿಕಾ ಮತ್ತು ದೃಶ್ಯ ಮಾಧ್ಯಮಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿತ್ತು ಎಂದು ತಿಳಿಸಿದರು. ಬಳಿಕ ೬-೧೨-೨೦೨೫ರಂದು ಹಾಸನದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಮಾವತಿ ಅಣೆಕಟ್ಟಿನ ಮುಂಭಾಗದ ಖಾಲಿ ಜಾಗದಲ್ಲಿ ಕೆಆರ್‌ಎಸ್ ಮಾದರಿಯಲ್ಲಿ ಸುಂದರ ಉದ್ಯಾನ ನಿರ್ಮಿಸಲು ಸರ್ಕಾರದಿಂದ ಅಗತ್ಯ ಅನುದಾನ ನೀಡುವುದಾಗಿ ಸಾರ್ವಜನಿಕ ವೇದಿಕೆಯಲ್ಲಿ ಭರವಸೆ ನೀಡಿದ್ದರು ಎಂದು ಹೇಳಿದರು.

ಆ ಭರವಸೆಯಂತೆ ಪ್ರಸ್ತುತ ಬಜೆಟ್ ಅಧಿವೇಶನದಲ್ಲೇ ೫೦೦ ಕೋಟಿ ಅನುದಾನವನ್ನು ನಿಗದಿಪಡಿಸಿ ಕಾಮಗಾರಿ ಶೀಘ್ರ ಆರಂಭಿಸಬೇಕು ಎಂದು ಸಮಿತಿ ಒತ್ತಾಯಿಸಿದೆ. ಈ ಯೋಜನೆ ಜಾರಿಯಾದರೆ ಗೊರೂರು, ಹಾಸನ ಪ್ರದೇಶವು ಪ್ರಮುಖ ಪ್ರವಾಸಿತಾಣವಾಗಿ ಅಭಿವೃದ್ಧಿಯಾಗಲಿದೆ. ಕುಟುಂಬ ಸಮೇತ ಪ್ರವಾಸಿಗರು ಭೇಟಿ ನೀಡುವ ಕೇಂದ್ರವಾಗುವುದರ ಜೊತೆಗೆ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳು ಹೆಚ್ಚಾಗಲಿವೆ ಎಂದು ಅಭಿಪ್ರಾಯಪಟ್ಟರು.

ಹೇಮಾವತಿ ಅಣೆಕಟ್ಟು ಈಗಾಗಲೇ ಪ್ರಕೃತಿ ಸೌಂದರ್ಯದಿಂದ ಪ್ರಸಿದ್ಧವಾಗಿದ್ದು, ಅದನ್ನು ಸುವ್ಯವಸ್ಥಿತ ಉದ್ಯಾನ, ಸಂಗೀತ ಕಾರಂಜಿ, ಬೆಳಕು ಅಲಂಕಾರ, ಮಕ್ಕಳ ಆಟೋಪಕರಣಗಳು, ಪಥಸಂಚಾರ ಮಾರ್ಗಗಳು ಸೇರಿದಂತೆ ಆಧುನಿಕ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಜಿಲ್ಲೆಗೆ ಹೊಸ ಪ್ರವಾಸೋದ್ಯಮ ಅಧ್ಯಾಯ ಆರಂಭವಾಗಲಿದೆ ಎಂದು ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಬೃಂದಾವನ ಹೋರಾಟ ಸಮಿತಿಯ ಜಗದೀಶ್ ರಾಮಘಟ್ಟ, ಬಂಗಾರಿ ಗೌಡ, ಮಲ್ಲೇಶ್, ನಿಂಗರಾಜು, ಜಿ.ಡಿ. ಪ್ರಕಾಶ್ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಂಗ್ರೆಸ್‌ ನಾಯಕರ ಜತೆ ಒಂದೇ ಕಾರಿನಲ್ಲಿ ಕಾಣಿಸಿಕೊಂಡ ಪ್ರೀತಂ ಗೌಡ
ಇಂದಿನಿಂದ ಪ್ರಸಿದ್ಧ ಕೋಟೆ ಮಾರಿಕಾಂಬ ಜಾತ್ರೆ