ಬಳ್ಳಾರಿ: ತಾಲೂಕಿನ ಶ್ರೀಧರಗಡ್ಡೆ ಗ್ರಾಮದಲ್ಲಿ ನಿವೇಶನ ರಹಿತರಿಗೆ ನಿವೇಶನಗಳನ್ನು ಹಂಚಲು ಆಗ್ರಹಿಸಿ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದಿಂದ ಇಲ್ಲಿನ ತಾಪಂ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.ನಿವೇಶನ ರಹಿತರಿಗೆ ಹಂಚಿಕೆ ಮಾಡುವ ಹಿನ್ನೆಲೆಯಲ್ಲಿ ಸರ್ಕಾರ ಈ ಹಿಂದೆ ಆಶ್ರಯ ಯೋಜನೆಯಡಿ 10.36 ಎಕರೆ ಜಾಗ ನಿಗದಿಗೊಳಿಸಿತ್ತು. 24 ವರ್ಷಗಳಾದರೂ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲು ಸಾಧ್ಯವಾಗಿಲ್ಲ. ಫಲಾನುಭವಿಗಳ ಪಟ್ಟಿಯನ್ನು ಕೂಡ ತಯಾರು ಮಾಡಲಾಗಿದ್ದರೂ ನಿವೇಶನ ಹಂಚಿಕೆಗಳನ್ನು ವಿಳಂಬ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.
ಮನವಿ ಸ್ವೀಕರಿಸಿದ ತಾಪಂ ಇಒ ಮಡಗಿನ ಬಸಪ್ಪ, ಶೀಘ್ರದಲ್ಲೇ ನಿವೇಶನ ರಹಿತ ಫಲಾನುಭವಿಗಳಿಗೆ ಹಂಚಿಕೆ ಮಾಡುವ ಸಂಬಂಧ ಅಗತ್ಯ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ಈರಣ್ಣ, ಈ.ಹನುಮಂತಪ್ಪ, ಗ್ರಾಮಸ್ಥರಾದ ಬಾಬು, ಮೇದಾರ್ ಬಸಮ್ಮ, ನಾಗಮ್ಮ, ಯಶೋದಾ, ಗಂಗಮ್ಮ, ವೀಣಾ, ಶಿವಕುಮಾರಿ, ವಿಜಯಲಕ್ಷ್ಮಿ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಮತ್ತು ಇತರರು ಭಾಗವಹಿಸಿದ್ದರು.ಬಳ್ಳಾರಿ ತಾಲೂಕಿನ ಶ್ರೀಧರಗಡ್ಡೆ ಗ್ರಾಮದ ನಿವೇಶನ ರಹಿತ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದಿಂದ ತಾಪಂ ಕಚೇರಿ ಎದುರು ಪ್ರತಿಭಟನೆ ನಡೆಸಿ, ಇಒಗೆ ಮನವಿ ಸಲ್ಲಿಸಲಾಯಿತು.