ಸರ್ಕಾರಿ ಶಾಲೆಗಳಲ್ಲಿ ಕಾಯಂ ಶಿಕ್ಷಕರ ನೇಮಿಸಲು ಆಗ್ರಹ

KannadaprabhaNewsNetwork |  
Published : Jun 19, 2026, 01:30 AM IST
                              ಸೂಲಿಬೆಲೆ ಜನತಾಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಜೇನುಗೂಡು ಟ್ರಸ್ಟ್ ನಿರ್ದೇಶಕರಾದ ಡಾ.ನಯಾಜ್ ಖಾನ್ ಹುಟ್ಟು ಹಬ್ಬದ ಪ್ರಯುಕ್ತವಾಗಿ ನೋಟ್ ಬುಕ್ ಲೇಖನ ಸಾಮಾಗ್ರಿಗಳನ್ನು ವಿತರಣೆ ಮಾಡಿದರು. | Kannada Prabha

ಸಾರಾಂಶ

ಸೂಲಿಬೆಲೆ: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ. ಆದರೆ ಕಾಯಂ ಶಿಕ್ಷಕರಿಲ್ಲದೆ ದಾಖಲಾತಿ ಕುಸಿಯುತ್ತಿರುವುದು ಆತಂಕಕಾರಿ ವಿಷಯ ಎಂದು ಜೇನುಗೂಡು ರೂರಲ್ ಡೆವಲ್ಪಮೆಂಟ್ ಅಂಡ್ ಕಲ್ಚರಲ್ ಟ್ರಸ್ಟಿನ ಉಪಾಧ್ಯಕ್ಷ ಕೆ.ಎಂ.ಚೌಡೇಗೌಡ ಕಳವಳ ವ್ಯಕ್ತಪಡಿಸಿದರು

ಸೂಲಿಬೆಲೆ: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ. ಆದರೆ ಕಾಯಂ ಶಿಕ್ಷಕರಿಲ್ಲದೆ ದಾಖಲಾತಿ ಕುಸಿಯುತ್ತಿರುವುದು ಆತಂಕಕಾರಿ ವಿಷಯ ಎಂದು ಜೇನುಗೂಡು ರೂರಲ್ ಡೆವಲ್ಪಮೆಂಟ್ ಅಂಡ್ ಕಲ್ಚರಲ್ ಟ್ರಸ್ಟಿನ ಉಪಾಧ್ಯಕ್ಷ ಕೆ.ಎಂ.ಚೌಡೇಗೌಡ ಕಳವಳ ವ್ಯಕ್ತಪಡಿಸಿದರು.

ಜನತಾ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೇನುಗೂಡು ರೂರಲ್ ಡೆವಲ್ಪಮೆಂಟ್ ಅಂಡ್ ಕಲ್ಚರಲ್ ಟ್ರಸ್ಟಿನ ನಿರ್ದೇಶಕ ಡಾ.ನಯಾಜ್ ಖಾನ್ ಹುಟ್ಟುಹಬ್ಬದ ಪ್ರಯುಕ್ತ ನೋಟ್ ಬುಕ್ ಹಾಗೂ ಲೇಖನ ಸಾಮಗ್ರಿ ವಿತರಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಪೋಷಕರಿಗೆ ನಂಬಿಕೆ ಇಲ್ಲದೇ ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ. ಸಂಘ ಸಂಸ್ಥೆಗಳು ಎನ್‌ಜಿಒಗಳು ಮೂಲ ಸವಲತ್ತುಗಳನ್ನು ಕಲ್ಪಿಸುತ್ತಿದ್ದರೂ ಶಿಕ್ಷಕರ ಕೊರತೆಯನ್ನು ಸರ್ಕಾರ ಶೀಘ್ರವಾಗಿ ಪರಿಹಾರ ಮಾಡಬೇಕು ಎಂದರು.

ಜೇನುಗೂಡು ಟ್ರಸ್ಟಿನಿಂದ ಜನತಾ ಕಾಲೋನಿ ಕನ್ನಡ ಶಾಲೆ, ಉರ್ದುಶಾಲೆ ಹಾಗೂ ಬೆಟ್ಟಹಳ್ಳಿ ಶಾಲೆಯನ್ನು ದತ್ತು ಪಡೆದಿದ್ದು, ಕಂಪನಿಗಳ ಸಿಎಸ್‌ಅರ್ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಟ್ರಸ್ಟಿನ ಸಹಯೋಗದಲ್ಲಿ ನೋಟ್ ಬುಕ್, ಲೇಖನ ಸಾಮಗ್ರಿ ವಿತರಣೆ ಮಾಡಲಾಗುತ್ತಿದೆ. ಪೋಷಕರು ಸರ್ಕಾರಿ ಶಾಲೆಗಳಲ್ಲಿ ಸಿಗುವ ಉಚಿತ ಸವಲತ್ತುಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.

ಟ್ರಸ್ಟಿನ ಹಿರಿಯ ನಿರ್ದೇಶಕ ಬಿ.ಶ್ರೀನಿವಾಸ್ ಮಾತನಾಡಿ, ಟ್ರಸ್ಟಿನ ವತಿಯಿಂದ ಉಚಿತವಾಗಿ ಟ್ರಾಕ್ ಸೂಟ್ ನೀಡಲಾಗುತ್ತಿದೆ. ಶಾಸಕ ಶರತ್ ಬಚ್ಚೇಗೌಡ ಸಹಕಾರದಲ್ಲಿ ವಾಟರ್ ಪಿಲ್ಟರ್ ಹಾಕಿಸಿಕೊಡಲಾಗಿದೆ. ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ವಿ.ಸತೀಶಗೌಡರ ಸಹಕಾರದಲ್ಲಿ ಶಾಲಾ ಬ್ಯಾಗ್, ತಟ್ಟೆ ಲೋಟ ವಿತರಣೆ ಮಾಡಿದ್ದೇವೆ. ಬೆಟ್ಟಹಳ್ಳಿ ಸರ್ಕಾರಿ ಶಾಲೆಯನ್ನು ಸಿಎಸ್‌ಅರ್ ಅನುದಾನದಲ್ಲಿ ಅಭಿವೃದ್ದಿ ಮಾಡಲಾಗಿದೆ ಎಂದರು.

ಈ ವೇಳೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ವೆಂಕಟೇಶ್, ಹಿರಿಯ ನಿರ್ದೇಶಕ ಬಿ.ಶ್ರೀನಿವಾಸ್, ಮುಖ್ಯಶಿಕ್ಷಕ ರಾಮಕೃಷ್ಣಪ್ಪ, ಯಶೋಧಮ್ಮ, ತಬುಸಮ್, ರಾಮಕೃಷ್ಣಯ್ಯ, ಟ್ರಸ್ಟಿನ ನಿರ್ದೇಶಕರಾದ ಸೈಯದ್ ಮಹಬೂಬ್, ನಯಾಜ್ ಖಾನ್, ಜಿಯಾವುಲ್ಲಾ, ಬೆಟ್ಟಹಳ್ಳಿ ಗೋಪಿನಾಥ್, ಕುರುಗಲ್ ಕಾಂತರಾಜ್ ಉರ್ದು ಶಾಲೆಯ ತಸ್ಮಿಯಾ, ಶೈಲಜಾ ಇತರರಿದ್ದರು.

(ಫೋಟೋ ಕ್ಯಾಫ್ಞನ್‌)

ಸೂಲಿಬೆಲೆ ಜನತಾ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಜೇನುಗೂಡು ಟ್ರಸ್ಟ್ ನಿರ್ದೇಶಕ ಡಾ.ನಯಾಜ್ ಖಾನ್ ಹುಟ್ಟುಹಬ್ಬದ ಪ್ರಯುಕ್ತ ನೋಟ್ ಬುಕ್, ಲೇಖನ ಸಾಮಗ್ರಿ ವಿತರಣೆ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೊಯ್ಸಳರ ಪರಂಪರೆ ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ ಲತಾಕುಮಾರಿ
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ನಿರ್ಲಕ್ಷ್ಯ ಬೇಡ: ಜಿಲ್ಲಾಧಿಕಾರಿ ಲತಾಕುಮಾರಿ